ಸೊನ್ನಲಿಗೆ ಸಿದ್ಧರಾಮನ ದರ್ಶನಕ್ಕೆ ಭಕ್ತ ಸಾಗರ
Team Udayavani, Aug 14, 2018, 10:30 AM IST
ಸೊಲ್ಲಾಪುರ: ಶ್ರಾವಣ ಮಾಸದ ಮೊದಲ ಸೋಮವಾರ ಸೊನ್ನಲಿಗೆ ಶರಣ ಶಿವಯೋಗಿ ಸಿದ್ಧರಾಮನ ದರ್ಶನಕ್ಕೆ ಮಹಾರಾಷ್ಟ್ರ ಸೇರಿದಂತೆ ಕರ್ನಾಟಕ, ತೆಲಾಂಗಣದ ಭಕ್ತ ಸಾಗರವೇ ಹರಿದು ಬಂದಿತ್ತು. ಸೊಲ್ಲಾಪುರದ ಗ್ರಾಮ ದೇವರು ಶ್ರೀ ಸಿದ್ಧರಾಮೇಶ್ವರ ಮಂದಿರದಲ್ಲಿ ಶ್ರಾವಣ ಮಾಸದ ದರ್ಶನಕ್ಕಾಗಿ ಮಂದಿರದಲ್ಲಿ ನಸುಕಿನ ಜಾವದಲ್ಲಿಯೇ ಹೆಣ್ಣು ಮಕ್ಕಳು ಸಾಲು ಸಾಲಾಗಿ ನೆರದಿದ್ದರು. ಭಕ್ತಿ-ಶಕ್ತಿ ಜಾಗೃತವಾಗುವ ಈ ತಿಂಗಳಲ್ಲಿ ಮೊದಲ ಸೋಮವಾರದಂದು ಸಿದ್ಧರಾಮನಿಗೆ ಎಲೆ ಪೂಜೆ ಮಾಡಲಾಯಿತ್ತು. ಬೆಳಗ್ಗೆ ಕಾಕಡಾರತಿ, ಸಿದ್ಧರಾಮೇಶ್ವರ ಮೂರ್ತಿಗೆ ರುದ್ರಾಭಿಷೇಕ ಮಾಡುವ ಮೂಲಕ ಶ್ರಾವಣ ಮಾಸದ ಕಾರ್ಯಕ್ರಮಗಳು ಆರಂಭವಾದವು.
ಶರಣ ಸಿದ್ಧರಾಮರ ಯೋಗ ಸಮಾಧಿಗೆ ಬಣ್ಣ-ಬಣ್ಣದ ಹೂವಿನ ಅಲಂಕಾರ ಮಾಡಲಾಗಿತ್ತು. ನಂತರ ಯೋಗ ಸಮಾಧಿಗೆ ರುದ್ರಾಭಿಷೇಕ, ಮಂತ್ರ ಘೋಷಣೆ, ಸಹಸ್ರ ಬಿಲ್ವಾರ್ಚನೆ, ಮಹಾಆರುತಿ ನೆರವೇರಿತು. ತದನಂತರ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಹೀಗೆ ಮೂರು ಬಾರಿ ಮಹಾಆರುತಿ ಮಾಡಲಾಯಿತು. ಇಡೀ ದಿನ ಮಂದಿರದಲ್ಲಿ ಪಾರಾಯಣ, ಶಿವಪಾಠ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಗರ ಸೇರಿದಂತೆ ದೂರದ ಭಕ್ತರು ಕಾಲ್ನಡಿಗೆಯಿಂದ ಮಂದಿರಕ್ಕೆ ಬರುತ್ತಿದ್ದರು.
ಸಿದ್ಧೇಶ್ವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಮಹಾಪ್ರಸಾದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.
ಸಿದ್ಧರಾಮನ ಆರಾಧ್ಯ ದೈವ ಬಾಳಿವೇಸ್ದಲ್ಲಿರುವ ಮಲ್ಲಿಕಾರ್ಜುನ ಮಂದಿರದಲ್ಲಿಯೂ ರುದ್ರಾಭಿಷೇಕ, ಮಹಾಆರುತಿ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಿಜಯಪುರ ರಸ್ತೆಯಲ್ಲಿರುವ ರೇವಣಸಿದ್ಧೇಶ್ವರ ಮಂದಿರದಲ್ಲಿಯೂ ವಿವಿಧ ಧಾರ್ಮಿಕ ಕಾರ್ಯಕ್ರಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ