ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ
Team Udayavani, Nov 12, 2019, 11:56 AM IST
ಕಲಬುರಗಿ: ಬರುವ ಜನೇವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತಾಗಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ಪೂರ್ವ ಸಿದ್ಧತಾ ಸಭೆ ನಡೆಯಿತು.
ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ ನೇತೃತ್ವ ಹಾಗೂ ಜಿಲ್ಲಾಧಿಕಾರಿ ಬಿ. ಶರತ್ ಅಧ್ಯಕ್ಷತೆಯಲ್ಲಿ ಸಭೆ ನಡೆದು ಸಮ್ಮೇಳನ ಜನವರಿ ಮಾಸಾಂತ್ಯ ಇಲ್ಲವೇ ಫೆಬ್ರವರಿ ತಿಂಗಳಿನ ಮೊದಲು ವಾರದಲ್ಲಿ ನಡೆಸುವ, ಸ್ಥಳ ಆಯ್ಕೆ ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.
33 ವರ್ಷಗಳ ನಂತರ ಕಲ್ಯಾಣ ಕರ್ನಾಟಕ ಕಲಬುರಗಿಯಲ್ಲಿ ಕನ್ನಡದ ತೇರು ಎಳೆಯಲು ಉತ್ಸುಕತೆ ಹೊಂದಿರುವುದಾಗಿ ಹಿರಿಯ ಸಾಹಿತಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾಹಿತ್ಯಾಸಕ್ತರು ಸಲಹೆ ನೀಡಿದರು.
ಸಭೆಯಲ್ಲಿ ಕರ್ನಾಟಕ ಕೇಂದ್ರೀಯ ವಿವಿಯ ಕುಲಪತಿ ಪ್ರೊ. ಎಚ್.ಎಂ. ಮಹೇಶ್ವರಯ್ಯ, ಜಿಲ್ಲಾ ಪಂಚಾಯತ್ ಸಿಇಓ ಡಾ. ಪಿ.ರಾಜಾ, ಹೆಚ್ಚುವರಿ ಡಿಸಿ ಶಂಕ್ರಣ್ಣ ವಣಿಕ್ಯಾಳ, ಕೇಂದ್ರ ಕಸಾಪ ಸಮಿತಿಯ ನಾರಾಯಣ, ಕಲಬುರಗಿ ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ, ಹಿರಿಯ ಸಾಹಿತಿಗಳಾದ ಪ್ರೊ. ವಸಂತ ಕುಷ್ಠಗಿ, ಡಾ.ಪಿ.ಎಸ್. ಶಂಕರ, ಸ್ವಾಮಿರಾವ ಕುಲಕರ್ಣಿ, ಲಿಂಗರಾಜ ಶಾಸ್ತ್ರೀ, ವೀರಣ್ಣ ದಂಡೆ, ಮಹಿಪಾಲರೆಡ್ಡಿ ಮುನ್ನೂರ, ವಿಜಯಕುಮಾರ್ ತೇಗಲತಿಪ್ಪಿ, ಬಾಲ ಜಯಚಂದ್ರ ಶೆಟ್ಟಿ, ಪ್ರಕಾಶಕ ಬಸವರಾಜ್ ಕೊನೆಕ್ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು