ಮರಳು ತುಂಬಿದ ಲಾರಿ ಟಿಪ್ಪರ್ ಹಾಯ್ದು ಬಾಲಕ ಸಾವು: ಟಿಪ್ಪರ್ಗೆ ಬೆಂಕಿ
Team Udayavani, Mar 28, 2022, 10:05 AM IST
ಕಲಬುರಗಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ವೊಂದು ನಗರದ ಬಿದ್ದಾಪುರ ಬಡಾವಣೆಯ ಪ್ಲೈ ಓವರ್ ಬಳಿ ಬಾಲಕನ ಮೇಲೆ ಹಾಯ್ದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ. ಘಟನೆಯಿಂದ ರೊಚ್ಚಿಗೆದ್ದ ಜನರು ಟಿಪ್ಪರ್ ಗೆ ಬೆಂಕಿ ಇಟ್ಟು, ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ.
ನಗರದ ಬಿದ್ದಾಪುರ ಬಡಾವಣೆಯ ಪ್ರಕೃತಿ ಕಾಲೋನಿ ನಿವಾಸಿ ಮನೀಷ್ ಮಲ್ಲಿಕಾರ್ಜುನ ಹರವಾಳಕರ್ (8) ಅಪಘಾತದಲ್ಲಿ ಮೃತಪಟ್ಟ ಬಾಲಕ.
ಈತ ತನ್ನ ತಾಯಿ ಮತ್ತು ಚಿಕ್ಕಮ್ಮನೊಂದಿಗೆ ಟೈಲರ್ ಅಂಗಡಿಗೆ ಹೋಗುವ ಸಂದರ್ಭದಲ್ಲಿ ರಸ್ತೆ ದಾಟುವಾಗ ಫ್ಲೈ ಓವರ್ ಮೇಲೆ ಹೈಕೋರ್ಟ್ ಕಡೆಯಿಂದ ಬಂದ ಮರಳು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಾಲಕನಿಗೆ ಢಿಕ್ಕಿ ಹೊಡೆದಿದೆ.
ಟಿಪ್ಪರ್ ಚಕ್ರ ಬಾಲಕನ ಮೇಲೆ ಹರಿದಿದ್ದರಿಂದ ದೇಹ ನಜ್ಜುಗುಜ್ಜಾಗಿದೆ. ಕಣ್ಣೆದುರಿಗೆ ಹೆತ್ತ ಮಗ ಪ್ರಾಣ ಬಿಟ್ಟಿದ್ದನ್ನು ಕಂಡು ಪೋಷಕರು ಆಘಾತಕ್ಕೊಳಗಾದರು. ಅವರ ಆಕ್ರಂದನ ಮುಗಿಲು ಮುಟ್ಟಿತ್ತು.
ಘಟನೆ ಸಂಭವಿಸುತ್ತಲೇ ಸುತ್ತಲಿನ ಜನರು ಜಮಾವಣೆಯಾಗಿ ಚಾಲಕನನ್ನು ಹಿಡಿದು ಥಳಿಸಲು ಮುಂದಾದರು. ಈ ವೇಳೆಗೆ ಆತ ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ. ಹೆಚ್ಚಿನ ಜನರು ಜಮಾವಣೆಯಾಗಿ ಪ್ರತಿಭಟನೆ ಆರಂಭಿಸಿದರು. ಪೊಲೀಸರು ನಿರ್ಲಕ್ಷ್ಯ ಮಾಡುತ್ತಿದ್ದಾರೆ, ಟಿಪ್ಪರ್ಗಳಿಗೆ ಕಡಿವಾಣ ಹಾಕುತ್ತಿಲ್ಲ ಎಂದು ರೊಚ್ಚಿಗೆದ್ದ ಜನರು ಟಿಪ್ಪರ್ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬೆಳ್ಳಾರೆ ಆಸ್ಪತ್ರೆ ತೆರೆದಿದ್ದರೂ ಕಾಣಿಸದ ವೈದ್ಯರು, ಸಿಬಂದಿ!
ಬಿದ್ದಾಪುರ ಕಾಲೋನಿಯ ಪ್ಲೈ ಓವರ್ ಸುತ್ತಮುತ್ತ ಹಲವು ಶಾಲೆಗಳಿಗೆ ನಿತ್ಯ ಮಕ್ಕಳು ಓಡಾಡುತ್ತಿರುತ್ತಾರೆ. ಮನೆಯಿಂದ ಆಚೆ ಹೋಗಬೇಕಾದರೆ ಫ್ಲೈ ಓವರ್ ರಸ್ತೆ ದಾಟಿಕೊಂಡು ಹೋಗಬೇಕು. ಈ ವೇಳೆ ಮೇಲಿಂದ ವೇಗವಾಗಿ ವಾಹನಗಳು ಬರುವುದರಿಂದ ಅವಘಡಗಳು ಮೇಲಿಂದ ಮೇಲೆ ಸಂಭವಿಸುತ್ತಿವೆ. ಅಲ್ಲದೇ ಪಾದಚಾರಿಗಳಿಗೆ ಪರ್ಯಾಯ ವ್ಯವಸ್ಥೆ ಇಲ್ಲದಿರುವುದೇ ಇಂತಹ ಘಟನೆಗಳಿಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪರಿಸ್ಥಿತಿಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಜನರನ್ನು ಸಮಧಾನಗೊಳಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಮ್ಸ್ ಗೆ ಸಾಗಿಸಿದರು. ಡಿಸಿಪಿಗಳಾದ ಅಡ್ಮೂರು ಶ್ರೀನಿವಾಸುಲು, ಶ್ರೀಕಾಂತ ಕಟ್ಟಿಮನಿ, ಎಸಿಪಿಗಳಾದ ಸುಧಾ ಆದಿ, ಗಿರೀಶ್ ಎಸ್.ಬಿ, ಇನ್ಸ್ಪೆಕ್ಟರ್ಗಳಾದ ಅಮರೇಶ, ಪಂಡಿತ ಸಗರ, ಸಿದ್ದರಾಮೇಶ, ಶಾಂತಿನಾಥ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಂಚಾರ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ