ಸಂಕ್ರಾಂತಿ ಬದಲಾವಣೆ ಪರ್ವ: ಕುಷ್ಟಗಿ
Team Udayavani, Jan 14, 2019, 6:50 AM IST
ಕಲಬುರಗಿ: ಸಂಕ್ರಾಂತಿ ಕೇವಲ ಹಬ್ಬವಲ್ಲ. ಬದಲಿಗೆ, ಅನೇಕ ಮೌಲ್ಯಗಳನ್ನು ಸಾರುವ ವಾಹಕವಾಗಿದೆ. ಸೂರ್ಯ ತನ್ನ ದಿಕ್ಕನ್ನು ಬದಲಿಸುವ ಮೂಲಕ ಪ್ರಕೃತಿಯಲ್ಲಿ ಬದಲಾವಣೆ ಆಗುವುದರ ಜೊತೆಗೆ ಮಾನವನು ಬದುಕಿನ ಬದಲಾವಣೆಗೆ ನಾಂದಿ ಹಾಡುತ್ತಾನೆ ಎಂದು ಹಿರಿಯ ಸಾಹಿತಿ ಪ್ರೊ| ವಸಂತ ಕುಷ್ಟಗಿ ಹೇಳಿದರು.
ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗ, ಸ್ವಾಮಿ ರಮಾನಂದ ತೀರ್ಥ ಸಂಶೋಧನಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಜಗತ್ ವೃತ್ತದ ಬಳಿಯಿರುವ ಸಂಸ್ಥೆಯ ಕಚೇರಿಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಹಾಗೂ ಕವಿಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಸಂಸ್ಕೃತಿ, ಪರಂಪರೆ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ. ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಮಾಡದೇ ನಮ್ಮದೇ ಆದ ಭವ್ಯ ಪರಂಪರೆ ಉಳಿಸಿಕೊಂಡು ಹೋಗುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ. ಈ ನಿಟ್ಟಿನಲ್ಲಿ ಹಬ್ಬಗಳು ತನ್ನದೇ ಆದ ಮಹತ್ವ ಪಡೆದಿವೆ. ಇಂತಹ ಹಬ್ಬಗಳ ಮೇರು ಸಂದೇಶವನ್ನು ವಿಶ್ವಸಂಸ್ಥೆಗೆ ಮುಟ್ಟಿಸುವ ಕಾರ್ಯವಾಗಬೇಕಾಗಿದೆ ಎಂದರು.
ಬಳಗದ ಅಧ್ಯಕ್ಷ, ಚಿಂತಕ ಎಚ್.ಬಿ. ಪಾಟೀಲ, ಸ್ವಾಮಿ ರಮಾನಂದ ತೀರ್ಥ ಸಂಶೋಧನಾ ಸಂಸ್ಥೆ ವಿಶ್ವಸ್ಥ ಮಂಡಳಿ ಕಾರ್ಯದರ್ಶಿ ಕೈಲಾಸನಾಥ ದೀಕ್ಷಿತ ಮಾತನಾಡಿದರು.
ಕವಿಗಳಾದ ಡಾ.ಸವಿತಾ ಸಿಡಿೋರ್ಜಿ, ಬಸವರಾಜ ಚಿನ್ನ ಸಂಕ್ರಾಂತಿ ಹಬ್ಬದ ಕುರಿತು ಸ್ವರಚಿತ ಕವಿತೆ ಪ್ರಸ್ತುತಪಡಿಸಿದರು. ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾದ ದೇಗಾಂವ, ಕಾರ್ಯದರ್ಶಿ ರಾಜಶೇಖರ ಮರಡಿ, ಸಹ ಸಂಚಾಲಕ ಅಮರನಾಥ ಶಿವಮೂರ್ತಿ, ಸದಸ್ಯರಾದ ಶಿವಕುಮಾರ ತಿಮಾಜಿ, ಸೋಮಶೇಖರ ಮೂಲಗೆ, ಬಸವರಾಜ ಪುರಾಣಿಕ ವೀರೇಶ ನಾವದಗಿ, ಪ್ರಕಾಶ ನಾಗರಾಳ, ಬಸವರಾಜ ಮಳ್ಳಿ, ಕೇಂದ್ರದ ಕಾರ್ಯಕರ್ತ ಶಿವಕುಮಾರ ಫುಲಾರಿ ಹಾಗೂ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್