ಸಾಂಕೇತಿಕವಾಗಿ ನೆರವೇರಿದ ಶರಣಬಸವೇಶ್ವರ ಉಚ್ಛಾಯ
ಕೆಲವೇ ಭಕ್ತರ ಉಪಸ್ಥಿತಿಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಉಚ್ಚಾಯಿ ನೆರವೇರಿತು.
Team Udayavani, Apr 2, 2021, 5:38 PM IST
ಕಲಬುರಗಿ: ಕೊರೊನಾ ಹಿನ್ನೆಲೆಯಲ್ಲಿ ಇಲ್ಲಿನ ಐತಿಹಾಸಿಕ, ಮಹಾದಾಸೋಹಿ ಶರಣಬಸವೇಶ್ವರರ 199ನೇ ಜಾತ್ರಾ ಮಹೋತ್ಸವದ ಉಚ್ಛಾಯ ಕಾರ್ಯಕ್ರಮ ಗುರುವಾರ ಸರಳ ಹಾಗೂ ಸಾಂಕೇತಿಕವಾಗಿ ಜರುಗಿತು.
ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ಎಂಟನೇ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ಸಾನ್ನಿಧ್ಯ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಪರ್ಸನ್ರಾದ ಪೂಜ್ಯ ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವ ಸಮ್ಮುಖದಲ್ಲಿ ಶರಣಬಸವೇಶ್ವರ 199ನೇ ಯಾತ್ರಾ ಮಹೋತ್ಸವ, ಉಚ್ಚಾಯಿ ಕಾರ್ಯಕ್ರಮ ಗುರುವಾರ ಮಧ್ಯಾಹ್ನ ನೆರವೇರಿತು.ಡಾ| ಶರಣಬಸವಪ್ಪ ಅಪ್ಪ ಅವರು ಉಚ್ಚಾಯಿಗೆ ಚಾಲನೆ ನೀಡಿದರು.
ರಥೋತ್ಸವ, ಉಚ್ಛಾಯಿಗೆ ಮನೆಯಲ್ಲಿದ್ದುಕೊಂಡೇ ಶರಣರ ಕೃಪೆಗೆ ಪಾತ್ರರಾಗಬೇಕೆಂದು ಡಾ| ಅಪ್ಪ ಕೋರಿದ್ದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರಲಿಲ್ಲ. ಹೀಗಾಗಿ ಕೆಲವೇ ಭಕ್ತರ ಉಪಸ್ಥಿತಿಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಉಚ್ಚಾಯಿ ನೆರವೇರಿತು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮುಂತಾದವರು ಪಾಲ್ಗೊಂಡಿದ್ದರು.
ಏಪ್ರಿಲ್ 2ರಂದು ನಡೆಯುವ ಶರಣಬಸವೇಶ್ವರ ರಥೋತ್ಸವದಂದು ಭಕ್ತರೆಲ್ಲರೂ ತಮ್ಮ ಮನೆಗಳಲ್ಲಿದ್ದುಕೊಂಡೆ ಶರಬಸವೇಶ್ವರರ ಕೃಪೆಗೆ ಪಾತ್ರರಾಗಬೇಕು. ಹೆಚ್ಚುತ್ತಿರುವ ಕೊರೊನಾ ತಡೆಗಟ್ಟಲು ಸರಕಾರ ಹಾಗೂ ಜಿಲ್ಲಾಡಳಿತ ಹೊರಡಿಸಿದ ಹೊಸ ಮಾರ್ಗಸೂಚಿ, ಸ್ಟ್ಯಾಂಡರ್ಡ್ ಆಫ್ ಆಪರೇಷನ್ ಪ್ರೊಸಿಜರ್ಸ್ (ಎಸ್ಒಪಿ) ಗಮನದಲ್ಲಿಟ್ಟುಕೊಂಡು ಜಾತ್ರಾ ಮಹೋತ್ಸವ ಮತ್ತು ಇತರ ಕಾರ್ಯಗಳಲ್ಲಿ ಭಕ್ತರು ಪಾಲ್ಗೊಳ್ಳುವುದನ್ನು ಮೊಟಕುಗೊಳಿಸಿದೆ.
ಡಾ| ಶರಣಬಸವಪ್ಪ ಅಪ್ಪ, ಪೀಠಾಧಿಪತಿ, ಶರಣಬಸವೇಶ್ವರ ಮಹಾ ದಾಸೋಹ ಸಂಸ್ಥಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
Kamalapur: ಜಾತಿ ನಿಂದನೆ ಕೇಸ್ಗೆ ಹೆದರಿ ಯುವಕ ಆತ್ಮಹತ್ಯೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ