ಎಸ್‌ಬಿಆರ್‌ ಜ್ಞಾನ ದೇಗುಲವಾಗಿ ಬೆಳೆಯಲಿ


Team Udayavani, Nov 13, 2018, 11:04 AM IST

gul-3.jpg

ಕಲಬುರಗಿ: ಕಳೆದ 50 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿರುವ ಶರಣಬಸವೇಶ್ವರ ವಸತಿ ಶಾಲೆ ಜ್ಞಾನ ದೇಗುಲವಾಗಿ ಬೆಳೆಯಲಿ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್‌.ಎಂ. ಮಹೇಶ್ವರಯ್ಯ ಆಶಯ
ವ್ಯಕ್ತಪಡಿಸಿದರು.

ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ವಸತಿ ಶಾಲೆ (ಎಸ್‌ಬಿಆರ್‌) ಸುವರ್ಣ ಮಹೋತ್ಸವ ಹಾಗೂ ಶಾಲೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉತ್ಸವದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು
ಮಾತನಾಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಶರಣಬಸವೇಶ್ವರ ವಸತಿ ಶಾಲೆಯನ್ನು ನೋಡಿದರೆ ಹೆಮ್ಮೆ ಎನಿಸುತ್ತದೆ. ಕಳೆದ 50 ವರ್ಷಗಳಲ್ಲಿ ಎಸ್‌ಬಿಆರ್‌ ಸಂಸ್ಥೆ ದೊಡ್ಡ ಸಾಧನೆ ಮಾಡಿದೆ. ಈ ಸಂಸ್ಥೆ ಬೆಳೆದು ಬಂದ ದಾರಿ ಮತ್ತು ಇಂದಿನ ಸುವರ್ಣ ಮಹೋತ್ಸವ ನನ್ನಲ್ಲಿ ರೋಮಾಂಚನ ಉಂಟು ಮಾಡಿದೆ. ಶರಣಬಸವೇಶ್ವರ ದೇವಸ್ಥಾನದಂತೆ ಎಸ್‌ಬಿಆರ್‌ ಶಾಲೆ ಜ್ಞಾನ ದೇಗುಲವಾಗಿ ಶಿಖರಕ್ಕೆ
ಬೆಳೆಯಲಿ ಎಂದು ಹೇಳಿದರು.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಗುಣಮಟ್ಟದ ಶಿಕ್ಷಣ, ನುರಿತ ಶಿಕ್ಷಕ ವರ್ಗ ಹಾಗೂ ಹೊಸ ಆಲೋಚನೆ ಪಠ್ಯ ಕ್ರಮದಿಂದಾಗಿ ಎಸ್‌ ಬಿಆರ್‌ ಸಂಸ್ಥೆ ಶ್ರೇಷ್ಠ ಮಟ್ಟಕ್ಕೆ ಬೆಳೆದಿದೆ. ನೂರರ ಸಂಭ್ರಮವನ್ನು ಆಚರಿಸಲಿ ಎಂದ ಅವರು, ಡಾ| ಶರಣಬಸವಪ್ಪ ಅಪ್ಪ ಅವರು ಈಗ ವಿಶ್ವವಿದ್ಯಾಲಯ ಸ್ಥಾಪನೆ ಮಾಡಿದ್ದಾರೆ. ಎಸ್‌ಬಿಆರ್‌ ಶಾಲೆಯಂತೆ ಶ್ರೇಷ್ಠ ಉಪನ್ಯಾಸಕರ ಮೂಲಕ ವಿಶ್ವವಿದ್ಯಾಲಯ
ಶ್ರೇಷ್ಠ ಮಟ್ಟಕ್ಕೆ ಬೆಳೆಯಲಿ. ವಿಶ್ವವಿದ್ಯಾಲಯ ವಿಶ್ವ ಮಟ್ಟದಲ್ಲಿ ಬೆಳೆಸಬೇಕು ಎಂಬ ಅಪ್ಪ ಕಂಡಿರುವ ಕನಸ್ಸು, ಆಲೋಚನೆ ಮತ್ತು ಅವರಲ್ಲಿನ ಉತ್ಸಾಹ ನಿಜಕ್ಕೂ ಮಾದರಿ ಎಂದು ಹೇಳಿದರು.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಅನಿಲಕುಮಾರ ಬಿಡವೆ ಮಾತನಾಡಿ, ಎಸ್‌ಬಿಆರ್‌ ಶಾಲೆ ಗುಟ್ಟಮಟ್ಟದ ಶಿಕ್ಷಣದ ಮೂಲಕ ಪ್ರಸಿದ್ಧಿ ಪಡೆದಿದೆ. ವಿದ್ಯಾರ್ಥಿಗಳಿಗೆ ಯಾವ ರೀತಿಯ ಗುಣ ಮಟ್ಟದ ಶಿಕ್ಷಣ ನೀಡಬೇಕು ಎಂಬುದನ್ನು ಎಸ್‌ಬಿಆರ್‌
ಶಾಲೆ ಮೂಲಕ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಶರಣಬಸವಪ್ಪ ಅಪ್ಪ ಮತ್ತು ಶಾಲೆ ಪ್ರಾಂಶುಪಾಲರಾದ ಎನ್‌.ಎಸ್‌.ದೇವರಕಲ್‌ ಅವರು ತೋರಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ತೀರ ಕಡಿಮೆ ಇದೆ. ತಮಿಳುನಾಡಿನಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ.

ಆದರೆ, ರಾಜ್ಯದಲ್ಲಿ ಕೇವಲ ಶೇ.18ರಷ್ಟು ವಿದ್ಯಾರ್ಥಿಗಳು ಮಾತ್ರವೇ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ವಿಶೇಷ ಎಂದರೆ ಎಸ್‌ಬಿಆರ್‌
ಸಂಸ್ಥೆಯಲ್ಲಿ ಕಲಿತ ಶೇ.85ರಷ್ಟು ವಿದ್ಯಾರ್ಥಿಗಳು ಸ್ನಾತಕೋತರ ಮಟ್ಟದಲ್ಲಿ ಓದುತ್ತಿದ್ದಾರೆ. ಇದಕ್ಕೆ ಎಸ್‌ಬಿಆರ್‌ನಲ್ಲಿ ಸಿಗುತ್ತಿರುವ ಗುಣ ಮಟ್ಟದ ಶಿಕ್ಷಣವೇ ಕಾರಣ ಎಂದು ಹೇಳಿದರು. 

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿವಿ ಕುಲಪತಿ ಡಾ| ನಿರಂಜನ ನಿಷ್ಠಿ, ಶರಣಬಸವ ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ| ಶಿವದತ್ತ ಹೊನ್ನಳ್ಳಿ, ಎಸ್‌ಬಿಆರ್‌ ಪ್ರಾಚಾರ್ಯ ಎನ್‌.ಎಸ್‌. ದೇವರಕಲ್‌,
ಎಸ್‌ಬಿಆರ್‌ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ| ಭರತ ಕೋಣಿನ್‌, ಪ್ರಧಾನ ಕಾರ್ಯದರ್ಶಿ ದಿನೇಶ ಪಾಟೀಲ, ಸಂಘದ ಪೋಷಕ ಸದಸ್ಯ ದೊಡ್ಡಪ್ಪ ನಿಷ್ಠಿ, ಸಂತೋಷ ಬಿಲಗುಂದಿ ಇದ್ದರು.

ಶಿಕ್ಷಣಕ್ಕೆ ಮಠಗಳ ಕೊಡುಗೆ ಹೆಚ್ಚು ರಾಜ್ಯದಲ್ಲಿ 50 ವರ್ಷಗಳ ಹಿಂದೆ ಕಡಿಮೆ ಶಿಕ್ಷಣ ಸಂಸ್ಥೆಗಳು ಇದ್ದವು. ಇಂತಹ ಸಂದರ್ಭದಲ್ಲಿ ಶರಣಬಸವೇಶ್ವರ ಸಂಸ್ಥಾನ, ತುಮಕೂರು ಮಠ, ಸುತ್ತೂರು ಮಠ ಹಾಗೂ ಧಾರವಾಡದ ಮುರುಘಾ ಮಠಗಳು ಅನ್ನ ದಾಸೋಹದೊಂದಿಗೆ ಜ್ಞಾನ ದಾಸೋಹ ಆರಂಭಿಸಿದವು. ಇದರಿಂದಾಗಿ ರಾಜ್ಯದಲ್ಲಿ ಸರ್ಕಾರಕ್ಕಿಂತ ಮಠಗಳು ಶೈಕ್ಷಣಿಕ
ಮಟ್ಟ ಹೆಚ್ಚಿಸಲು ದೊಡ್ಡ ಕೊಡುಗೆ ನೀಡಿದವು. 
ಪ್ರೊ| ಎಚ್‌.ಎಂ. ಮಹೇಶ್ವರಯ್ಯ, ಕುಲಪತಿ, ಕೇಂದ್ರೀಯ ವಿಶ್ವವಿದ್ಯಾಲಯ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.