ಶಾಲಾ ಕಟ್ಟಡ ನನೆಗುದಿಗೆ: ಮರದ ಕೆಳಗೇ ಪಾಠ

ಕೋಣೆಯೊಳಗೆ ಕಾಲಿಡಲು ಶಿಕ್ಷಕರು-ವಿದ್ಯಾರ್ಥಿಗಳಿಗೆ ಭಯ

Team Udayavani, Jun 18, 2019, 2:35 PM IST

kalburgi-tdy-4..

ವಾಡಿ: ಕುಲಕುಂದಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಮರದ ಕೆಳಗೆ ಪಾಠ ಕೇಳುತ್ತಿದ್ದಾರೆ.

ವಾಡಿ: ಚಿತ್ತಾಪುರ ತಾಲೂಕು ನಾಲವಾರ ವಲಯದ ಭೀಮಾ ತಡದಲ್ಲಿರುವ ಕುಲಕುಂದಾ ಎಂಬ ಈ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಕಳೆದ ಐದಾರು ವರ್ಷಗಳಿಂದ ಮರದ ಕೆಳಗೆ ಪಾಠ ಕೇಳುತ್ತಿದ್ದಾರೆ!

ಮಳೆ ನೀರಿನ ಸೋರಿಕೆಯಿಂದಾಗಿ ತರಗತಿ ಕೋಣೆಗಳೆಲ್ಲ ಕೊಳೆತಂತೆ ಕಾಣಿಸುತ್ತವೆ. ಗೋಡೆಗಳು ಅಡ್ಡಾದಿಡ್ಡಿ ಬಿರುಕು ಬಿಟ್ಟು ಎತ್ತೆತ್ತಲೋ ವಾಲಿ ನಿಂತಿವೆ. ಶಾಲೆಯೊಳಗೆ ಕಾಲಿಡಲು ಮಕ್ಕಳು ಮತ್ತು ಶಿಕ್ಷಕರು ಭಯಪಡುತ್ತಾರೆ. ಶಿಥಿಲ ಶಾಲಾ ಕಟ್ಟದ ಮುಂದೆ ಇರುವ ಆಲದ ಮರಗಳ ಕೆಳಗೆ ಏಳು ತರಗತಿಗಳು ನಡೆಯುತ್ತಿವೆ. ಗಾಳಿ ಮಳೆ ಶುರುವಾದರೆ ಪಕ್ಕದ ದೇವಸ್ಥಾನದ ಗೋಡೆಗಳ ಆಸರೆ ಪಡೆಯಬೇಕು. ಮಳೆ ನಿಲ್ಲುವ ಲಕ್ಷಣ ಕಾಣದಿದ್ದರೆ ಮಕ್ಕಳೆಲ್ಲ ಮನೆ ಸೇರಿಕೊಳ್ಳುತ್ತಾರೆ. ಬೆಳಗ್ಗೆ ಮೋಡಗಳು ಕಾಣಿಸಿಕೊಂಡರೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಇಂತಹ ಬಯಲು ವಾತಾವರಣದಲ್ಲಿ ಅಸುರಕ್ಷಿತ ಸ್ಥಳದಲ್ಲಿ ಶಾಲೆ ನಡೆಯುತ್ತಿದ್ದು, ಸಿಎಂ ಎಚ್‌ಡಿಕೆ ಇಲ್ಲಿ ವಾಸ್ತವ್ಯಕ್ಕೆ ಬರುವುದು ಬೇಡ. ಕನಿಷ್ಠ ಪಕ್ಷ ಮಕ್ಕಳ ದುಸ್ಥಿತಿ ನೋಡಲಾದರೂ ಬರಲಿ ಎಂಬುದು ಗ್ರಾಮಸ್ಥರ ಮನವಿ.

ಶಿಕ್ಷಕರ ಸಂಖ್ಯೆ ಮತ್ತು ಮಕ್ಕಳ ಹಾಜರಾತಿ ಸಮಸ್ಯೆಯೇ ಈ ಶಾಲೆಯಲ್ಲಿಲ್ಲ. ಇರುವ ಪ್ರಮುಖ ಸಮಸ್ಯೆ ಎಂದರೆ ಅದು ಶಾಲಾ ಕಟ್ಟಡದ್ದು. ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ವಿವಾದದಲ್ಲಿದ್ದ ಹಳೆ ಶಾಲಾ ಕಟ್ಟಡದ ಜಾಗವನ್ನು ವಾರಸುದಾರರು ಕಳೆದ ವರ್ಷವೇ ಶಿಕ್ಷಣ ಇಲಾಖೆಗೆ ದಾನವಾಗಿ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರೆಮ್ಮ ಢವಳಗಿ ಅವರು ನೂತನ ಶಾಲಾ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ವರ್ಷ ಕಳೆದಿದೆ. ಕಟ್ಟಡ ಮಾತ್ರ ತಳಪಾಯ ಬಿಟ್ಟು ಮೇಲೇಳುತ್ತಿಲ್ಲ. ಕಿರಿಯ ಅಭಿಯಂತರ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ಕಳಪೆಮಟ್ಟಕ್ಕೆ ಜಾರಿದೆ. ಅಲ್ಲದೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಮಕ್ಕಳು ಪಾಟಿ ಚೀಲದೊಂದಿಗೆ ಬಯಲಿಗೆ ಬಿದ್ದಿದ್ದಾರೆ. ಮರದ ಆಸರೆಗೆ ಮತ್ತು ದೇವರ ಗುಡಿಯೊಳಗೆ ಕುಳಿತು ಅಭ್ಯಾಸ ನಡೆಸುತ್ತಿದ್ದಾರೆ. ಹೊಸ ಕಟ್ಟಡ ನಿರ್ಮಾಣಕ್ಕೆ ವೇಗದ ಗತಿ ನೀಡಬೇಕು. ತಾತ್ಕಾಲಿಕವಾಗಿ ಮಕ್ಕಳಿಗೆ ಟೆಂಟ್ ಶಾಲೆಯನ್ನಾದರೂ ನಿರ್ಮಿಸಬೇಕು ಎಂದು ಗ್ರಾಮದ ಮಂಜುನಾಥ ಪೂಜಾರಿ, ಮುತ್ತುರಾಜ ಹೊಸಮನಿ, ಮಲ್ಲಪ್ಪ ದ್ಯಾವಪ್ಪನೋರ, ಈರಪ್ಪ ಪೂಜಾರಿ, ಮಾರುತಿ ಹೊಸಮನಿ ಆಗ್ರಹಿಸಿದ್ದಾರೆ.

 

•ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.