ನೌಕರರ ಬಡ್ತಿ ಅನ್ಯಾಯ ಸರಿಪಡಿಸಲು ಆಗ್ರಹ
Team Udayavani, Jan 13, 2017, 12:09 PM IST
ಕಲಬುರಗಿ: ಹೈ.ಕ.ಭಾಗದ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರಿಗೆ 371(ಜೆ) ಕಲಂ ಅಡಿ ಬಡ್ತಿಯಲ್ಲಿ ಆಗುತ್ತಿರುವ ತಾರತಮ್ಯ ನಿವಾರಿಸಬೇಕೆಂದು ಒತ್ತಾಯಿಸಿ ಹೈ.ಕ.ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಹೈ. ಕ.ಭಾಗದ ಅಸಮಾನತೆ ನಿವಾರಣೆಗಾಗಿ ಜಾರಿಗೆ ತಂದ 371(ಜೆ)ನೇ ಕಲಂ ಅಡಿ ನೌಕರರ ಬಡ್ತಿಯ ಸಮಯದಲ್ಲಿ ಅನುಸರಿಸಬಹುದಾದ ಮಾರ್ಗದರ್ಶಕ ಸೂಚಿಗಳನ್ನು ಅನುಸರಿಸಿಲ್ಲ ಎಂದರು.
ರಾಜ್ಯ ವೃಂದ ಮತ್ತು ಸ್ಥಳೀಯ ವೃಂದದ ಜೇಷ್ಠತಾ ಪಟ್ಟಿಯನ್ನು ಏಕಕಾಲದಲ್ಲಿ ಚಾಲ್ತಿಯಲ್ಲಿಟ್ಟು ಪ್ರತಿಸಲ ನೀಡುವ ಬಡ್ತಿ ಪ್ರಕ್ರಿಯೆ ಸಂದರ್ಭದಲ್ಲಿ ಐಚ್ಛಿಕ ಆಯ್ಕೆಗೆ ಅವಕಾಶ ಕಲ್ಪಿಸುವಂತೆ, ರೋಸ್ಟರ್ ಬಿಂದುವಿಗೆ ಅನುಗುಣವಾಗಿ ಬಡ್ತಿಗೆ ಕೆಸಿಎಸ್ಆರ್ ನಿಯಮದಂತೆ ಬಡ್ತಿಗೆ ಪರಿಗಣಿಸಿ ರಾಜ್ಯವೃಂದದಲ್ಲಿ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು.
ಹೈ.ಕ.ಭಾಗದವರಿಗೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಬಡ್ತಿಗೆ ಅರ್ಹವಾಗಿರುವ ಹುದ್ದೆಗಳಲ್ಲಿ ಶೇ.8 ರಷ್ಟು ಮೀಸಲಾತಿ ನೀಡುವಂತೆ, ಈ ವಿಷಯಕ್ಕೆ ಸಂಬಂಧಪಟ್ಟಂತೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಆದೇಶಕ್ಕೆ ಸಚಿವ ಸಂಪುಟ ನಿರ್ಣಯದೊಂದಿಗೆ ತಿದ್ದುಪಡಿ ತರಲು ಆಗ್ರಹಿಸಿದರು.
ಶಾಸಕ ಅಮರನಾಥ ಪಾಟೀಲ, ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ, ಗೌರವಾಧ್ಯಕ್ಷ ರಾಜು ಲೆಂಗಟಿ, ವಿವೇಕಾನಂದ ಕುಲಕರ್ಣಿ, ಜಿಲ್ಲಾಧ್ಯಕ್ಷ ವಿ.ಎಸ್.ಕಟ್ಟಿಮನಿ, ಜಗನ್ನಾಥ ಊಟಗಿ, ಮಲ್ಲಪ್ಪ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ