ಲಾಟರಿ ಮೂಲಕ ರೈತ ಫಲಾನುಭವಿಗಳ ಆಯ್ಕೆ
Team Udayavani, Sep 29, 2018, 2:41 PM IST
ಅಫಜಲಪುರ: 2018-19ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಫಲಾನುಭವಿ ರೈತರನ್ನು ಶಾಸಕ ಎಂ.ವೈ. ಪಾಟೀಲ ಅದ್ಯಕ್ಷತೆಯಲ್ಲಿ ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ತಾಪಂ ಸಭಾಂಗಣದಲ್ಲಿ ನಡೆದ ಲಾಟರಿ ಪ್ರಕ್ರಿಯೆಯಲ್ಲಿ ತಾಲೂಕಿನ ವಿವಿಧ ಹಳ್ಳಿಗಳ ರೈತರು ಭಾಗವಹಿಸಿದ್ದರು. ಈ ವೇಳೆ ಶಾಸಕ ಎಂ.ವೈ. ಪಾಟೀಲ ಮಾತನಾಡಿ, ತೋಟಗಾರಿಕೆ ಇಲಾಖೆಯಲ್ಲಿ ರೈತರಿಗೆ ಅನುಕೂಲವಾಗುವ ಸಾಕಷ್ಟು ಯೋಜನೆಗಳಿವೆ. ರೈತರು ಈ ಯೋಜನೆಗಳ ಸದುಪಯೋಗ ಪಡೆಯಬೇಕು. ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಲಾಟರಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದರು.
ತೋಟಗಾರಿಕಾ ಕ್ಷೇತ್ರ ಹೆಚ್ಚಳಕ್ಕಾಗಿ ಕ್ರಮ ಕೈಗೊಳ್ಳುತ್ತೇನೆ. ತೋಟಗಾರಿಕಾ ಸಚಿವರೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ
ತಂದು ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಸಹಾಯಕ ತೋಟಗಾರಿಕಾ ಇಲಾಖೆ ನಿರ್ದೇಶಕ ಶಂಕರಗೌಡ ಪಾಟೀಲ ಮಾತನಾಡಿ, ಮಿನಿ ಟ್ರ್ಯಾಕ್ಟರ್, ಈರುಳ್ಳಿ ಶೇಖರಣಾ ಘಟಕ, ಕೃಷಿ ಹೊಂಡ, ಸಮುದಾಯ ಕೆರೆ, ನೆರಳು ಪರದೆ, ಪಾಲಿ ಹೌಸ್, ಬಾಳೆ ಸೇರಿದಂತೆ ಅನೇಕ ತೋಟಗಾರಿಕೆ ಸೌಲಭ್ಯಗಳಿಗಾಗಿ ರೈತರು ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದರು. 335 ರೈತರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ ಶಾಸಕರ ನೇತೃತ್ವದಲ್ಲಿ 42 ರೈತರನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ, ಉಳಿದ ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಹಾಯ ಮಾಡಲಾಗುತ್ತದೆ ಎಂದರು.
ಜಿ.ಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ ಮಾತನಾಡಿ, ತಾಲೂಕಿನಲ್ಲಿ ಕಡಿಮೆ ಕ್ಷೇತ್ರದಲ್ಲಿ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತದೆ. ತೋಟಗಾರಿಕೆ ಬೆಳೆಗಳ ಉತ್ತೇಜನಕ್ಕೆ ಇಲಾಖೆ ಮತ್ತು ಸಂಬಂಧ ಪಟ್ಟವರು ಹೆಚ್ಚಿನ ಒತ್ತು ಕೊಡಬೇಕೆಂದು ಹೇಳಿದರು. ತಾ.ಪಂ ಅದ್ಯಕ್ಷೆ ರುಕ್ಮಿಣಿ ಜಮದಾರ, ಡಿಆರ್ಡಿಎ ಶಾಖೆ ಕಲಬುರಗಿಯ ಯೋಜನಾ ನಿರ್ದೇಶಕ ಸೂರ್ಯಕಾಂತ ದಂಡಗುಂಡ, ಅಫಜಲಪುರ ತೋಟಗಾರಿಕಾ ಇಲಾಖೆ ಸಿಬ್ಬಂದಿ ಮತ್ತು ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ