ಸಕಲ ಕ್ಷೇತ್ರದಲ್ಲೂ ಸ್ವಾವಲಂಬಿಯಾಗಿ
Team Udayavani, Mar 10, 2022, 12:02 PM IST
ಶಹಾಬಾದ: ಸಾಮಾಜಿಕ, ಆರ್ಥಿಕ, ರಾಜಕೀಯ ಪ್ರತಿಯೊಂದು ಕ್ಷೇತ್ರಗಳಲ್ಲಿ ಸಹಭಾಗಿತ್ವ ಪಡೆದು ಮಹಿಳೆಯರು ಸ್ವಾಲಂಬಿಗಳಾಬೇಕು. ಸ್ಥಾನ ಕೊಡುವುದಲ್ಲ ಅದನ್ನು ಪಡೆಯುವ ಕೆಲಸ ನಮ್ಮದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.
ಬುಧವಾರ ನಗರಸಭೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಚುನಾಯಿತ ಮಹಿಳಾ ಸದಸ್ಯರಿಗೆ, ನಾಮನಿರ್ದೇಶಿತ ಸದಸ್ಯರಿಗೆ, ಮಹಿಳಾ ಪೌರಕಾರ್ಮಿಕರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರಿಗೆ ಸರ್ಕಾರ ಶೇ. 33ರಷ್ಟು ವಿವಿಧ ಕ್ಷೇತ್ರಗಳಲ್ಲಿ ಅವಕಾಶಗಳನ್ನು ನೀಡಿದೆ. ಇದರ ಸರಿಯಾದ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿಯೊಂದನ್ನು ಎದುರಿಸುವ ಶಕ್ತಿ ನಮ್ಮಲ್ಲಿದೆ. ಇದಕ್ಕಾಗಿ ಗುರಿಯೊಂದಿಗೆ ಪ್ರಯತ್ನ ಮಾಡಬೇಕು. ಲಿಂಗ ತಾರತಮ್ಯ ದೂರ ಮಾಡಿ ಮಹಿಳೆಯರಿಗೆ ಹೆಚ್ಚಿನ ಮಹತ್ವ ನೀಡಿದಾಗ ಅವರು ಸಬಲರಾಗುತ್ತಾರೆ ಎಂದು ಹೇಳಿದರು.
ನಗರಸಭೆ ಪೌರಾಯುಕ್ತ ಡಾ| ಕೆ.ಗುರಲಿಂಗಪ್ಪ ಮಾತನಾಡಿ, ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಾಗಿರದೇ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಅದ್ಭುತವಾದ ಛಾಪು ಮೂಡಿಸಿದ್ದಾರೆ. ಮಹಿಳೆಯರು ಸಮಾಜದ ನಿಜವಾದ ಸೃಷ್ಟಿಕರ್ತರು. ಈ ಸೃಷ್ಟಿಯಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ ಎಂದರು.
ನಗರಸಭೆ ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ, ಎಇಇ ಶರಣು ಪೂಜಾರಿ, ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಸದಸ್ಯೆ ಲತಾ ಸಂಜೀವಕುಮಾರ, ಎಇಇ ಮುಜಾಮಿಲ್ ಅಲಂ, ನಾರಾಯಣರೆಡ್ಡಿ, ರಘುನಾಥ ನರಸಾಳೆ, ಶಿವರಾಜಕುಮಾರ ಜಟ್ಟೂರ್, ಮುತ್ತಣ್ಣ ಭಂಡಾರಿ, ಶಬಾನಾಬೇಗಂ, ಮಮತಾ ಗುತ್ತೇದಾರ, ಶಂಕರ ವಾಗ್ಮೋರೆ, ಶಾಂತಪ್ಪ ಹಡಪದ, ಮಹಾನಂದ, ಭಾಗ್ಯಶ್ರೀ ಹಾಗೂ ನಗರಸಭೆ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ