ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ: ಹೂಗಾರ
Team Udayavani, Mar 16, 2022, 1:25 PM IST
ಅಫಜಲಪುರ: ಪಟ್ಟಣದಲ್ಲಿರುವ ಅನೇಕ ಗೊಬ್ಬರ ಮಾರಾಟ ಅಂಗಡಿಗಳಲ್ಲಿ ಎಂಆರ್ಪಿ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ ಆರೋಪಿಸಿದರು.
ಪಟ್ಟಣದ ಕೃಷಿ ಇಲಾಖೆಯಲ್ಲಿ ಎಡಿ ಎಸ್.ಎಚ್. ಗಡಗಿಮನಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಗೊಬ್ಬರದ ಅಂಗಡಿಗಳಲ್ಲಿ ದರಪಟ್ಟಿ ಹಾಕುತ್ತಿಲ್ಲ, 1200ರೂ. ಇರುವ ಗೊಬ್ಬರಕ್ಕೆ 1500ರೂ. ತೆಗೆದುಕೊಳ್ಳುತ್ತಿದ್ದಾರೆ. ಮೂಲ ಬೆಲೆಗಿಂತ ಒಂದು ಚೀಲಕ್ಕೆ 300ರೂ.ನಂತೆ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ. ಇದರಿಂದ ರೈತರ ಜೇಬಿಗೆ ಕತ್ತರಿ ಬೀಳುತ್ತಿದೆ. ಕೂಡಲೇ ತಾವು ಎಂಆರ್ಪಿಗಿಂತ ಹೆಚ್ಚು ಹಣ ಪಡೆಯುತ್ತಿರುವ ಗೊಬ್ಬರ ಅಂಗಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬರುವ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಸಿದರು.
ಭಾಗಣ್ಣ ಕುಂಬಾರ, ಸಿದ್ಧಪ್ಪ ಡಾಂಗೆ, ಮಹಾದೇವಪ್ಪ ಸೇರಿಕಾರ, ಬಸವರಾಜ, ಗುಣ್ಣ, ಪರೇಪ್ಪ, ಲಕ್ಷ್ಮೀಪುತ್ರ ಮನವಿ, ಮಲ್ಲು ಬಳೂರ್ಗಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ