ಲೈಂಗಿಕತೆ ಅರಿವು ಹೊಂದುವುದು ಅಗತ್ಯ: ಸೋಮೇಶ್ವರ


Team Udayavani, Nov 27, 2018, 11:09 AM IST

untitled-1.jpg

ಕಲಬುರಗಿ: ಕಾಮವನ್ನು ಒಂದು ಶಾಸ್ತ್ರದಂತೆ ಅಭ್ಯಾಸ ಮಾಡಬೇಕು. ಆಗ ಲೈಂಗಿಕತೆ ಬಗ್ಗೆ ಇರುವ ಅನುಮಾನಗಳನ್ನು ದೂರ ಮಾಡಬಹುದು ಎಂದು ಖ್ಯಾತ ವೈದ್ಯ ನಾ. ಸೋಮೆಶ್ವರ ಹೇಳಿದರು. ನಗರದ ಸರ್ಕಾರಿ ಸ್ವಾಯತ್ತ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್‌, ವಿಕಾಸ ಅಕಾಡೆಮಿ ಹಾಗೂ ಸರ್ಕಾರಿ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಲೈಂಗಿಕ ಸ್ವತ್ಛತಾ ಆಪ್ತ ಸಮಾಲೋಚನೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲೈಂಗಿಕತೆಯನ್ನು ಮಡಿವಂತಿಕೆ ವಿಚಾರದಿಂದ ಬೇರ್ಪಡಿಸಿ ನೋಡಿದಾಗ ಮಾತ್ರ ಅದರ ಕುರಿತು ಸ್ಪಷ್ಟ ಅರಿವು ಹೊಂದಬಹುದು. ಅದಕ್ಕಾಗಿ ಔಪಚಾರಿಕವಾಗಿ ಶಿಕ್ಷಣ ಕೊಡುವ ಪದ್ಧತಿ ಬರಬೇಕು ಎಂದು ಹೇಳಿದರು.
 
ಲೈಂಗಿಕ ವಿಷಯದ ಕುರಿತು ನಮ್ಮ ಜನರಲ್ಲಿ ತಿಳಿವಳಿಕೆ ಇಲ್ಲ. ಅದು ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕ್ರಿಯೆ. ಅದರ ಬಗ್ಗೆ ಬಹಿರಂಗವಾಗಿ ಚರ್ಚೆಯಾದರೆ, ಸಮಾಜ ಮಾತನಾಡುವವರ ಬಗ್ಗೆ ಕೀಳಾಗಿ ಕಾಣಲು ಆರಂಭಿಸುತ್ತದೆ. ಈ ವ್ಯವಸ್ಥೆ ಬದಲಾಗಿ ಹೊಸ ಪದ್ಧತಿ ಜಾರಿಗೆ ಬರಬೇಕು ಎಂದು ಹೇಳಿದರು.

ಮಕ್ಕಳಿಗೆ ಬಾಲ್ಯದಲ್ಲಿಯೇ ಜನನಾಂಗ ಸ್ವತ್ಛತೆಗಳ ಬಗ್ಗೆ ಪಾಲಕರು ಹೇಳಿ ಕೊಡಬೇಕು. ಹೀಗೆ ಹೇಳಿ ಕೊಟ್ಟರೆ ಅವರು ಮುಂದೆ ಬರುವ ಮಾರಕ ರೋಗಗಳಿಂದ ದೂರವಿದ್ದು ಉತ್ತಮ ಆರೋಗ್ಯ ಪಡೆಯಬಹುದು ಎಂದು ಸಲಹೆ ನೀಡಿದರು. 

ಪ್ರಾಸ್ತಾವಿಕ ಮಾತನಾಡಿದ ಡಾ| ಎಸ್‌. ಎಸ್‌. ಹಿರೇಮಠ, ಉತ್ತರ ಭಾರತದಲ್ಲಿ ಹೆಚ್ಚಾಗಿ ಲೈಂಗಿಕತೆ ಅರಿವು ಇಲ್ಲದೇ ಇರುವುದರಿಂದ ಏಡ್ಸನಂತಹ ಮಾರಕ ರೋಗಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಅಲ್ಲಿ ಹೆಣ್ಣನ್ನು ಲೈಂಗಿಕ ಬೊಂಬೆ ಎಂದು ಭಾವಿಸಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರದ ಮಟ್ಟದಲ್ಲಿ ಅಶ್ಲೀಲ ವೆಬ್‌ಸೈಟ್‌ ನಿಷೇಧವಾಗಿದ್ದರೂ ಭಾರತದಲ್ಲಿ ಇನ್ನೂ 820 ವೆಬ್‌ಸೈಟ್‌ಗಳು ಕಾರ್ಯನಿರತವಾಗಿವೆ. ಪ್ರತಿನಿತ್ಯ 150 ಮಿಲಿಯನ್‌ ಜನ ಅವುಗಳನ್ನು ವೀಕ್ಷಣೆ ಮಾಡುತ್ತಾರೆ ಎಂದು ಇತ್ತೀಚಿಗೆ ವರದಿಗಳು ಬಹಿರಂಗಪಡಿಸಿವೆ ಎಂದು
ಹೇಳಿದರು.

ತರಬೇತಿ ಆರಂಭಕ್ಕೂ ಮುನ್ನ ಅಗಲಿದ ಚೇತನಗಳಾದ ಡಾ| ಅಂಬರೀಶ, ಸಿ. ಕೆ.ಜಾಫರ್‌ ಷರೀಫ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಎಸ್‌. ಎಸ್‌. ಗುಬ್ಬಿ, ಡಾ| ವೀಣಾ ವಿಕ್ರಮ ಸಿದ್ದಾರೆಡ್ಡಿ, ಉಮೇಶ ಶೆಟ್ಟಿ , ಡಾ| ಶಶಿಶೇಖರ ರೆಡ್ಡಿ ಭಾಗವಹಿಸಿದ್ದರು. ನಾಗರಾಜ ಕುಲಕರ್ಣಿ ಸ್ವಾಗತಿಸಿದರು. ಡಾ| ಮಂಜುನಾಥ ರೆಡ್ಡಿ ನಿರೂಪಿಸಿದರು. ಕಾಲೇಜಿನ ಪ್ರಭಾರಿ ಡಾ| ಟಿ. ಗುರುಬಸಪ್ಪ ಅಧ್ಯಕ್ಷತೆ ವಹಿಸಿದ್ದರು. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.