ದೇಶದ ಹಿತದೃಷ್ಟಿಯಿಂದ ಪೌರತ್ವ ಕಾಯ್ದೆ ಜಾರಿ

ಕಾಂಗ್ರೆಸ್‌ನಿಂದ ಕೀಳು ಮಟ್ಟದ ರಾಜಕೀಯ ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ ಕೈ ಮುಖಂಡರು

Team Udayavani, Jan 25, 2020, 10:41 AM IST

25-January-1

ಶಹಾಬಾದ: ಪೌರತ್ವ ಕಾಯ್ದೆ ಮೂಲಕ ದೇಶದ ಅಲ್ಪಸಂಖ್ಯಾತ ಸಮುದಾಯದವರನ್ನು ದೇಶದಿಂದ ಹೊರಹಾಕಲಾಗುತ್ತಿದೆ ಎಂದು ಕಾಂಗ್ರೆಸ್‌ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.

ಶುಕ್ರವಾರ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಕಲಬುರಗಿ ಗ್ರಾಮೀಣ ಬಿಜೆಪಿ ಮಂಡಲ, ಶಹಾಬಾದ ಬಿಜೆಪಿ ಮಂಡಲದ ನೂತನ ಅಧ್ಯಕ್ಷರ ಪದಗ್ರಹಣ, ಸನ್ಮಾನ ಕಾರ್ಯಕ್ರಮ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಆಯೋಜಿಸಲಾಗಿದ್ದ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಪೌರತ್ವ ಕಾಯ್ದೆ ಜಾರಿಗೆ ತಂದಿದ್ದಾರೆ. ಆದರೆ ಕಾಂಗ್ರೆಸ್‌ನವರು ಮುಸ್ಲಿಂ ಸಮುದಾಯವನ್ನು ಎತ್ತಿ ಕಟ್ಟಿ, ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಪಾದಿಸಿದರು. ಕಲಬುರಗಿ ನಗರದಲ್ಲಿ ನಾಗರಿಕ ಹೋರಾಟ ಸಮಿತಿ
ವತಿಯಿಂದ ಕಾಯ್ದೆ ಬೆಂಬಲಿಸಿ ಲಕ್ಷಾಂತರ ಜನರು ಬೃಹತ್‌ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಆದರೆ ಕಾಂಗ್ರೆಸ್‌ ಪಕ್ಷ ಅಧಿಕಾರ ಕಳೆದುಕೊಂಡು ಹತಾಶವಾಗಿ ಅಲ್ಪಸಂಖ್ಯಾತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಮುಖಂಡ ಸುಭಾಷ ಬಿರಾದಾರ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಶಶಿಕಲಾ ಟೆಂಗಳಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಕಲಬುರಗಿ ಗ್ರಾಮೀಣ ನೂತನ ಅಧ್ಯಕ್ಷ ಸಂಗಮೇಶ ವಾಲಿ, ಶಹಾಬಾದ ಮಂಡಲದ ನೂತನ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಅವರನ್ನು ಸನ್ಮಾನಿಸಲಾಯಿತು.

ಆಳಂದ ಶಾಸಕ ಸುಭಾಷ ಗುತ್ತೇದಾರ, ಮುಖಂಡರಾದ ರವಿ ಬಿರಾದಾರ, ದಿವ್ಯ ಹಾಗರಗಿ, ರೇವಣಸಿದ್ದಪ್ಪ ಮೂಲಗೆ, ರಾಜಕುಮಾರ ಕೋಟೆ, ಲಿಂಗರಾಜ ಬಿರಾದಾರ, ಶಶಿಕಲಾ ಟೆಂಗಳಿ, ವಿಜಯಲಕ್ಷ್ಮೀ ರಾಗಿ, ನರೇಂದ್ರ ವರ್ಮಾ, ಸುಭಾಷ ಜಾಪುರ, ಅನೀಲ ಬೋರಗಾಂವಕರ್‌, ಅರುಣ ಪಟ್ಟಣಕರ್‌, ಅಶೋಕ ಜಿಂಗಾಡೆ, ನಿಂಗಣ್ಣ ಹುಳಗೋಳಕರ್‌, ಹರ್ಷವರ್ಧನ ಕೋಗಲೆ, ಅಣೆಪ್ಪ ಇಂಗಿನಶೆಟ್ಟಿ, ಭಾಗಿರಥಿ ಗುನ್ನಾಪುರ, ಸಿದ್ದಣ್ಣಗೌಡ ಮಾಲಿ ಪಾಟೀಲ, ಅರವಿಂದ ಚವ್ಹಾಣ, ರವಿ ರಾಠೊಡ, ಬಸವರಾಜ ಬಿರಾದಾರ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.