ಹದಗೆಟ್ಟ ಸಮುದಾಯ ಆರೋಗ್ಯ ಕೇಂದ್ರ


Team Udayavani, Jan 26, 2019, 8:24 AM IST

26-january-13.jpg

ಶಹಾಬಾದ: ಗಬ್ಬು ನಾರುವ ವಾತಾವರಣ, ಎಲ್ಲಿ ನೋಡಿದಲ್ಲಿ ಗುಟಕಾ ಕಲೆ, ಮನಸ್ಸಿಗೆ ಬಂದಾಗ ಬರುವ ಸಿಬ್ಬಂದಿ ಇವೆಲ್ಲವನ್ನು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಇವೆಲ್ಲವನ್ನು ಕಂಡ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಗೌಡ ಪಾಟೀಲ, ಕಾಂಗ್ರೆಸ್‌ ಮುಖಂಡ ವಿಜಯಕುಮಾರ ರಾಮಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 18 ವರ್ಷಗಳಿಂದ ಈ ಆಸ್ಪತ್ರೆ ವೈದ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಪಿ.ಎಂ. ಸಜ್ಜನ್‌ ಇದರ ಉಸ್ತುವಾರಿ. ಆಸ್ಪತ್ರೆಯ ಈ ಅವ್ಯವಸ್ಥೆ ಕಂಡು ವೈದ್ಯಾಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಶರಣಗೌಡ ಪಾಟೀಲ ಹಾಗೂ ವಿಜಯಕುಮಾರ ರಾಮಕೃಷ್ಣ ಇದೆನಾ ನೀವು ಮಾಡುವ ಕೆಲಸದ ವೈಖರಿ ಎಂದು ಪ್ರಶ್ನಿಸಿದರು.

ಸಿಬ್ಬಂದಿ ಮೇಲೆ ಹಿಡಿತವಿಲ್ಲ. ಪಾರ್ಮಾಸಿಸ್ಟ್‌ ಯಾರು ಎಂದು ಕೇಳಿದ್ದಕ್ಕೆ ಡೆಪ್ಟೇಶನ್‌ ಮೇಲೆ ಹೋಗಿದ್ದಾರೆ ಎನ್ನುತ್ತಿರಿ. ಇನ್ನೊಬ್ಬರು ರಜೆ ಮೇಲೆ ಹೋಗಿದ್ದಾರೆ ಎರಡು ದಿನದ ಮೇಲೆ ಬಂದಿದ್ದಾರೆ ಎನ್ನುತ್ತಿರಿ. ಯಾಕೆ ಎಂದು ಕೇಳಿದರೆ ಡಿಎಚ್ಒ ಆದೇಶದ ಪ್ರಕಾರ ನಡೆದುಕೊಂಡಿದ್ದೇನೆ ಎನ್ನುತ್ತಿರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶರಣು ಪಗಲಾಪುರ, ನಗರಸಭೆ ಸದಸ್ಯ ಶಿವರಾಜ ಕೋರೆ ಅವರು ಎರಡು ದಿನಗಳ ಹಿಂದಷ್ಟೇ ಚುನ್ನಾಭಟ್ಟಿ ಪ್ರದೇಶದ ಶರಣಪ್ಪ ಎನ್ನುವರನ್ನು ಆಸ್ಪತ್ರೆಗೆ ತಂದಾಗ ವೈದ್ಯರೇ ಇರಲಿಲ್ಲ. ಕರೆ ಮಾಡಿದರೂ ಒಬ್ಬರೂ ಬರಲಿಲ್ಲ. ಇದರಿಂದ ಜೀವ ಹೋಯಿತು. ಇದಕ್ಕೆ ಯಾರು ಹೊಣೆ? ವೈದ್ಯಾಧಿಕಾರಿಗಳು ತಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸುತ್ತಿಲ್ಲ. ಹೊರಗೆ ಖಾಸಗಿ ಕ್ಲಿನಿಕ್‌ ನಡೆಸುತ್ತಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿದರು. ಸ್ಟಾಕ್‌ ರಿಜಿಸ್ಟರ್‌ ನೀಡುವಂತೆ ಕೇಳಿದಾಗ ವೈದ್ಯಾಧಿಕಾರಿಗಳು ನಿರುತ್ತರವಾಗಿದ್ದರು. ನಂತರ ಶರಣಗೌಡ ಪಾಟೀಲ ಅವರು ಆಸ್ಪತ್ರೆಯಲ್ಲಿ ಒಂದು ಸುತ್ತು ಹಾಕಿದರು. ಆಗ ಕುಡಿಯುವ ನೀರಿನ ಶುದ್ಧೀಕರಣ ಯಂತ್ರಕ್ಕೆ ಶೌಚಾಲಯದ ನಳಕ್ಕೆ ಸಂಪರ್ಕ ನೀಡಿದ್ದನ್ನು ಕಂಡು ಚಕಿತರಾದರು. ಇದನ್ನು ನೋಡಿದರೆ ನಿಮಗೆ ನಾಚಿಕೆ ಬರುವುದಿಲ್ಲವೇ? ಇದೇ ನೀರು ರೋಗಿಗಳಿಗೆ ಕುಡಿಸಿದರೆ ಏನು ಗತಿ ಎಂದು ಪ್ರಶ್ನಿಸಿದರು. ಅಲ್ಲದೇ ಇನ್ನೊಂದು ಕುಡಿಯುವ ನೀರಿನ ಶುದ್ಧೀಕರಣ ಘಟಕ ಎರಡು ವರ್ಷದಿಂದ ಧೂಳು ಹಿಡಿದುಬಿದ್ದಿದ್ದನ್ನು ಗಮನಿಸಿ ಕೆಂಡಾಮಂಡಲವಾದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಶೀದ ಮರ್ಚಂಟ್, ನಗರಸಭೆ ಸದಸ್ಯರಾದ ಸೂರ್ಯಕಾಂತ ಕೋಬಾಳ, ಡಾ| ಅಹ್ಮದ್‌ ಪಟೇಲ, ಇನಾಯತ್‌ಖಾನ್‌ ಜಮಾದಾರ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಬಸಪ್ಪ ಪಗಲಾಪುರ, ನಗರಸಭೆ ಮಾಜಿ ಸದಸ್ಯರಾದ ಅನ್ವರ್‌ ಪಾಶಾ, ಶಿವರಾಜ ಕೋರೆ, ಸಯ್ಯದ್‌ ಜಹೀರ, ಡಾ| ಆಂಜನೇಯ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.