ಶಹಾಬಾದ: ವ್ಯಾಪಾರ-ವಹಿವಾಟು ಸುಗಮ
Team Udayavani, Nov 10, 2019, 11:58 AM IST
ಶಹಾಬಾದ: ಐತಿಹಾಸಿಕ ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು. ಆದರೆ, ನಗರದಲ್ಲಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ನಮಗೆ ಯಾವುದೇ ಸಂಬಂಧವಿಲ್ಲದಂತೆ ವ್ಯಾಪಾರ, ವಹಿವಾಟಿನಲ್ಲಿ ತಲ್ಲೀನರಾಗಿದ್ದರು.
ಪೊಲೀಸ್ ಇಲಾಖೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದರು. ಅಯೋಧ್ಯದ ತೀಪು ಹೊರಬಿಳುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7ಗಂಟೆಗೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳು ನಗರದ ಮುಖ್ಯ ಭಾಗಗಳಲ್ಲಿ ಪಥಸಂಚಲನ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದರು.
ಅಲ್ಲದೇ ಆಟೋದಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ನ.9ರಿಂದ 11ವರೆಗೆ ಸಿಆರ್ಪಿಸಿ ಕಲಂ 144 ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಯಿತು. ಈ ಅವಧಿಯಲ್ಲಿ ಪಟಾಕಿ, ಸಿಡಿಮದ್ದು ಉಪಯೋಗ, ಮಾರಾಟ ಹಾಗೂ ಸಾಗಾಟ, ಮೆರವಣಿಗೆ, ಬೈಕ್ ರ್ಯಾಲಿ, ವಾಹನಗಳಲ್ಲಿ ಧ್ವನಿ ವರ್ಧಕ ಬಳಕೆ, ಗುಂಪು ಸೇರುವುದು ನಿಷೇಧಿಸಲಾಗಿದೆ.
ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ಬಂದು ಮರಳಿ ಮನೆಗೆ ತೆರಳಿದರು. ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ