ಶಾಸಕ ನಾರಾಯಣರಾವ್ ನಿಧನಕ್ಕೆ ಶ್ರದ್ಧಾಂಜಲಿ
Team Udayavani, Sep 25, 2020, 4:57 PM IST
ಕಲಬುರಗಿ: ಅಕಾಲಿಕ ನಿಧನರಾದ ನೆರೆಯ ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರಿಗೆ ನಗರದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷದ ವತಿಯಿಂದ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ್ ಹಾಗೂ ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಅತ್ಯಂತ ಸರಳ ಹಾಗೂ ಸಮಾಜ ಜೀವಿಯಾಗಿದ್ದ ನಾರಾಯಣರಾವ್ ಅವರ ನಿಧನವು ಪಕ್ಷಕ್ಕೆ ಹಾಗೂ ಸಮಾಜಕ್ಕೆ ದೊಡ್ಡ ಹಾನಿಯಾಗಿದೆ ಎಂದರು.
ಮೃತರ ನಿಧನವು ದಿಗ್ಭ್ರಮೆ ಮೂಡಿಸಿದೆ. ಅವರ ನಿಧನವು ಸಹಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲು ಎಂದು ಪ್ರಾರ್ಥಿಸಿದರು. ಶ್ರದ್ಧಾಂಜಲಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಶರಣಪ್ಪ ಮಾನೇಗಾರ ಮಾತನಾಡಿದರು. ಶ್ರದ್ಧಾಂಜಲಿ ಸಭೆಯಲ್ಲಿ
ಮುಖಂಡರಾದ ಭೀಮಣ್ಣ ಸಾಲಿ, ದಿಲೀಪ ಪಾಟೀಲ, ಬಾಬು ಒಂಟಿ, ಹಣಮಂತರಾವ ಜವಳಿ, ಭೀಮಾಶಂಕರ ವತನದಾರ, ಚಂದ್ರಿಕಾ ಪರಮೇಶ್ವರ, ಪರಮೇಶ್ವರ ಖಾನಾಪುರ, ಅಲ್ಲಂಪ್ರಭು ಪಾಟೀಲ್, ಹಣಮಂತರಾವ ಜವಳಿ, ರಮೇಶ ನಾಟೀಕಾರ, ಸಿದ್ದು ಬಾನರ, ವಿಜಯಕುಮಾರ ಹದಗಲ್ ಇದ್ದರು.
ಬಿ.ನಾರಾಯಣರಾವ ಸಾವು ಬರಸಿಡಿಲಿನಂತೆ ಎರಗಿದೆ. ಜನಪರ ಕಾಳಜಿಯೊಂದಿಗೆ ಕೆಲಸ ಮಾಡುತ್ತಿದ್ದರು. ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಪಟ್ಟಿದ್ದರು. ಕೆಳಮಟ್ಟದಿಂದ ಕೆಲಸ ಮಾಡಿಕೊಂಡು ಬಂದು ಶಾಸಕರಾಗಿದ್ದರು. ಇವರ ಅಗಲುವಿಕೆಯಿಂದ ಕ್ಷೇತ್ರಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾಗದ ನಷ್ಟವಾಗಿದೆ. – ಡಾ| ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಸದಸ್ಯ
ಸರಳ ವ್ಯಕ್ತಿತ್ವದ ಹಿರಿಯ ರಾಜಕಾರಣಿಗಳಾದ ಬಸವಕಲ್ಯಾಣದ ಶಾಸಕರಾಗಿದ್ದ ಬಿ.ನಾರಾಯಣ ಅವರು ಅನಿರೀಕ್ಷಿತವಾಗಿ ಮೃತಪಟ್ಟಿರುವುದು ತೀವ್ರ ಆಘಾತ ತಂದಿದೆ. ತಮ್ಮ ತಂದೆ ಧರ್ಮಸಿಂಗ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಮತ್ತು ಆತ್ಮಕ್ಕೆ ಚಿರಶಾಂತಿ ಸಿಗಲಿ. – ಡಾ| ಅಜಯ ಸಿಂಗ್, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!