ಸರಳವಾಗಿ ನೆರವೇರಿದ ಶರಣಬಸವೇಶ್ವರರ ರಥೋತ್ಸವ
Team Udayavani, Apr 2, 2021, 2:57 PM IST
ಕಲಬುರಗಿ: ಐತಿಹಾಸಿಕ ಶರಣಬಸವೇಶ್ವರರ ರಥೋತ್ಸವವು ಶುಕ್ರವಾರ ಮಧ್ಯಾಹ್ನ ಅತ್ಯಂತ ಸರಳ ರೀತಿಯಲ್ಲಿ ನೆರವೇರಿತು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಅನುಸಾರ ಸಾಂಕೇತಿಕವಾಗಿ ಜಾತ್ರೆ ಆಚರಿಸಲಾಯಿತು.
ಪ್ರತಿ ವರ್ಷವೂ ಸಂಜೆ ವೇಳೆ ಸಾವಿರಾರು ಜನರೊಂದಿಗೆ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಆದರೆ, ಕೊರೊನಾ ಹಾವಳಿಯಿಂದಾಗಿ ಕಳೆದ ವರ್ಷದಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ.
ಕಳೆದ ಬಾರಿ ರಥೋತ್ಸವದ ಮುನ್ನವೇ ಕೋವಿಡ್ ನಿಂದ ಮೊದಲ ಸಾವು ಸಂಭವಿಸಿದ ವರದಿಯಾಗಿತ್ತು. ಹೀಗಾಗಿ ಎಲ್ಲ ಸಿದ್ಧತೆಗಳ ನಡುವೆಯೂ ನಿಗದಿತ ಸಮಯಕ್ಕಿಂತ ಮುನ್ನವೇ ರಥೋತ್ಸವ ನೆರವೇರಿತ್ತು.
ಇದನ್ನೂ ಓದಿ:ಯಡಿಯೂರಪ್ಪ ಸಂಪುಟದಲ್ಲಿ ಇನ್ನೂ ದೊಡ್ಡಮಟ್ಟದ ಸ್ಫೋಟವಾಗಲಿದೆ: ಮತ್ತೆ ಕಿಡಿಕಾರಿದ ಯತ್ನಾಳ್
ಈ ವರ್ಷ ಕೋವಿಡ್ ಎರಡನೇ ಅಲೆ ಹರಡುವ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾತ್ರೆ, ಉರುಸ್, ಮೆರವಣಿಗೆಗಳನ್ನು ನಿಷೇಧಿಸಿದೆ. ಅದರಂತೆ ಸಾಂಕೇತಿಕವಾಗಿ ಶರಣಬಸವೇಶ್ವರರ ಥರ ಎಳೆಯುವ ಮೂಲಕ ಉತ್ಸವ ನಡೆಯಿತು. ಪೀಠಾಧಿಪತಿ ಡಾ.ಶರಣಬಸವಪ್ಪ ಅವರು ಶರಣಬಸವೇಶ್ವರರು ಬಳಸುತ್ತಿದ್ದ ಪರುಷ ಬಟ್ಟಲನ್ನು ಭಕ್ತರಿಗೆ ತೋರಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಬೆಳಗ್ಗೆ ದೆವಸ್ಥಾನದಲ್ಲಿ ಧಾರ್ಮಿಕ ವಿಧಿ- ವಿಧಾನಗಳು ಸಾಂಗವಾಗಿ ನೆರವೇರಿದವು. ಭಕ್ತರು ಜಾತ್ರೆ ಮೈದಾನದಲ್ಲಿ ಗುಂಪುಗೂಡದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಮೂರೂ ದಿಕ್ಕುಗಳಲ್ಲಿ ಬ್ಯಾರಿಕೇಡ್ ಇಟ್ಟು ಪ್ರವೇಶ ನಿರ್ಬಂಧಿಸಿದರು.
ಇದನ್ನೂ ಓದಿ: ಕಳ್ಳತನದ ವೇಳೆ ಹೃದಯಾಘಾತ : ಕದ್ದ ಹಣಕ್ಕಿಂತ ಹೆಚ್ಚು ಆಸ್ಪತ್ರೆ ಬಿಲ್ ಕಟ್ಟಿದ ಚೋರರು
ಈ ಬಾರಿ ದೇವಸ್ಥಾನದ ಆವರಣ, ಮುಖ್ಯ ರಸ್ತೆ, ಜಾತ್ರೆ ಮೈದಾನದಲ್ಲಿ ಯಾವುದೇ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಿಲ್ಲ. ಇದರಿಂದ ಸುತ್ತಲಿನ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಗುರುವಾರ ನಡೆದ ಉಚ್ಛಾಯ ರಥೋತ್ಸವವನ್ನೂ ಸರಳವಾಗಿ ಆಚರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್