ಶರಣ ಧರ್ಮವೇ ಶ್ರೇಷ್ಠ ಧರ್ಮ: ಗೊರುಚ
Team Udayavani, Aug 14, 2017, 11:43 AM IST
ಕಲಬುರಗಿ: ಶರಣ ಧರ್ಮವೇ ಶ್ರೇಷ್ಠವಾಗಿದೆ ಎಂದು ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಮಾರ್ಗದರ್ಶಕ ಹಾಗೂ ಶರಣ ಸಾಹಿತಿ ಗೊ.ರು.ಚನ್ನಬಸಪ್ಪ ಹೇಳಿದರು. ನಗರದ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯಪರಿಷತ್ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಪಠ್ಯದ ವಿದ್ಯಾಭ್ಯಾಸದೊಂದಿಗೆ ನಡೆದಂತೆ ನುಡಿದು, ನುಡಿದಂತೆ ಬರೆದ ವಚನ ಸಾಹಿತ್ಯ ಓದಿಕೊಂಡು ದೇಶದಲ್ಲಿರುವ ಸಮಸ್ಯೆಗಳಿಗೆ ವಚನಗಳಿಲ್ಲಿರುವ ಪರಿಹಾರ ತಿಳಿದುಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಬೇಕು ಎಂದರು.
ಉಪನ್ಯಾಸಕರಾಗಿ ಆಗಮಿಸಿದ ಪ್ರೊ| ನಿಂಗಮ್ಮ ಪಂತಗೆ ಮಾತನಾಡಿ, ವಚನಗಳು ಹಾಗೂ ಭಾರತದ ಸಂವಿಧಾನದ ಆಶಯಗಳು ಎಂಬ ವಿಷಯ ಕುರಿತು ಮಾತನಾಡಿ, ಪ್ರತಿಯೊಬ್ಬ ಶರಣ-ಶರಣೆಯರ ವಚನಗಳಲ್ಲಿ ಸಂವಿಧಾನದ ಆಶಯಗಳು ಒಳಗೊಂಡಿರುವುದು ಕಾಣುತ್ತೇವೆ ಎಂದು ಹೇಳಿ, ಅನೇಕ ಪೂರಕ ವಚನ ವಿಶ್ಲೇಷಣೆಗಳೊಂದಿಗೆ ವಿವರಿಸಿದರು. ಸುವರ್ಣಾ ಪೋದ್ದಾರ ಪ್ರಾರ್ಥನಾಗೀತೆ
ಹಾಡಿದರು. ಉಪನ್ಯಾಸಕ ಡಾ| ನಾಗೇಂದ್ರ ಮಸೂತೆ ಸ್ವಾಗತಿಸಿದರು. ಪ್ರೊ| ಕುಪೇಂದ್ರ ಪಾಟೀಲ ಮಾತನಾಡಿದರು. ವೀಣಾ ಎಚ್.
ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ವಿನೋದಕುಮಾರ ಜನೇವರಿ ವಂದಿಸಿದರು. ಧಾರ್ಮಿಕ ಚಿಂತಕ ಶಿವಾನಂದ ಮಠಪತಿ, ತಾಲೂಕು ಕಾರ್ಯದರ್ಶಿ ಶಿವಾನಂದ ಕಶೆಟ್ಟಿ, ಮಹಿಳಾ ಕಾಲೇಜಿನ ಉಪನ್ಯಾಸಕಿ ಶಿವಲೀಲಾ ಧೋತ್ರೆ, ಶರಣಮ್ಮಾ ಕುಪ್ಪೆ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು