ಶರಣಬಸವ ವಿವಿ ವಿಶ್ವದಲ್ಲೇ ವಿಶಿಷ್ಠ ಸ್ಥಾನ ಪಡೆಯಲಿ


Team Udayavani, Jul 30, 2018, 11:20 AM IST

bid-2.jpg

ಕಲಬುರಗಿ: ಕಲ್ಯಾಣ ಕರ್ನಾಟಕದ ನಮ್ಮ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿ ಕಳೆದ ವರ್ಷ ಆರಂಭವಾಗಿರುವ ಶರಣಬಸವ ವಿಶ್ವವಿದ್ಯಾಲಯ ವಿಶ್ವದ ಯಶಸ್ವಿ ಟಾಪ್‌ 100 ವಿವಿಯೊಳಗೆ ಸ್ಥಾನ ಪಡೆದು ಹೊರಹೊಮ್ಮಲಿ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಖಾತೆ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌ ಆಶಯ ವ್ಯಕ್ತಪಡಿಸಿದರು.

ರವಿವಾರ ಶರಣಬಸವ ವಿಶ್ವವಿದ್ಯಾಲಯದ ಪ್ರಥಮ ಸಂಸ್ಥಾಪನಾ ಸಮಾರಂಭ ಉದ್ಘಾಟಿಸಿ, ವಿವಿಯ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಶರಣಬಸವ ಶಿಕ್ಷಣ ಸಂಸ್ಥೆ ಇಡೀ ವಿಶ್ವವೇ ನೋಡುವಂತೆ ಬೆಳೆದಿದೆ. ಇದರ ಹಿಂದೆ ಸಂಸ್ಥೆಯ ಅಧ್ಯಕ್ಷರೂ ವಿವಿಯ ಕುಲಾಧಿಪತಿಗಳಾದ ಡಾ| ಶರಣಬಸವಪ್ಪ ಅಪ್ಪ ಅವರ ಪರಿಶ್ರಮವೇ ಅಡಗಿದೆ. ಅಲ್ಲದೇ ಶೈಕ್ಷಣಿಕ ಕ್ರಾಂತಿಗಾಗಿಯೇ ಪಣ ತೊಟ್ಟಿರುವುದು ನಿರೂಪಿಸುತ್ತದೆ ಎಂದು ಹೇಳಿದರು.

ಇಂದು ಶಿಕ್ಷಣವೂ ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಶಿಕ್ಷಣ ಹೊಂದಿರದಿದ್ದರೆ ಯಾವುದಕ್ಕೂ ಬಾರದಂತಾಗುತ್ತದೆ. ಶಿಕ್ಷಣ ಹೊಂದಿದ್ದರೆ ದೇಶ-ವಿದೇಶಗಳಲ್ಲಿ ಸಾಧನೆ ತೋರಬಹುದಾಗಿದೆ. ಸಚಿವನಾಗಿ ಮೊದಲ
ಸಮಾರಂಭವಾಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆ ತರುತ್ತಿದೆ ಎಂದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ| ಎಸ್‌.ಆರ್‌. ನಿರಂಜನ್‌ ಮುಖ್ಯ ಅತಿಥಿಯಾಗಿ ಮಾತನಾಡಿ, ವಿಶ್ವವಿದ್ಯಾಲಯವು ಸಂಶೋಧನೆ, ಕಲಿಕೆ ಹಾಗೂ ಬೋಧನೆಯನ್ನು ಪ್ರಮುಖವಾಗಿ ಅಳವಡಿಸಿಕೊಳ್ಳಬೇಕು. ಖಾಸಗಿ ವಿವಿಗಳಿಗೆ ಅನುದಾನ ಹೆಚ್ಚು ಅವಶ್ಯಕವಾಗಿದೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ ಬಾನೆತ್ತರಕ್ಕೆ ಬೆಳೆಯಲು ಅಪ್ಪಾಜಿ ಅವರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ| ಎಚ್‌.ಎಂ ಮಹೇಶ್ವರಯ್ಯ ಮಾತನಾಡಿ, ಶೈಕ್ಷಣಿಕವಾಗಿ ಇನ್ನು ತಾಂತ್ರಿಕತೆ ಹೊಂದುವುದು ಬಹಳ ಅಗತ್ಯವಿದೆ. ಶರಣಬಸವ ವಿವಿ ಬೆಳವಣಿಗೆ ನಿಟ್ಟಿನಲ್ಲಿ ಕೇಂದ್ರೀಯ ವಿವಿಯಿಂದ ಯಾವುದೇ ಸಲಹೆ, ಸಹಕಾರ ಬೇಕಿದ್ದಲ್ಲಿ ನೀಡಲು ಸದಾ ಸಿದ್ಧವಿರುವುದಾಗಿ ಪ್ರಕಟಿಸಿದರು.
ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ್‌ ನಿಷ್ಠಿ ಅಧ್ಯಕ್ಷತೆ ವಹಿಸಿ, ವಿವಿಯಲ್ಲಿ ಪೂಜ್ಯ ಡಾ| ಅಪ್ಪ ಅವರ
ಆಶಯಗನುಗುಣವಾಗಿ ಗುಣಮಟ್ಟದ ಶಿಕ್ಷಣ ಮೊದಲ ಮಹತ್ವ ನೀಡಲಾಗುವುದು. ವರ್ಷದೊಳಗೆ ನಿರೀಕ್ಷೆಯಂತೆ
ವಿವಿ ದಾಪುಗಾಲು ಹಾಕುತ್ತಿದೆಯಾದರೂ ಇನ್ನೂ ಹಲವು ಕಾರ್ಯಗಳತ್ತ ದೃಢ ಹೆಜ್ಜೆ ಇಡಬೇಕಾಗಿದೆ ಎಂದು ಹೇಳಿದರು.

ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರು ಸಾನ್ನಿಧ್ಯ ವಹಿಸಿ, ಶೈಕ್ಷಣಿಕವಾಗಿ ನಮ್ಮ ಭಾಗ ಹಿಂದುಳಿದಿಲ್ಲ. ಇದಕ್ಕೆ ಕಲಬುರಗಿಯಲ್ಲಿರುವ ವೈದ್ಯಕೀಯ ಕಾಲೇಜುಗಳು ಹಾಗೂ ನಾಲ್ಕು ವಿಶ್ವವಿದ್ಯಾಲಯಗಳೇ ಸಾಕ್ಷಿ ಎಂದು ಹೇಳಿದರು.
ದೂರದೃಷಿಯತ್ತ ವಿವಿ ಕೊಂಡೊಯ್ಯಬೇಕಾಗಿದೆ ಎಂದು ಹೇಳಿದರು.

ಕೃತಿಗಳ ಬಿಡುಗಡೆ: ವಿವಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶರಣಬಸವ ವಿಶ್ವವಿದ್ಯಾಲಯದಿಂದ ಪ್ರಥಮ ಸಂಶೋಧನಾ ಜರ್ನಲ್‌ ಆಗಿ ಪ್ರಕಟಗೊಳ್ಳುತ್ತಿರುವ ಇಂಟರ್‌ ನ್ಯಾಷನಲ್‌ ಮಲ್ಟಿ ಡಿಸಿಪ್ಲೇನರಿ ರಿಸರ್ಚ್‌ ಜರ್ನಲ್‌ ಹಾಗೂ
ಡಾ| ಶಿವರಾಜ ಶಾಸ್ತ್ರೀ ಹೇರೂರ, ಡಾ| ಸಾರಿಕಾದೇವಿ ಕಾಳಗಿ ಮತ್ತು ನಾನಾಸಾಹೇಬ ಸಂಪಾದಕತ್ವದಲ್ಲಿ ರಚನೆಯಾಗಿರುವ ಶರಣಬಸವೇಶ್ವರ ಮಹಾದಾಸೋಹ ಸಂಪದ ಕೃತಿಗಳನ್ನು ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ದತ್ತಾತ್ರೇಯ ಪಾಟೀಲ್‌ ರೇವೂರ, ಎಂ.ವೈ. ಪಾಟೀಲ, ಡಾ| ಉಮೇಶ ಜಾಧವ್‌, ಸುಭಾಷ ಆರ್‌. ಗುತ್ತೇದಾರ, ಖನೀಜ್‌ ಫಾತೀಮಾ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಸಚಿವರು ವಿವಿಯ ಪ್ರಾಸ್ಪೆಕ್ಟ್‌ನು ಬಿಡುಗಡೆಗೊಳಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ಎಸ್‌. ದೇಶಮುಖ ಅವರ 53ನೇ ಜನ್ಮ ದಿನವನ್ನು ಸಮಾರಂಭದ ವೇದಿಕೆ ಮೇಲೆ ಆಚರಿಸಲಾಯಿತು. ಎಸ್‌. ಎಸ್‌. ಪಾಟೀಲ, ರೇವಣಸಿದ್ದಪ್ಪ ಪಾಟೀಲ, ಶಾಂತಲಾ ನಿಷ್ಠಿ, ಡಾ| ವಿ.ಡಿ. ಮೈತ್ರಿ, ಪ್ರೊ.ಎನ್‌.ಎಸ್‌.ದೇವರಕಲ್‌, ಡಾ| ಶಿವದತ್ತ ಹೊನ್ನಳ್ಳಿ ಹಾಜರಿದ್ದರು. ಡಾ| ಅನೀಲಕುಮಾರ ಬಿಡವೆ ಸ್ವಾಗತಿಸಿದರು. ಡಾ| ಲಿಂಗರಾಜ ಶಾಸ್ತ್ರೀ ನಿರೂಪಿಸಿದರು.

ಬೀದರನಲ್ಲಿ ಬಸವೇಶ್ವರ ವಿವಿ ಸ್ಥಾಪನೆಯಾಗಲಿ ಬೀದರ್‌ ಜಿಲ್ಲೆಯಲ್ಲಿ ಮಹಾತ್ಮಾ ಬಸವೇಶ್ವರ ವಿಶ್ವವಿದ್ಯಾಲಯ ಸ್ಥಾಪನೆ
ಮಾಡಲು ಆ ಜಿಲ್ಲೆಯವರು ಮನಸ್ಸು ಮಾಡಬೇಕು. ಒಂದು ವೇಳೆ ಜಿಲ್ಲೆಯವರು ಮುಂದಾಗದಿದ್ದಲ್ಲಿ ತಾವೇ
ಆ ನಿಟ್ಟಿನಲ್ಲಿ ಹೆಜ್ಜೆ ಇಡಲು ಹಿಂದೇಟು ಹಾಕುವುದಿಲ್ಲ. ಕಲ್ಯಾಣ ಕರ್ನಾಟಕ ಇನ್ನೂ ಶೈಕ್ಷಣಿಕವಾಗಿ ಶ್ರೀಮಂತಗೊಳ್ಳಬೇಕಿದೆ.
ಡಾ| ಶರಣಬಸವಪ್ಪ ಅಪ್ಪ, ಕುಲಪತಿಗಳು, ಶರಣಬಸವ ವಿಶ್ವವಿದ್ಯಾಲಯ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.