ತ್ರಿವಳಿ ತಲಾಖ್‌ಗೆ ಶರಿಯಾ ವಿರೋಧ: ಜಿಲಾನಿ


Team Udayavani, Jul 17, 2017, 3:25 PM IST

17GUB-1.gif

ಕಲಬುರಗಿ: ತ್ರಿವಳಿ ತಲಾಖ್‌ ಹೇಳುವುದನ್ನು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಶರಿಯಾ) ವಿರೋಧಿಸುತ್ತದೆ. ಮಂಡಳಿಯಲ್ಲಿ
ಇದಕ್ಕೆ ಅವಕಾಶವಿಲ್ಲ ಎಂದು ಮಂಡಳಿ ಕಾರ್ಯದರ್ಶಿಯಾಗಿರುವ ನ್ಯಾಯವಾದಿ ಜಫರ್‌ ಯಾಬ್‌ ಜಿಲಾನಿ ಹೇಳಿದರು.

ನಗರದ ಫರಹಾನ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಮಿಯತ್‌ ಉಲ್‌ ಉಲ್ಮಾ ಹಮ್ಮಿಕೊಂಡಿದ್ದ ಶರಿಯಾ ವಿವರಣಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ತ್ರಿವಳಿ ತಲಾಖ್‌ನ್ನು ಮಂಡಳಿ ಒಪ್ಪದು. ಈ ಬಗ್ಗೆ ಸುಪೀಕೋರ್ಟ್‌ನಲ್ಲಿ ಮಂಡಳಿ ತನ್ನ ವಾದವನ್ನು ಸಮರ್ಪಕವಾಗಿ ಮಂಡಿಸುತ್ತಿದೆ ಎಂದರು.

ಏಕಕಾಲದಲ್ಲಿ ತ್ರಿವಳಿ ತಲಾಖ್‌ ಪದ್ಧತಿ ಅನುಸರಿಸುವವರಿಗೆ ತಕ್ಕ ಪಾಠ ಕಲಿಸಲು ಅವಕಾಶವಿದೆ. ಈ ಅನಿಷ್ಠ ಪದ್ಧತಿ ಬಳಸುವವರಿಗೆ
ಸಾಮಾಜಿಕ ಬಹಿಷ್ಕಾರ ಹಾಕುವ ಮೂಲಕ ಮುಸ್ಲಿಂ ಸಮುದಾಯವು ತಕ್ಕ ಪಾಠ ಕಲಿಸಬಹುದು ಎಂದರು. ನಿಶ್ಚಿತಾರ್ಥ ಸಂದರ್ಭದಲ್ಲಿ ವಧು ಮತ್ತು ವರರಿಗೆ ತ್ರಿವಳಿ ತಲಾಖ್‌ ಹೇಳುವುದು ಶರಿಯಾ ವಿರುದ್ಧವಾಗಿದೆ ಎಂಬುದನ್ನು ವಿವಾಹ ಪತ್ರದಲ್ಲಿ ನಮೂದಿಸುವ ಮೂಲಕ ಜನಜಾಗೃತಿ ಮೂಡಿಸಬೇಕಿದೆ ಎಂದರು. ಧಾರ್ಮಿಕ ನಂಬಿಕೆ ಹಾಗೂ ವೈಯಕ್ತಿಕ ಸಂಪ್ರದಾಯಗಳ ಆಚರಣೆಗೆ ಸಂವಿಧಾನವು ಅಧಿಕಾರ ನೀಡಿದೆ. ಆದರೂ ತ್ರಿವಳಿ ತಲಾಖ್‌ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಯಾಗಿ ಈಗ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಆರಂಭವಾಗಿದೆ. ಈ ಬಗ್ಗೆ ಶರಿಯಾ ತನ್ನ ವಾದವನ್ನು ಸಮರ್ಥವಾಗಿ ಮಂಡಿಸುತ್ತಿದೆ. ತ್ರಿವಳಿ ತಲಾಖ್‌ ಪದ್ಧತಿಯಿಂದ ಶರಿಯಾದಲ್ಲಿ
ಮಹಿಳೆಗೆ ಶೋಷಣೆಯಾಗುತ್ತಿದೆ ಎಂಬ ತಪ್ಪು ತಿಳಿವಳಿಕೆ ಅನ್ಯ ಸಮುದಾಯಕ್ಕೆ ಹೋಗುತ್ತಿದೆ. ಇದನ್ನು ತಪ್ಪಿಸಲು ಇಸ್ಲಾಂ ಧರ್ಮದ ಶಾಂತಿ ಹಾಗೂ ಸಹೋದರತ್ವದ ಸಂದೇಶವನ್ನು ಸಾರಬೇಕು. ತ್ರಿವಳಿ ತಲಾಖ್‌ ವಿರೋಧಿಸಬೇಕೆಂದರು.

ಪವಿತ್ರ ಕುರಾನ್‌ ಹಾಗೂ ಶರಿಯಾ ಕಾನೂನನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲು ಅವಕಾಶವಿಲ್ಲ. ನಮ್ಮ ನಂಬಿಕೆ ಹಾಗೂ ಆಚರಣೆಗಳಿಗೆ ಯಾವುದೇ ಅಡೆ, ತಡೆ ಆಗದು. ಈ ಬಗ್ಗೆ ಸಮುದಾಯದವರು ಭಯಪಡಬಾರದು ಎಂದರು.

ಮೌಲಾನಾ ಜಾವೇದ್‌ ಆಲಂ ಖಾಶ್ಮಿ ಮಾತನಾಡಿ, ಮುಸ್ಲಿಂ ಸಮುದಾಯದವರು ಪರಸ್ಪರ ಕಚ್ಚಾಡುವುದನ್ನು ಬಿಟ್ಟು ಐಕ್ಯತೆ ಹಾಗೂ
ಒಗ್ಗಟ್ಟು ಪ್ರದರ್ಶಿಸಬೇಕು. ಸಮಾಜದ ಯುವಕರು ಮೊಬೈಲ್‌ ಹಾಗೂ ಇಂಟರ್‌ನೆಟ್‌ನಲ್ಲಿಯೇ ಪ್ರತಿದಿನ ಆರು ಗಂಟೆಗಳ ಕಾಲ ಕಳೆಯುತ್ತಿದ್ದು, ಅದನ್ನು ತಡೆಯದಿದ್ದರೇ ಸಮಾಜಕ್ಕೆ ಅಪಾಯವಿದೆ ಎಂದು ಎಚ್ಚರಿಸಿದರು. ಹಿರಿಯ ನ್ಯಾಯವಾದಿ ಉಸ್ತಾದ್‌ ಸಾದತ್‌
ಹುಸೇನ್‌, ಇಸ್ಲಾಮಿಕ್‌  ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಖಾಲೀದ್‌ ಸೈಫ್‌ ಉಲ್‌ ರೆಹಮಾನಿ, ನ್ಯಾಯವಾದಿ ಅನ್ವರ್‌ ಪಟೇಲ್‌ ಹಾಗೂ ಇತರರಿದ್ದರು.  

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.