ಆಮರಣಾಂತ ಉಪವಾಸ ಸತ್ಯಾಗ್ರಹಿ ಶಿವಕುಮಾರ ನಾಟೀಕಾರ ಅಸ್ವಸ್ಥ: ವಿಜಯಪುರ ಆಸ್ಪತ್ರೆಗೆ ರವಾನೆ

ಭೀಮಾಗೆ‌ ಮಹಾರಾಷ್ಟ್ರ ಉಜ್ಜನಿ ನೀರು ಬಿಡಲು ಆಗ್ರಹಿಸಿ ನಡೆದಿದ್ದ ಉಪವಾಸ: ಸರಕಾರದ ನಿರ್ಲಕ್ಷ

Team Udayavani, Mar 22, 2024, 2:04 PM IST

Shivakumar natikera sick: sent to Vijayapura hospital

ಕಲಬುರಗಿ: ಕಳೆದ ಒಂದು ವಾರದಿಂದ ಭೀಮಾನದಿಗೆ ಮಹಾರಾಷ್ಟ್ರದ ಉಜ್ಜನಿ ಡ್ಯಾಂನಿಂದ ಜನ, ಜಾನುವಾರುಗಳ ನೀರಿನ ಹಾಹಾಕಾರ ನೀಗಿಲು ನೀರು ಬಿಡುವವಂತೆ ಒತ್ತಾಯಿಸಿ ಅಫಜಲಪುರ ಪಟ್ಟಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಹಠಾತ್ತನೆ ಅಸ್ವಸ್ಥರಾಗಿದ್ದು ಅವರನ್ನು ವಿಜಯಪುರದ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.

ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಬದಲು ವಿಜಯಪುರಕ್ಕೆ ಕೊಂಡೊಯ್ಯುತ್ತಿರುವುದರಿಂದ ಅಫಜಲಪುರ ಸತ್ಯಾಗ್ರಹ ಸ್ಥಳದಲ್ಲಿ ತುಸು ಗೊಂದಲ ಉಂಟಾಗಿದ್ದು, ಪೊಲೀಸರು, ತಾಲೂಕು ಆಡಳಿತದ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಆದರೆ, ಇದು ಹೋರಾಟಗಾರ ನಾಟೀಕಾರ ಹಾಗೂ ಅವರ ತಂಡದ ನಿರ್ಧಾರ ಎನ್ನಲಾಗುತ್ತಿದೆ.

ಶಿವಕುಮಾರ ನಾಟೀಕಾ‌ರ್ ಭೀಮಾ ನದಿಗೆ ಮಹಾರಾಷ್ಟ್ರದಿಂದ ನೀರು ಬಿಡಿಸುವಂತೆ ರಾಜ್ಯ ಸರಕಾರಕ್ಕೆ ಒತ್ತಾಯಿಸಿ ಕಳೆದ ಒಂದು ವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು. ಈ ಹಂತದಲ್ಲಿ ಅಧಿಕಾರಿಗಳು ಪ್ರತಿದಿನ ಬಂದು ನಾಟೀಕಾರ ಜತೆ ಮಾತನಾಡಿ, ಉಪವಾಸ ಸತ್ಯಾಗ್ರಹ ಕೈ ಬಿಡಲು ಮನವಿ ಮಾಡಿದ್ದರು. ಈಗ ಚುನಾವಣೆಯೂ ಇದೆ. ಇನ್ನೊಂದೆಡೆ ಉಜ್ಜನಿಯಲ್ಲಿ ನೀರಿಲ್ಲವೆಂದು ಮಹಾರಾಷ್ಟ್ರ ಸರಕಾರ ಹೇಳುತ್ತಿದೆ. ನಮ್ಮ ರಾಜ್ಯದಲ್ಲಿನ ಕೃಷ್ಣಾ ಮತ್ತು ಬಸವಸಾಗರದಿಂದ ನೀರು ಬಿಡಿಸುವ ಪ್ರಯತ್ನಗಳನ್ನು ನಡೆದಿದೆ ಎಂದು ಹೇಳಿದ್ದರು.

ಆದರೆ, ನಮ್ಮ ಸರಕಾರವೂ ಕೂಡ ಕೃಷ್ಣಾ ಅಥವಾ ಬಸವಸಾಗರದಿಂದ ನೀರು ಬಿಡಿಸುವ ಪ್ರಕ್ರಿಯೆಯನ್ನು ಆಮೆಗತಿಯಲ್ಲಿ ಮಾಡಲಾಗುತ್ತಿತ್ತು. ಇದರಿಂದಾಗಿ ದಿನಗಳು ದೂಡಲಾಯಿತೇ ವಿನಃ ಚರ್ಚೆಯ ಅಂತಿಮ ರೂಪ ಫಲಿತಾಂಶವಾಗಿ ಹೊರ ಬೀಳಲಿಲ್ಲ ಮತ್ತು ನೀರು ಬಿಡುಸುವ ಪ್ರಯತ್ನಗಳು ವಿಳಂಭವಾದವು ಎಂದು ಶುಕ್ರವಾರ ಬೆಳಗ್ಗೆಯೇ “ಉದಯವಾಣಿ”ಗೆ ಯೊಂದಿಗೆ ಮಾತನಾಡಿದ ಶಿವಕುಮಾರ ನಾಟೀಕಾರ್, ವಿಜಯಪುರ, ಕಲಬುರಗಿ ಜಿಲ್ಲೆಯ ಜನರು, ರಾಜಕಾರಣಿಗಳು, ಶಾಸಕರು ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ತೋರಿದ ಬೆಂಬಲವನ್ನು ನೆನಪಿಸಿಕೊಂಡರು. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಲಭ್ಯ ನೀರನ್ನು ಕೃಷ್ಣ ಮತ್ತು ಬಸವಸಾಗರದಿಂದ ಬಿಡಿಸಲು ಕಲಬುರಗಿ ಆರ್ ಸಿ ಮತ್ತು ಬೆಳಗಾವಿ ಆರ್ ಸಿ ಮಧ್ಯದ ಸರಣಿ ವಿಸಿ ಸಭೆಗಳು ಪಫಲ ನೀಡುತಿಲ್ಲ ಎಂದು ದುಗುಡ ವ್ಯಕ್ತ ಪಡಿಸಿದ್ದರು.

ಅಲ್ಲದೆ, ನೀರು ಬರದೇ ಹೋದರೆ ಮುಂದಿನ ದಿನಗಳಲ್ಲಿ ಉಂಟಾಗುವ ಭೀಕರ ಹಾಹಾಕಾರಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಈ ಮಧ್ಯೆ ಮಾರ್ಚ ೭ ರಂದು ಮಹಾರಾಷ್ಟ್ರ ಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದರೂ ಮಹಾ ಸರಕಾರ ಸ್ಪಂಧಿಸಿಲ್ಲ. ಇದರಿಂದಾಗಿ ನೀರು ಬಿಡುವ ಪ್ರಕ್ರಿಯೆ ಯಲ್ಲೂ ವಿಳಂಭವಾಗಿದೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.