ಶ್ರೀ ಸತ್ಯಪರಾಕ್ರಮ ತೀರ್ಥರ ಆರಾಧನೆ
Team Udayavani, Oct 15, 2018, 11:30 AM IST
ಮುದಗಲ್ಲ: ಸಮೀಪದ ಕೃಷ್ಣಾ ನದಿ ದಡದ ಚಿತ್ತಾಪುರ ಗ್ರಾಮದ ಶ್ರೀ ಸತ್ಯಪರಾಕ್ರಮ ತೀರ್ಥ ಉತ್ತರಾದಿಮಠದಲ್ಲಿ ನವರಾತ್ರಿ ಉತ್ಸವ ಹಾಗೂ ಶ್ರೀ ಸತ್ಯಪರಾಕ್ರಮ ತೀರ್ಥರ ಆರಾಧನೆ ಅಂಗವಾಗಿ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥರಿಂದ ಅ.19ರ ವರೆಗೆ ನವರಾತ್ರಿ ಕಾರ್ಯಕ್ರಮ ನಡೆಯುತ್ತಿವೆ. ಅ.16, 17, 18 ರಂದು ಶ್ರೀ ಸತ್ಯಪರಾಕ್ರಮ ತೀರ್ಥರ ಆರಾಧನಾ ಮಹೋತ್ಸವ ನಡೆಯಲಿದ್ದು, 19ರಂದು ಮಧ್ವ ಜಯಂತಿ ಆಚರಣೆ ನಡೆಯಲಿದೆ.
ಶ್ರೀ ಸತ್ಯಾತ್ಮತೀರ್ಥರ ಅನುಗ್ರಹ ಆದೇಶದಂತೆ ನಿತ್ಯವೂ ಬೆಳಗ್ಗೆಯಿಂದ ಧಾರ್ಮಿಕ, ಆಧ್ಯಾತ್ಮಿಕ ಮತ್ತು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಬೆಳಗಿನ ಜಾವ ಶ್ರೀಗಳಿಂದ ಶಿಷ್ಯಂದಿರಿಗೆ ಪಾಠ ಹಾಗೂ ಧಾರ್ಮಿಕ ಕಾರ್ಯಕ್ರಮ, ಭಕ್ತರಿಗೆ ಮುದ್ರಾಧಾರಣೆ, ಭಕ್ತರಿಂದ
ಶ್ರೀಸತ್ಯಾತ್ಮತೀರ್ಥರ ಪಾದ ಪೂಜೆಗೆ ಅವಕಾಶ ನೀಡಲಾಗಿದೆ. ನಂತರ ದಂಡೋದಕ ಸ್ನಾನ, ಪೂಜೆ, ಪ್ರವಚನ ನಡೆಯುತ್ತಿವೆ. ತದನಂತರ ಬಂದ ಭಕ್ತ ಸಮೂಹಕ್ಕೆ ಮುದ್ರಾಧಾರಣೆ ಕಾರ್ಯಕ್ರಮ ನಡೆಯುತ್ತಿವೆ.
ರಾಯಚೂರು ಸೇರಿದಂತೆ ನೆರೆಯ ಜಿಲ್ಲೆಗಳ ನೂರಾರು ಭಕ್ತರು ಭಾಗವಹಿಸುತ್ತಿದ್ದಾರೆ. ಶ್ರೀ ಸತ್ಯಪರಾಕ್ರಮತೀರ್ಥರ ಮೂಲ ವಂಶಸ್ಥರಾದ ಜಹಾಗೀರದಾರ ವಂಶಜರು ಭಕ್ತರಿಗೆ ಸೌಲಭ್ಯ ಒದಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ