ಬಸ್ ನಿಲ್ಲಿಸಿ ಚಾಲಕ, ನಿರ್ವಾಹಕರ ಅಹವಾಲು ಕೇಳಿದ ಶ್ರೀರಾಮುಲು
ಕರ್ತವ್ಯ ನಿರತವಾಗಿದ್ದ ಸಿಬ್ಬಂದಿಗೆ ಶುಕ್ರವಾರ ಬೆಳಗ್ಗೆ ಶಾಕ್
Team Udayavani, Oct 9, 2021, 1:32 PM IST
ಸಿಂಧನೂರು: ಬೆಳ್ಳಂ ಬೆಳಗ್ಗೆ ಎಂದಿನಂತೆ ಕರ್ತವ್ಯ ನಿರತವಾಗಿದ್ದ ಸಿಬ್ಬಂದಿಗೆ ಶುಕ್ರವಾರ ಬೆಳಗ್ಗೆ ಶಾಕ್ ಕಾದಿತ್ತು. ಸ್ವತಃ ಸಾರಿಗೆ ಸಚಿವರೇ ಸರ್ಕಾರಿ ಬಸ್ ತಡೆದು, ಅಹವಾಲು ಕೇಳಿದ ಪ್ರಸಂಗ ನಡೆಯಿತು. ತಾಲೂಕಿನ ಅರಗಿನಮರ ಕ್ಯಾಂಪ್ನಲ್ಲಿರುವ ಉದ್ಯಮಿ ಮಲ್ಲಿಕಾರ್ಜುನ ಎನ್ನುವವರ ಮನೆಯಲ್ಲಿ ತಂಗಿದ್ದ ಸಾರಿಗೆ ಸಚಿವ ಬಿ. ಶ್ರೀರಾಮುಲು ಬೆಳಗ್ಗೆ ವಾಯು ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬರ್ಮಾ ಕ್ಯಾಂಪ್ನಿಂದ ಸಿಂಧನೂರು ನಗರದ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ಗಳನ್ನು ತಾವೇ ಮುಂದೆ ಹೋಗಿ ತಡೆದು ಕುಶಲೋಪರಿ ವಿಚಾರಿಸಿದರು. ವಿಶೇಷ ಎಂದರೆ ಚಾಲಕ ಹಾಗೂ ನಿರ್ವಾಹಕರು ಬಸ್ ಇಳಿದು ಕೆಳಗೆ ಬರಲು ಮುಂದಾದಾಗ ಬೇಡ ಎಂದರು. ತಮ್ಮ ಸೇವೆಯನ್ನು ಮುಂದುವರಿಸುವಂತೆ ಉತ್ತೇಜಿಸಿದರು. ಬೆಳ್ಳಂಬೆಳಗ್ಗೆ ಹಳ್ಳಿ ರಸ್ತೆಯಲ್ಲಿ ಸಾರಿಗೆ ಸಚಿವರೇ ಬಸ್ನತ್ತ ಕೈ ಮಾಡಿ ನಿಲ್ಲಿಸಿದ್ದನ್ನು ಕಂಡು ಸಾರಿಗೆ ಬಸ್ ಚಾಲಕ, ನಿರ್ವಾಹಕರು ಪುಳಕಿತಗೊಂಡರು. ಈ ವೇಳೆ ಭದ್ರತಾ ಸಿಬ್ಬಂದಿ ಹೊರತುಪಡಿಸಿ ರಾಜಕೀಯ ಮುಖಂಡರ ಗದ್ದಲ ಇರಲಿಲ್ಲ. ಜಾಗಿಂಗ್ ಪ್ಯಾಂಟ್, ಕಪ್ಪು ಟೀ ಶರ್ಟ್ ಧರಿಸಿದ್ದ ಅವರನ್ನು ಸುಲಭವಾಗಿ ಗುರುತಿಸುವಂತೆಯೂ ಇರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ