ಸಿದ್ದರಾಮಯ್ಯ ಸರ್ವಾಧಿಕಾರಿ: ಬೊಮ್ಮಾಯಿ


Team Udayavani, Jul 15, 2017, 12:25 PM IST

15-GUB-2.jpg

ಲಿಂಗಸುಗೂರು: ವಿಪಕ್ಷದ ಶಾಸಕರ ನ್ಯಾಯಯುತ ಬೇಡಿಕೆ ಈಡೇರಿಸಲು ಸೌಜನ್ಯವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಾ ಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ತಮ್ಮ ಕ್ಷೇತ್ರದಲ್ಲಿ ಹಿಂದಿನ ಭಾಜಪ ಸರಕಾರದಲ್ಲಿ ಜಾರಿಗೆ ತಂದ ಹಲವಾರು ಯೋಜನೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕಳೆದ 32
ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಗುರುವಾರವಷ್ಟೇ ಸಿದ್ದರಾಮಯ್ಯ ಅವರು ಲಿಂಗಸುಗೂರು ತಾಲೂಕಿಗೆ ಬಂದ ವೇಳೆಯಲ್ಲಿ ಶಾಸಕರ ಭೇಟಿಗೆ ಅವಕಾಶ ನೀಡಿಲ್ಲ. ಅವರ ಕರ್ತವ್ಯದ ಅರಿವು ಬಿಟ್ಟು ಸರ್ವಾ ಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರು ವರ್ಷಗಳ ಹಿಂದೆ ಸಾಲ ಮನ್ನಾ ಮಾಡಿದ್ದರೆ ಎಷ್ಟೋ ರೈತರ ಜೀವ ಉಳಿಸಬಹುದಾಗಿತ್ತು. ಸಾಲ ಮನ್ನಾ ಮಾಡಲು 14 ಷರತ್ತುಗಳನ್ನು ಹಾಕಿರುವುದು ಅತ್ಯಂತ ದುರಂತವಾಗಿದೆ. ಸಾಲ ಮನ್ನಾ ಮಾಡಿ ಎಂದು ಕೇಂದ್ರದತ್ತ ಬೊಟ್ಟು ಮಾಡುವ ಸಿದ್ದರಾಮಯ್ಯನವರು ಕೇಂದ್ರ ಸರಕಾರ ರಾಜ್ಯಕ್ಕೆ ನೀಡಿರುವ ಬೆಳೆ ಪರಿಹಾರದ 2440 ಕೋಟಿ ರೂ. ಮೊತ್ತವನ್ನು ರೈತರಿಗೆ ಸಮರ್ಪಕವಾಗಿ ಹಂಚಿಕೆ ಮಾಡದೇ ಅನುದಾನ ಉಳಿಸಿಕೊಂಡಿದ್ದಾರೆ. ಮೇಲಾಗಿ ರಾಜ್ಯ
ಸರಕಾರವತಿಯಿಂದ ಇನ್ನೂವರಿಗೂ ಒಂದು ಪೈಸೆ ನೀಡಿಲ್ಲ ಎಂದು ಆರೋಪಿಸಿದರು.

ನಂದವಾಡಗಿ ಏತ ನೀರಾವರಿ ಯೋಜನೆ ಎ ಮತ್ತು ಬಿ ಸ್ಕೀಮ್‌ನಲ್ಲಿ ಇದ್ದಿಲ್ಲ. ಇದಕ್ಕೆ ನೀರಿನ ಹಂಚಿಕೆ ಕೂಡ ಇದ್ದಿಲ್ಲ. ಇದನ್ನು ಜಾರಿಗೊಳಿಸಿದರೆ ಲಿಂಗಸುಗೂರು ಹಾಗೂ ಮಾನ್ವಿ ತಾಲೂಕಿನ 90 ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸಬುದು ಎಂಬುದನ್ನು ಮನಗಂಡು ಕಷ್ಟುಪಟ್ಟು ಗೋದಾವರಿಯಲ್ಲಿ ನಾಲ್ಕು ಟಿಎಂಸಿ ಅಡಿ ನೀರು ಹಂಚಿಕೆ ಮಾಡಿ ಬಜೆಟ್‌ನಲ್ಲಿ ಘೋಷಿಸಿ ಟೆಂಡರ್‌ ಹಂತಕ್ಕೆ ತರಲಾಗಿತ್ತು. ಆದರೆ ಕಾಂಗ್ರೆಸ್‌ ಸರಕಾರ ಬಂದು ನಾಲ್ಕು ವರ್ಷದ ನಂತರ ಈ ಹಿಂದೆ ಜಾರಿಮಾಡಿದ್ದ ನಂದವಾಡಗಿ ಯೋಜನೆ ಪ್ರಾರಂಭಿಸಿದೆ. ಇದು ಕಾಂಗ್ರೆಸ್‌ಕ್ಕೆ ಇರುವ ನೀರಾವರಿ ಬದ್ಧತೆಯಾಗಿದೆ. ಕಳೆದ ಬಿಜೆಪಿ ಸರಕಾರ ಐದು ವರ್ಷದ ಅವ ಧಿಯಲ್ಲಿ
ನೀರಾವರಿ ಕ್ಷೇತ್ರಕ್ಕೆ 18 ಸಾವಿರ ಕೋಟಿ ರೂ. ಖರ್ಚು ಮಾಡಿ 7 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಿದೆ. ಕಾಂಗ್ರೆಸ್‌ ಸರಕಾರ 36 ಸಾವಿರ ಕೋಟಿ ರೂ. ಖರ್ಚು ಮಾಡಿ 6 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸಿದೆ ಎಂದು ಹೇಳಿಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿ ಸರಕಾರದ ಅವ  ಧಿಯಲ್ಲಿನ ಯೋಜನೆಗಳು ಸೇರಿಕೊಂಡಿವೆ ವಿನಃ ಹೊಸ ಯೋಜನೆಗಳಿಲ್ಲ ಎಂದರು.

ಯುಕೆಪಿ ಮೂರನೇ ಹಂತಕ್ಕಾಗಿ 17,729 ಸಾವಿರ ಕೋಟಿ ರೂ. ಆಡಳಿತ್ಮಾಕ ಅನುಮೋದನೆ ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ಸರಕಾರ ಇಲ್ಲಿವರಿಗೂ ಒಂದು ಎಕರೆಗೂ ಕೂಡ ನೀರಾವರಿ ಸೌಲಭ್ಯ ಒದಗಿಸಿಲ್ಲ. ರಾಜ್ಯದಲ್ಲಿ ನೀರಾವರಿ ಕ್ಷೇತ್ರಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ ಎಂದರು. ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್‌, ಮುಖಂಡರಾದ ಸಿದ್ದು ಬಂಡಿ, ಶಂಕರಗೌಡ ಅಮರಾವತಿ,
ವೆಂಕಟರಾವ ಜಾಹಗೀರದಾರ, ಚನ್ನುಕುಮಾರ, ವಿಶ್ವನಾಥ ಆನ್ವರಿ ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.