ದುಧನಿಯಲ್ಲಿ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ


Team Udayavani, Jan 15, 2019, 6:50 AM IST

gul-2.jpg

ಸೊಲ್ಲಾಪುರ: ಅಕ್ಕಲಕೋಟ ತಾಲೂಕು ದುಧನಿ ಗ್ರಾಮದಲ್ಲಿ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿವಯೋಗಿ ಸಿದ್ಧರಾಮನ ಯೋಗದಂಡಕ್ಕೆ ಸಮ್ಮತಿ ಕಟ್ಟೆ ಮೇಲೆ ಸೋಮವಾರ ಅಕ್ಷತಾ ಕಾರ್ಯಕ್ರಮ ಅದ್ಧೂರಿಯಿಂದ ನಡೆಯಿತು.

ಮಂದಿರದಲ್ಲಿ ಸೋಮವಾರ ಬೆಳಗ್ಗೆ ಸಿದ್ಧರಾಮನ ಮೂರ್ತಿಗೆ ರುದ್ರಾಭಿಷೇಕ ಮಾಡಲಾಯಿತು. ಗ್ರಾಮದೊಳಗಿದ್ದ ಮಠ-ಮಂದಿರದೊಳಗಿರುವ ಶಿವಲಿಂಗಗಳಿಗೆ ತೈಲಾಭಿಷೇಕ ಮಾಡಲಾಯಿತು. ಮಲ್ಲಿಕಾರ್ಜುನ ಮಂದಿರದಲ್ಲಿ ಶಾಂತಲಿಂಗ ಶ್ರೀಗಳಿಂದ ಪೂಜೆ ನಡೆದ ನಂತರ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಐದು ನಂದಿಧ್ವಜಗಳ ವಾದ್ಯ ಸಮೇತ ಮೆರವಣಿಗೆ ನಡೆಯಿತು. ಮೆರವಣಿಗೆ ರಸ್ತೆ ಎರಡು ಬದಿ ಜನ ಹೂಗಳಿಂದ ನಂದಿಧ್ವಜಗಳ ಸ್ವಾಗತ ಮಾಡುತ್ತಿರುವ ದೃಶ್ಯ ಕಂಡು ಬಂತು. ದಾರಿಯುದ್ದಕ್ಕೂ ಬಣ್ಣ, ಬಣ್ಣದ ರಂಗೋಲಿ ಹಾಕಲಾಗಿತ್ತು.

ಮೆರವಣಿಗೆ ಮಂದಿರ ತಲುಪಿದ ನಂತರ ನಂದಿಧ್ವಜಗಳಿಂದ ಪ್ರದಕ್ಷಣೆ ಹಾಕಲಾಯಿತು. ವಿರಕ್ತ ಮಠದ ಡಾ| ಶಾಂತಲಿಂಗೇಶ್ವರ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಈರಯ್ಯ ಪುರಾಣಿಕ, ಚನ್ನವೀರಯ್ಯ ಪುರಾಣಿಕ ಶಿವಯೋಗಿ ಸಿದ್ಧರಾಮರಿಗೆ ಪೂಜೆ ಮತ್ತು ಆರತಿ ಮಾಡಿದ ನಂತರ ದೇವಸ್ಥಾನದ ಅಧ್ಯಕ್ಷ ಚಂದ್ರಕಾಂತ ಯಗದಿ, ಗೀರಮಲ್ಲಪ್ಪ ಸಾವಳಗಿ, ಹನುಮಂತರಾವ ಪಾಟೀಲ, ಮಲ್ಲಿನಾಥ ಪಾಟೀಲ ಅವರಿಂದ ಗಂಗಾ ಮತ್ತು ಸುಗಡಿ ಪೂಜೆ ಮಾಡಲಾಯಿತು. ತದನಂತರ ಮಾನಕರಿಗಳಿಂದ ವಚನ ಮತ್ತು ಮಂಗಲಾಷ್ಟಕ ಪಠಣ ನಂತರ ಅಕ್ಷತಾ ಕಾರ್ಯಕ್ರಮ ನಡೆಯಿತು.

ಅಕ್ಷತಾ ಸಮಾರಂಭದಲ್ಲಿ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಚಂದ್ರಕಾಂತ ಯಗದಿ, ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಶಂಕರ ಮೇತ್ರೆ, ಮಲ್ಲಿನಾಥ ಮೇತ್ರೆ, ರಾಮಚಂದ್ರಪ್ಪ ಬಿರಾಜದಾರ, ಸಿದ್ಧಾರಾಮ ಯಗದಿ, ಶಿವಾನಂದ ಮಾಡ್ಯಾಳ, ಮಲಕಾಜಪ್ಪ ಅಲ್ಲಾಪುರ, ಗೀರಮಲ್ಲಪ್ಪ ಸಾವಳಗಿ, ಮಲ್ಲಿನಾಥ ಮಾಶಾಳ, ನಿಂಗಣ್ಣ ಸೋಳಸೆ, ಲಕ್ಷ್ಮೀಪುತ್ರ ಪಾಟೀಲ, ಶ್ರೀಮಂತಪ್ಪ ಪರಮಶೆಟ್ಟಿ, ಕಾಶಿನಾಥ ಗಾಡಿ, ಶಿವಾನಂದ ಫುಲಾರಿ, ಪಿಂಟು ಬಾಹೇರಮಠ, ವಿಶ್ವನಾಥ ಗಂಗಾವತಿ, ಸಂತೋಷ ಪೋತದಾರ, ಲಕ್ಷ್ಮೀಕಾಂತ ಕಲಶೆಟ್ಟಿ, ಬಾಬಾ ಟಕ್ಕಳಕಿ, ಗುರುಶಾಂತ ಮಾಶ್ಯಾಳೆ ಪಾಲ್ಗೊಂಡಿದ್ದರು.

ಮಂದಿರದ ಮುಖ್ಯ ಜಾಗದಲ್ಲಿ ವಿವಿಧ ಮಳಿಗೆಗಳು, ತಿಂಡಿ-ತಿನಿಸುಗಳ, ಕೃಷಿ ಉಪಕರಣ, ಸೌಂದರ್ಯ ಪ್ರಸಾದನ, ಸಾಹಿತ್ಯಗಳು, ಮಿಠಾಯಿ ಅಂಗಡಿ ಹಾಕಲಾಗಿದೆ. ಜಾತ್ರೆಗೆ ಸುತ್ತಲಿನ ಮಕ್ಕಳು-ಮಹಿಳೆಯರು, ಯುವಕ-ಯುವತಿಯರು, ವಯವೃದ್ಧರು ಆಗಮಿಸಿದ್ದರು. ಪೊಲೀಸ್‌ ಉಪನೀರಿಕ್ಷಕ ಬಾಳಾಸಾಹೇಬ ನರವಟೆ, ನಾಗನಾಥ ವಾಕಿಟೋಳೆ, ದೀಪಕ ಜಾಧವ, ಘನಶ್ಯಾಮ ಗಾವಡೆ, ಗಣೇಶ ಅಂಗುಲೆ ಭದ್ರತೆ ಒದಗಿಸಿದ್ದರು.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.