ಕಲ್ಯಾಣ ರಾಷ್ಟ್ರ ನಿರ್ಮಾಣಕ್ಕೆ ಸಿದ್ಧರಾಮೇಶ್ವರ ಕೊಡುಗೆ ಅನನ್ಯ


Team Udayavani, Jan 16, 2019, 8:15 AM IST

gul-2.jpg

ಕಲಬುರಗಿ: ಹನ್ನೆರಡನೆ ಶತಮಾನದಲ್ಲಿ ಬಸವಣ್ಣನ ನೇತೃತ್ವದಲ್ಲಿ ನಡೆದ ಸಾಮಾಜಿಕ ಸುಧಾರಣೆ ವಿಶ್ವದ ಇತಿಹಾಸದಲ್ಲಿಯೇ ಪ್ರಮುಖವಾಗಿದೆ. ಸೊಲ್ಲಾಪುರ ಮತ್ತು ಅನುಭವ ಮಂಟಪದ ಮೂಲಕ ಅನೇಕ ಜನಪರ ಕಾರ್ಯಗಳನ್ನು ಮಾಡಿರುವ ಶರಣ ಸಿದ್ಧರಾಮೇಶ್ವರರ ಸಾಮಾಜಿಕ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ. ಪಾಟೀಲ ಹೇಳಿದರು.

ನಗರದ ಆಳಂದ ಚೆಕ್‌ಪೋಸ್ಟ್‌ ಸಮೀಪದ ಸಿದ್ಧರಾಮೇಶ್ವರ ನಗರದಲ್ಲಿರುವ ಎಕ್ಸಲೆಂಟ್ ಗುರು ನವೋದಯ ಪರೀಕ್ಷಾ ತರಬೇತಿ ಕೇಂದ್ರದಲ್ಲಿ, ಜಗಜ್ಯೋತಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಏರ್ಪಡಿಸಿದ್ದ ಶರಣ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರಂಭದಲ್ಲಿ ಸೊಲ್ಲಾಪುರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿ ಅಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದರು. ಅನೇಕ ರಸ್ತೆ, ಕೆರೆ-ಕಟ್ಟೆಯನ್ನು ನಿರ್ಮಿಸಿ, ಜನ, ಪಶುಪಕ್ಷಿಗಳಿಗೆ ಅನುಕೂಲ ಮಾಡಿಕೊಟ್ಟರು. ನಿರಂತರ ದಾಸೋಹ ಕೈಗೊಂಡು ಬಡವರು, ನಿರ್ಗತಿಕರಿಗೆ ಸಹಾಯ ಮಾಡಿದರು. ಇದಲ್ಲದೇ ಸಾಮೂಹಿಕ ವಿವಾಹ, ಆರ್ಥಿಕ ದುರ್ಬಲರಿಗೆ ನೆರವು ಹೀಗೆ ಅನೇಕ ಸಮಾಜಮುಖೀ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಕಾಯಕಯೋಗಿ, ಶಿವಯೋಗಿಯಾಗಿ ಅಪರೂಪದ ವ್ಯಕ್ತಿತ್ವ ಹೊಂದಿದ್ದರು. ಕಪಿಲಸಿದ್ಧ ಮಲ್ಲಿಕಾರ್ಜುನ ಎನ್ನುವ ಅಂಕಿತನಾಮದೊಂದಿಗೆ ಅನೇಕ ವಚನಗಳನ್ನು ರಚಿಸಿ, ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಅವರಲ್ಲಿ ದಯಾಪರತೆ, ಕರುಣೆ, ಬಡವರ ಬಗ್ಗೆ ಅಪಾರವಾದ ಕಾಳಜಿಯಿತ್ತು. ಸಾಧನೆ ಹಾದಿಯಲ್ಲಿ ಬಹು ಎತ್ತರಕ್ಕೆ ಏರಿದ ಅವರು, ತಮ್ಮ ಸುತ್ತಮುತ್ತಲಿನ ಸಮಾಜದ ಸಮಷ್ಠಿಚೇತನವನ್ನು ತಮ್ಮ ಎತ್ತರಕ್ಕೆ ಏರಿಸಬೇಕೆಂಬ ಸಂಕಲ್ಪದಿಂದ ಕೆಳಗಿಳಿದು ಬಂದು ಜನಸಾಮಾನ್ಯರೊಡನೆ ಬೆರೆತು, ಅವರಿಗೆ ತಿಳಿಹೇಳಿ, ಕೈಹಿಡಿದು ನಡೆಸಿದರು. ಅನುಭವ ಮಂಟಪದ ಅಧ್ಯಕ್ಷರಾಗಿ ಅನೇಕ ಸಮಾಜಮುಖೀ ಕಾರ್ಯಗಳನ್ನು ಮಾಡಿದರು ಎಂದರು.

ಕೇಂದ್ರದ ಸಹ ನಿರ್ದೇಶಕ ವೀರೇಶ ನಾವದಗಿ ಮಾತನಾಡಿ, ಸಿದ್ಧರಾಮೇಶ್ವರರ ಜೀವನ, ಸಂದೇಶ ಮಾನವನ ವಿಕಾಸಕ್ಕೆ, ಕಲ್ಯಾಣ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದರು.

ಕೇಂದ್ರದ ನಿರ್ದೇಶಕ ಪ್ರಕಾಶ ನಾಗರಾಳ, ಬಳಗದ ಸದಸ್ಯರಾದ ಸೋಮಶೇಖರ ಮೂಲಗೆ, ಬಸವರಾಜ ಪುರಾಣಿಕ, ಲಕ್ಷ್ಮೀಕಾಂತ ಶಹಾಪುರೆ, ಶ್ರೀಕಾಂತ ಹಂಗರಗಿ, ಶ್ರೀಕಾಂತ ಡೊಳ್ಳಿ, ಶಿವಕುಮಾರ ತಿಮಾಜಿ, ಪ್ರಭಾಖರ ವಾಕಡೆ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.