ಪ್ರಚಾರ ಮಾಡಿದ್ದು ‘ಹಲ್ಲುಜ್ಜುವ ಪೇಸ್ಟ್’ ಚಿಹ್ನೆಗೆ,ಮತಪತ್ರದಲ್ಲಿ ಮುದ್ರಣವಾಗಿದ್ದು ‘ಬ್ರಷ್’
ಮತ ಪತ್ರದಲ್ಲಿ ಚಿಹ್ನೆ ಬದಲು; ಅಭ್ಯರ್ಥಿಗೆ ದಿಗಿಲು, ಮತದಾರರೂ ಕಂಗಾಲು
Team Udayavani, Dec 22, 2020, 11:08 AM IST
ಕಲಬುರಗಿ: ಅಭ್ಯರ್ಥಿ ಬಯಸಿದ ಮತ್ತು ತಾನು ಪ್ರಚಾರ ಮಾಡಿದ ಚಿಹ್ನೆಯ ಗುರುತು ಒಂದಾದರೆ, ಇಂದು ಚುನಾವಣೆ ಮತಪತ್ರದಲ್ಲಿ ಬೇರೆಯೊಂದು ಚಿಹ್ನೆ ಮುದ್ರಣವಾಗಿದೆ. ಇದರಿಂದ ಸ್ವತಃ ಅಭ್ಯರ್ಥಿ ದಿಗಿಲುಗೊಂಡರೆ, ಮತದಾನದ ಮಾಡಲು ಹೋದ ಮತದಾರರು ಸಹ ಕಂಗಾಲುಗೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಶ್ರೀಚಂದ್ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡ್ನಲ್ಲಿ ಈ ಪ್ರಸಂಗ ನಡೆದಿದ್ದು, ಹಲ್ಲುಜ್ಜುವ ಪೇಸ್ಟ್ ಬದಲು ಬ್ರಷ್ ಚಿಹ್ನೆ ಮುದ್ರಣವಾಗಿದೆ. ಇದರಿಂದ ಕೆಲ ಕಾಲ ಮತದಾನ ಸ್ಥಗಿತಗೊಂಡಿದೆ.
ಅಭ್ಯರ್ಥಿ ಗಜಾನಂದ ದತ್ತಾಪ್ರಸಾದ ಎಂಬುವರು ತಮ್ಮ ಪ್ರಚಾರ ಪತ್ರದಲ್ಲಿ ಟೂತ್ ಪೇಸ್ಟ್ ಚಿಹ್ನೆ ಹಾಕಿಕೊಂಡು ಪ್ರಚಾರ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ ಮತ ಚಲಾಯಿಸಲು ಹೋದ ಮತದಾರರೊಬ್ಬರು ಟೂತ್ ಪೇಸ್ಟ್ ಚಿಹ್ನೆಗಾಗಿ ಗಮನಿಸಿದ್ದಾರೆ. ಚಿಹ್ನೆ ಕಾಣದೆ ದಂಗಾಗಿದ್ದಾರೆ. ಹೊರಗೆ ಬಂದು ಮತದಾರ ಅಭ್ಯರ್ಥಿಗೆ ನೀನು ಟೂತ್ ಪೇಸ್ಟ್ ಗೆ ಮತ ಚಲಾಯಿಸಲು ಹೇಳಿದ್ದು, ಆದರೆ ಅಲ್ಲಿ ಈ ಚಿಹ್ನೆ ಇಲ್ಲ. ಬರಿ ಟೂತ್ ಬ್ರಷ್ ಇದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಮತಗಟ್ಟೆಯಲ್ಲಿ ಚುನಾವಣಾ ಅಧಿಕಾರಿ ಬಳಿ ಲೋಡೆಡ್ ರಿವಾಲ್ವರ್ ಪತ್ತೆ!
ನನಗೆ ಹಲ್ಲುಜ್ಜುವ ಪೇಸ್ಟ್ ಚಿಹ್ನೆ ನೀಡಲಾಗಿತ್ತು. ಇದೇ ಚಿಹ್ನೆ ಮೇಲೆಯೇ ಪ್ರಚಾರ ಕಾರ್ಯ ಕೈಗೊಂಡಿದ್ದೇನೆ. ಆದರೆ ಮತ ಪತ್ರದಲ್ಲಿ ಹಲ್ಲುಜ್ಜುವ ಬ್ರಷ್ ಪ್ರಿಂಟ್ ಆಗಿದೆ ಎಂದು ಅಭ್ಯರ್ಥಿ ಗಜಾನಂದ ತಕರಾರು ತೆಗೆದರು. ಅಲ್ಲದೇ, ಈ ಬಗ್ಗೆ ಚುನಾವಣಾಧಿಕಾರಿಗೆ ತಿಳಿಸಿದ್ದು, ಸದ್ಯಕ್ಕೆ ಮತದಾನ ಸ್ಥಗಿತಗೊಳಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ರಮೇಶ ಪೆದ್ದೆ, ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಚಿಹ್ನೆ ಸರಿಯಾಗಿದೆ. ಫಾರಂ ಸಂಖ್ಯೆ 10 ರಲ್ಲಿ 139 ಹಲ್ಲುಜ್ಜುವ ಬ್ರಷ್ ಎಂದೇ ನಮೂದಾಗಿದೆ ಎಂದು ಮತಗಟ್ಟೆ ಅಧಿಕಾರಿ ತಿಳಿಸಿದ್ದಾರೆ. ಅಭ್ಯರ್ಥಿ ದೂರು ನೀಡಲಿ ಪರಿಶೀಲಿಸಲಾಗುವುದು. ಚುನಾವಣೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.
ಇನ್ನು, ಈ ವಾರ್ಡ್ ನಲ್ಲಿ 2 ಸ್ಥಾನಗಳಿದ್ದು, 8 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ