ಅಂಗನವಾಡಿ ಕಾರ್ಯಕರ್ತೆಯರಿಂದ ಸಹಿ ಸಂಗ್ರಹ ಚಳವಳಿ


Team Udayavani, Jun 11, 2018, 9:56 AM IST

gul-4.jpg

ಕಲಬುರಗಿ: ನೇರ ನಗದು ವರ್ಗಾವಣೆ, ಅನುದಾನ ಕಡಿತ, ಖಾಸಗಿ ನರ್ಸರಿಗಳನ್ನು ಹೆಚ್ಚೆಚ್ಚು ತೆರೆಯಲು ಅವಕಾಶ
ಮಾಡಿಕೊಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಸಾಮೂಹಿಕ ಸಹಿ
ಸಂಗ್ರಹ ಚಳವಳಿ ನಡೆಯಿತು.

ಮಕ್ಕಳ ಬೆಳವಣಿಗೆ ಅಪೌಷ್ಟಿಕತೆಗೊಳಗಾಗಿ ಕುಂಠಿತವಾಗಬಾರದು ಎನ್ನುವ ಉದ್ದೇಶದಿಂದ 6 ವರ್ಷದೊಳಗಿನ ಮಕ್ಕಳ ದೈಹಿಕ ಬೆಳವಣಿಗೆಗೆ ಶೇ.40, ಮಾನಸಿಕ ಬೆಳವಣಿಗೆ ಶೇ.80 ಆಗುತ್ತದೆ. ಈ ವಯಸ್ಸಿನಲ್ಲಿ ಪೌಷ್ಟಿಕ ಆಹಾರ ಹಾಗೂ ಪ್ರಾಥಮಿಕ ಆರೋಗ್ಯ ಸೌಲಭ್ಯಗಳನ್ನು ನೀಡಲು ವಿಶ್ವಸಂಸ್ಥೆಯ ನೆರವಿನೊಂದಿಗೆ 1975 ರಲ್ಲಿ ಭಾರತ
ಸರ್ಕಾರ ಸಮಗ್ರ ಶಿಶು ಅಭಿವೃದ್ಧಿಯೋಜನೆ ಸ್ಥಾಪಿಸಿತ್ತು.

ಈಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಕಾಯಂ ಮಾಡುವ ಬದಲಿಗೆ 2014-15 ರಲ್ಲಿದ್ದ 18,391ಕೋಟಿ ರೂ.ದಿಂದ 2015-16ರಲ್ಲಿ 8754 ಕೋಟಿ ರೂ.ಗೆ ಇಳಿಸಿದೆ. ಈಗ ಕೇವಲ ಶೇ.25 ರಷ್ಟು ಅನುದಾನ ಮಾತ್ರ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಆಹಾರ, ಆರೋಗ್ಯ, ಶಿಕ್ಷಣವನ್ನು ಖಾಸಗಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳ
ಹಿತಾಸಕ್ತಿಗಳಿಗೆ ಬಲಿ ನೀಡಲು ಇಂತಹ ಯೋಜನೆಗಳಿಗೆ ಅನುದಾನ ಕಡಿತ ಮಾಡುತ್ತಿದೆ. ಮಾತ್ರವಲ್ಲದೇ
ಅಂಗನವಾಡಿ ಕೇಂದ್ರಗಳ ಉದ್ದೇಶಕ್ಕೆ ವಿರುದ್ಧವಾಗಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆಗೆ
ಮುಂದಾಗಿರುವುದು ಸರಿಯಲ್ಲ ಎಂದರು. 

ವಿಶ್ವ ಆರೋಗ್ಯ ಸಂಸ್ಥೆಯ ಡೆಪ್ಯೂಟಿ ಡೈರೆಕ್ಟರ್‌ ಡಾ| ಸೌಮ್ಯ ಸ್ವಾಮಿನಾಥನ್‌ ಅವರು ಅಂಗನವಾಡಿಗಳಲ್ಲಿ ತಾಜಾ
ಬೇಯಿಸಿದ ಆಹಾರ ನೀಡಬೇಕು, ನಗದು ನೀಡಿದರೆ ನೇರ ಫಲಾನುಭವಿಗಳಿಗೆ ದಕ್ಕುವುದಿಲ್ಲ ಎಂಬ ವರದಿ
ನೀಡಿದ್ದರೂ ಕೇಂದ್ರ ಸರ್ಕಾರದ ನೀತಿ ಆಯೋಗ ಹಾಗೂ ಇಲಾಖೆಯ ಸಚಿವರಾದ ಮೇನಕಾ ಗಾಂಧಿ ಅವರು ನೇರ
ನಗದು ವರ್ಗಾವಣೆಯ ಆದೇಶ ಹೊರಡಿಸಿ , ಈಗಾಗಲೇ 4 ಪ್ರಾಜೆಕ್ಟ್ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದಾರೆ.

ಬಿಹಾರದಲ್ಲಿ ಸಂಪೂರ್ಣವಾಗಿ ಜಾರಿಗೆ ತರಲು ಅಲ್ಲಿನ ರಾಜ್ಯ ಸರ್ಕಾರ ಮುಂದಾಗಿದೆ. 48 ವರ್ಷಗಳ ಐಸಿಡಿಎಸ್‌
ಯೋಜನೆಯನ್ನು ಉಳಿಸಲು ಸಿಐಟಿಯು ಸಂಯೋಜಿತ ರಾಜ್ಯ ಅಂಗನವಾಡಿ ನೌಕರರ ಸಂಘವು ಸಾಮೂಹಿಕವಾಗಿ
ಸಹಿ ಸಂಗ್ರಹಿಸಿ ಸೆ.5 ರಂದು ಪ್ರಧಾನಮಂತ್ರಿಗೆ ಸಲ್ಲಿಸಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ಶಾಂತಾ ಘಂಟಿ, ಗೌರಮ್ಮ ಪಾಟೀಲ, ದೇವಮ್ಮಾ ಯರಗಲ್‌, ಬಾಣಿ ಸುಭಾಶ್ಚಂದ್ರ, ಮಹಾದೇವಿ
ಪೋಲಕಪಳ್ಳಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.