ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ
Team Udayavani, Jan 28, 2021, 10:10 AM IST
ಕಲಬುರಗಿ: ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರನ್ನು ಹೆದರಿಸಿ, ಬೆದರಿಸಿ ದರೋಡೆ ಮಾಡುತ್ತಿದ್ದ ಆರು ಮಂದಿ ದರೋಡೆಕೋರರನ್ನು ಕಲಬುರಗಿ ನಗರ ರೌಡಿ ನಿಗ್ರಹ ಪಡೆಯ ಪೊಲೀಸರು ಬಂಧಿಸಿದ್ದಾರೆ.
ಮಿರ್ಜಾ ಬೇಗ್, ಮಿರ್ಜಾ ಸಲ್ಮಾನ್, ಮಹಮ್ಮದ್ ರಫೀಕ್, ಶೇಖ್ ವಸೀಂ, ಮಹಮ್ಮದ್ ಜುಬೇರ್, ಮಾಜೀದ್ ಎಂಬುವವರೇ ಬಂಧಿತ ದರೋಡೆಕೋರರು.
ಇದನ್ನೂ ಓದಿ:ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
ದರೋಡೆ, ಲ್ಯಾಂಡ್ ಡೀಲ್ ಮಾಡುತ್ತಿದ್ದ ಈ ಖತರ್ನಾಕ ಖದೀಮರು, ಬಿಲ್ಡಪ್ ಕೊಡಲು ಅನೇಕರನ್ನು ಥಳಿಸಿ ವಿಡಿಯೋ ಮಾಡಿಕೊಂಡಿದ್ದರು. ಅಲ್ಲದೇ, ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು, ಕುಣಿಯುತ್ತಾ ವಿಡಿಯೋ ಮಾಡಿಸಿಕೊಳ್ಳುತ್ತಿದ್ದರು.
ಇತ್ತೀಚೆಗೆ ಯುವಕನೋರ್ವನನ್ನು ಹಿಗ್ಗಾಮುಗ್ಗಾ ಥಳಿಸಿರುವ ದುಷ್ಕರ್ಮಿಗಳು, ಆತನ ತಲೆ ಕೆಳಗೆ, ಕೈ-ಕಾಲು ಮೇಲೆ ಮಾಡಿ ಹಿಡಿದು ಮನಸೋ ಇಚ್ಛೆ ಥಳಿಸಿ, ವಿಡಿಯೋ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇವರುಗಳು ಬುಧವಾರ ರಾತ್ರಿ ತಾವರಗೇರಾ ರಸ್ತೆಯಲ್ಲಿ ದರೋಡೆ ಹೊಂಚು ಹಾಕಿದ್ದಾರೆ ಎಂಬ ಮಾಹಿತಿ ಬಂದಿತ್ತು. ಈ ಬಗ್ಗೆ ತಕ್ಷಣವೇ ಕಾರ್ಯಾಚರಣೆಗಿಳಿದ ರೌಡಿ ನಿಗ್ರಹ ದಳದ ಪಿಎಸ್ಐ ವಾಹಿದ್ ಕೋತ್ವಾಲ್ ನೇತೃತ್ವದ ಪೊಲೀಸರ ತಂಡ, ಆರು ಮಂದಿ ದುರುಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: ಬಸ್ ನಿರ್ವಾಹಕನಿಗೆ ಚೂರಿ ಇರಿದ ದುಷ್ಕರ್ಮಿಗಳು: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ
ಬಂಧಿತರಿಂದ ಎರಡು ತಲವಾರ್, ಮೂರು ಲಾಂಗ್, ಖಾರದ ಪುಡಿ, ಹಗ್ಗ ಜಪ್ತಿ ಮಾಡಲಾಗಿದೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ
HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ
PM ಮೋದಿ ಸಮನಾದ ನಾಯಕ ಕಾಂಗ್ರೆಸ್ನಲ್ಲಿಲ್ಲ: ಬಿಎಸ್ವೈ
Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ
Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ