ಕುಂಟುತ್ತ ಸಾಗಿದೆ ಅಂಬೇಡ್ಕರ್‌ ಭವನ ಕಾಮಗಾರಿ

1.5 ಕೋಟಿ ರೂ. ಅನುದಾನ ಮೀಸಲಿದ್ದರೂ ಕೆಲಸ ಅಪೂರ್ಣ ನೆಲಮಾಳಿಗೆ ಮಲ-ಮೂತ್ರಕ್ಕೆ ಬಳಕೆ

Team Udayavani, Jan 4, 2021, 4:07 PM IST

ಕುಂಟುತ್ತ ಸಾಗಿದೆ ಅಂಬೇಡ್ಕರ್‌ ಭವನ ಕಾಮಗಾರಿ

ವಾಡಿ: ಪಟ್ಟಣದ ಇಂದಿರಾ ಕಾಲೋನಿ ಬಡಾವಣೆ ವೃತ್ತದಲ್ಲಿ ನಿರ್ಮಿಸಲಾಗುತ್ತಿರುವ ಕೋಟಿ ರೂ. ವೆಚ್ಚದ ಅಂಬೇಡ್ಕರ್‌ ಭವನ ಕಟ್ಟಡ ಕಾಮಗಾರಿ ಕಳೆದ ಐದು ವರ್ಷಗಳಿಂದ ಕುಂಟುತ್ತಾ ಸಾಗಿದೆ.

ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ಸಮಾಜ ಕಲ್ಯಾಣ ಸಚಿವರಾಗಿದ್ದ ವೇಳೆ ಬೌದ್ಧ ಸಮಾಜದ ನಾಯಕರು ಸಲ್ಲಿಸಿದ ಕಲ್ಯಾಣ ಮಂಟಪದ ಬೇಡಿಕೆಗೆ ಸ್ಪಂದಿಸಿ, ಅಂಬೇಡ್ಕರ್‌ ಭವನ ನಿರ್ಮಿಸಲು ಮುಂದಾಗಲಾಗಿತ್ತು.ಅದಕ್ಕಾಗಿ ಇಲಾಖೆಯಿಂದ 1.5 ಕೋಟಿ ರೂ. ವೆಚ್ಚದ ಅನುದಾನ ಮೀಸಲಿಟ್ಟು ಅಡಿಗಲ್ಲುನೆರವೇರಿಸಲಾಗಿತ್ತು. 2016-17ರಲ್ಲಿ ಕಾಮಗಾರಿ ಕೈಗೆತ್ತಿಕೊಂಡ ಭೂಸೇನಾ ನಿಗಮ (ಲ್ಯಾಂಡ್‌ ಆರ್ಮಿ) ಐದು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸಿಲ್ಲ.

ಅಂಬೇಡ್ಕರ್‌ ಭವನ ಕಟ್ಟಡ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದರಿಂದ ಭವನದವಿಶಾಲವಾದ ನೆಲಮಾಳಿಗೆ ಆವರಣದಲ್ಲಿ ಚರಂಡಿನೀರು ಸಂಗ್ರಹವಾಗಿ, ಸಾರ್ವಜನಿಕರ ಮಲ ಮೂತ್ರವಿಸರ್ಜನೆಗೆ ಬಳಕೆಯಾಗುತ್ತಿದೆ. ದೀರ್ಘ‌ ಕಾಲಕಟ್ಟಡ ಕಾಮಗಾರಿ ಸ್ಥಗಿತವಾಗಿದ್ದರಿಂದ ನಾಯಿ,ಹಂದಿಗಳ ವಾಸಸ್ಥಾನವಾಗಿ ಪರಿವರ್ತನೆಯಾಗಿದೆ.ಸ್ಲಂ ಬಡಾವಣೆ ಮಹಿಳೆಯರು ಬಹಿರ್ದೆಸೆಗೆ ಬಳಕೆ ಮಾಡಿಕೊಳ್ಳುತ್ತಿದ್ದರೂ ಹೇಳುವವರು, ಕೇಳುವವರು ಇಲ್ಲದಂತಾಗಿದೆ.

ಭವನ ನಿರ್ಮಾಣದ ಜವಾಬ್ದಾರಿ ಹೊತ್ತ ಭೂಸೇನಾ ನಿಗಮದ ಅಧಿಕಾರಿಗಳು ಅಂಬೇಡ್ಕರ್‌ ಹೆಸರಿನ ಕಟ್ಟಡದ ಪಾವಿತ್ರ್ಯತೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಅಲ್ಲದೇ ಬಿಜೆಪಿ ಸರಕಾರದಿಂದಅನುದಾನ ಬಿಡುಗಡೆಯಾಗುವಲ್ಲಿಯೂವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ.

ಶಾಸಕ ಪ್ರಿಯಾಂಕ್‌ ಖರ್ಗೆ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ವಾಡಿ ನಗರದ ಅಂಬೇಡ್ಕರ್‌ ಭವನ ಕಾಮಗಾರಿಗೆ ಕೋಟಿ ರೂ.ಅನುದಾನ ಮೀಸಲಿಡಲಾಗಿತ್ತು. ಆದರೆ ಈಗ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಅಲ್ಲದೆ ಅಧಿಕಾರಿಗಳೂ ನಿರ್ಲಕ್ಷé ತೋರುತ್ತಿದ್ದಾರೆ. ಬೇಜವಾಬ್ದಾರಿಮುಂದುವರಿದರೆ ಹೋರಾಟ ಮಾಡಲಾಗುವುದು. -ಶ್ರವಣಕುಮಾರ ಮೊಸಲಗಿ, ತಾಲೂಕು ಅಧ್ಯಕ್ಷ, ಮಾನವ ಬಂಧುತ್ವ ವೇದಿಕೆ

ಅಂಬೇಡ್ಕರ್‌ ಭವನ ಕಾಮಗಾರಿ ನಿರ್ಮಾಣಕ್ಕೆ ಲಾಕ್‌ ಡೌನ್‌, ಚುನಾವಣಾ ನೀತಿಸಂಹಿತೆ ಅಡ್ಡಿಯಾಗಿತ್ತು. ಅಲ್ಲದೇ ಹಂತಹಂತವಾಗಿ ಕಟ್ಟಡದ ನೀಲನಕ್ಷೆ ಬದಲಾಗುತ್ತಿದೆ. ಇನ್ನೂ 70 ಲಕ್ಷ ರೂ. ಅನುದಾನ ಬಿಡುಗಡೆಯಾಗಬೇಕಿದೆ. ಹಣ ಕಡಿಮೆ ಬಿದ್ದರೆ ಶಾಸಕರು ಇನ್ನಷ್ಟು ಅನುದಾನ ಹೆಚ್ಚಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಈಗಮತ್ತೆ ಕೆಲಸ ಆರಂಭಿಸಿದ್ದೇವೆ. ಕಟ್ಟಡ ಪೂರ್ಣಗೊಳ್ಳಲು ಇನ್ನೂ ಒಂದು ವರ್ಷ ಬೇಕಾಗುತ್ತದೆ. ಬಹುದೊಡ್ಡ ಭವನವಾಗಿ ನಿರ್ಮಾಣಗೊಳ್ಳಲಿದೆ. -ಮಹ್ಮದ್‌ ಮಹೆಬೂಬ್‌, ಕಿರಿಯ ಅಭಿಯಂತರ, ಭೂಸೇನಾ ನಿಗಮ

 

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.