ಕಾಂಗ್ರೆಸ್ನಿಂದಲೇ ಸಾಮಾಜಿಕ ನ್ಯಾಯ
Team Udayavani, Mar 30, 2022, 11:48 AM IST
ಚಿತ್ತಾಪುರ: ರಾಜಕೀಯದಲ್ಲಿ ಎಲ್ಲ ಜಾತಿ, ಜನಾಂಗದವರಿಗೆ ಸಮಾನ ಅವಕಾಶ ನೀಡುವ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2020 ನವೆಂಬರ್ 9 ರಂದು ಪುರಸಭೆ ಅಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀಮಾರ್ನದಂತೆ ಅಧ್ಯಕ್ಷ ಹುದ್ದೆಯ ಅಧಿಕಾರವಧಿಯ 30 ತಿಂಗಳ ಅವಧಿಯಲ್ಲಿ ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ ಅವರಿಗೆ ತಲಾ 15 ತಿಂಗಳು ಎಂದು ಅಧಿಕಾರ ಹಂಚಿಕೆ ಮಾಡಲಾಗಿತ್ತು. ಅಧ್ಯಕ್ಷ ಹುದ್ದೆ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಆಗ ಅಧ್ಯಕ್ಷೆ ಹುದ್ದೆಗೆ ಚಂದ್ರಶೇಖರ ಕಾಶಿ ಮತ್ತು ಮಲ್ಲಿಕಾರ್ಜುನ ಕಾಳಗಿ ಅವರ ನಡುವೆ ತೀವ್ರ ಪೈಪೋಟಿ ಉಂಟಾಗಿತ್ತು. ಆಗ ಅನುಕಂಪದ ಆಧಾರದ ಮೇಲೆ ಚಂದ್ರಶೇಖರ ಕಾಶಿ ಅವರಿಗೆ ಅವಕಾಶ ನೀಡಲಾಗಿತ್ತು. ಈಗ ಮಲ್ಲಿಕಾರ್ಜುನ ಕಾಳಗಿ ಅವರಿಗೆ ಸಾಮಾಜಿಕ ನ್ಯಾಯದಡಿ ಅಧ್ಯಕ್ಷ ಹುದ್ದೆಗೆ ಅವಕಾಶ ನೀಡಲಾಗಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರಂತ ಗಟ್ಟಿ ನಾಯಕತ್ವ ಇರುವುದರಿಂದ ಅಧಿಕಾರ ಹಂಚಿಕೆ ಸಾಧ್ಯವಾಗಿದೆ. ಇಲ್ಲಿ ಯಾವುದೇ ಕುದುರೆ ವ್ಯಾಪಾರ ಅಥವಾ ಸದಸ್ಯರ ಖರೀದಿಯಂತಹ ಕೆಟ್ಟ ಚಾಳಿಗೆ ಅವಕಾಶ ನೀಡಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಮುಖಂಡರಾದ ಮುಕ್ತಾರ ಪಟೇಲ್, ಸೂರ್ಯಕಾಂತ ಪೂಜಾರಿ, ರಸೂಲ್ ಮುಸ್ತಫಾ, ಪಾಶಾಮಿಯ್ನಾ ಖುರೇಷಿ, ಈರಪ್ಪ ಭೋವಿ, ಶೀಲಾ ಕಾಶಿ, ಶಿವಕಾಂತ ಬೆಣ್ಣೂರಕರ್, ಅಹ್ಮದ್ ಸೇಠ್, ನಾಗಯ್ಯ ಗುತ್ತೇದಾರ, ಶಿವಾಜಿ ಕಾಶಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ