ಸಮಾಜ ಸುಧಾರಕ ಲಿಂ| ಡಾ| ಮಹಾಂತ ಅಪ್ಪಗಳು


Team Udayavani, Nov 20, 2018, 11:01 AM IST

gul-2.jpg

ಕಲಬುರಗಿ: ಎಲ್ಲ ಜನಾಂಗದವರು ವಚನಗಳ ಅಧ್ಯಯನ ಮಾಡಬೇಕು. ವಚನಗಳಲ್ಲಿ ಬೆಳಕಿದೆ. ವಚನಗಳಲ್ಲಿ ಬದುಕು ಇದೆ. ನೊಂದವರಿಗೆ ಸಾಂತ್ವನವಿದೆ. ಹಸಿವು ತೃಷೆಗಳು ಮನುಷ್ಯನಿಗೆ ಹೇಗೆ ಅನಿವಾರ್ಯವೋ ಹಾಗೆಯೇ ಉತ್ತಮ ಜೀವನ ರೂಪಿಸಿಕೊಳ್ಳಲು ವಚನಗಳ ಅಧ್ಯಯನ ಅತ್ಯಗತ್ಯ ಎಂದು ಗುಳೇದಗುಡ್ಡ ಕಾಡಸಿದ್ಧೇಶ್ವರ ಮಠದ ಪೂಜ್ಯ ಗುರುಬಸವದೇವರು ಹೇಳಿದರು.

ನಗರದ ಬಸವ ಸಮಿತಿಯಲ್ಲಿ ಮಂಗಲ ಜ್ಯೋತಿ ಶರಣ ಗಾಣದ ಕಣ್ಣಪ್ಪಯ್ಯ ಸ್ಮರಣಾರ್ಥ ನಡೆದ ಅರಿವಿನ ಮನೆ 572ನೇ ದತ್ತಿ ಕಾರ್ಯಕ್ರಮದಲ್ಲಿ ಅನುಭಾವ ನೀಡಿ, ಲಿಂ| ಡಾ| ಮಹಾಂತ ಅಪ್ಪಗಳು ಶರಣ ಸಂಸ್ಕೃತಿ ಪ್ರತೀಕವಾಗಿದ್ದರು. ಈ ನಾಡಿನಲ್ಲಿ ಹಲವು ಮಠ ಮಾನ್ಯಗಳು ಶರಣ ಸಂಸ್ಕೃತಿ ಉಳಿಸಲು ಬೆಳೆಸಲು ಗಣನೀಯ ಕಾರ್ಯಮಾಡಿವೆ.

ಅವರಲ್ಲಿ ಇಳಕಲ್ಲ ಮಹಾಂತ ಅಪ್ಪಗಳು ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಶ್ರೀಗಳು ಈ ನಿಟ್ಟಿನಲ್ಲಿ ಮಹತ್ವದ ಕಾರ್ಯ ಮಾಡಿದ್ದಾರೆ ಎಂದು ಹೇಳಿದರು. ಇವರೊಂದಿಗೆ ಡಾ| ಎಂ.ಎಂ. ಕಲಬುರಗಿ ಅವರ ಸೇವೆ ಮರೆಯುವಂತಿಲ್ಲ.

ಲಿಂ| ಮಹಾಂತ ಅಪ್ಪಗಳು ಶ್ರೇಷ್ಠ ಸಂತರು. ನಿಜವಾದ ವಿರಕ್ತರು. ಪ್ರಭಾವಿ ಪ್ರವಚನಕಾರರಾಗಿ ಜನಮನವನ್ನು ಸೂರೆಗೊಂಡಂತಹ ಅಪ್ರತಿಮ ವಾಗ್ಮಿಗಳಾಗಿದ್ದರು. ಹುಬ್ಬಳ್ಳಿ ಮೂರು ಸಾವಿರ ಮಠದ ಪೂಜ್ಯ ಗಂಗಾಧರ ಮಹಾ ಸ್ವಾಮಿಗಳು ಇಳಕಲ್ಲ ಚಿತ್ತರಗಿ ಸಂಸ್ಥಾನ ಮಠಕ್ಕೆ ಲಿಂ| ಮಹಾಂತ ಅಪ್ಪಗಳ ಹೆಸರನ್ನು ಸೂಚಿಸಿ ಅವರ ವ್ಯಕ್ತಿತ್ವಕ್ಕೆ ಮೆರುಗು ತುಂಬುತ್ತಾರೆ. ಬಸವ ತತ್ವಕ್ಕೆ ತಮ್ಮನ್ನೇ
ಅರ್ಪಿಸಿಕೊಂಡು ಸಮಾಜದಲ್ಲಿ ಅಡಗಿದ್ದ ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ತಮ್ಮ ಕೊನೆಯುಸಿರು ಇರುವವರೆಗೂ ಮಹಂತ ಅಪ್ಪಗಳು ಶ್ರಮಿಸಿದ್ದಾರೆ. ಮಹಾಂತ ಜೋಳಿಗೆ ಹಿಡಿದು ಜನರಲ್ಲಿ ಅಡಗಿದ್ದ ದುಶ್ಚಟ, ವ್ಯಸನಗಳನ್ನು ಆ ಜೋಳಿಗೆಯಲಿ ಹಾಕಿಸಿಕೊಂಡು ಅವರಿಗೆ ಹೊಸ ಬದುಕುಕೊಟ್ಟವರು ಮಹಾಂತಪ್ಪಗಳು.

ತಮ್ಮ ಮಠದಲ್ಲಿ ನಡೆಯುತ್ತಿದ್ದ ರುದ್ರಾಭಿಷೇಕದಂತಹ ಅರ್ಥಹೀನ ಸಂಪ್ರದಾಯಯಗಳನ್ನು ನಿಲ್ಲಿಸಿದರು. ಶರಣ ಸಿದ್ಧಾಂತ ವಿದ್ಯಾಪೀಠ ಸ್ಥಾಪಿಸಿ ಇಡೀ ನಾಡಿನಲ್ಲಿ ಶರಣ ಸಂಸ್ಕೃತಿ ಸೌರಭ ಬೀರಿದರು. ಸಮಾಜದಲ್ಲಿ ಅಡಗಿದ್ದ ಮೌಡ್ಯ ದೂರ ಮಾಡಲು ತಮ್ಮ ಪ್ರತಿ ನುಡಿ-ನಡೆಯಲ್ಲಿ ತೋರಿಸಿದಂತಹ ಅಪರೂಪದ ವ್ಯಕ್ತಿ ಲಿಂ|ಮಹಾಂತಪ್ಪಗಳಾಗಿದ್ದರು ಎಂದು ಹೇಳಿದರು.

ಕಲಬುರಗಿ ಬಸವ ಸಮಿತಿ ಅಧ್ಯಕ್ಷ ಡಾ| ವಿಲಾಸವತಿ ಖೂಬಾ, ಉಪಾಧ್ಯಕರಾದ ಡಾ| ಜಯಶ್ರೀ ದಂಡೆ. ಡಾ| ಬಿ.ಡಿ. ಜತ್ತಿ
ವಚನ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ| ವೀರಣ್ಣ ದಂಡೆ, ಜಿಲ್ಲಾ ಗಾಣಿಗರ ಸಮಾಜದ ಅಧ್ಯಕ್ಷ ಅಪ್ಪಾರಾವ ಪಾಟೀಲ ಅತನೂರ, ಕಾರ್ಯದರ್ಶಿಗಳಾದ ಡಾ| ಕೇಶವ ಕಾಬಾ, ಜಿಲ್ಲಾ ಗಾಣಿಗರ ನೌಕರರ ಸಂಘದ ಅಧ್ಯಕ್ಷ ಸಂಗನ ಗೌಡ ಪಾಟೀಲ ಹಾಗೂ ಜಿಲ್ಲಾ ಗಾಣಿಗರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಸಜ್ಜನ ಇದ್ದರು. ಬಸವ ಸಮಿತಿ ಕಾರ್ಯದರ್ಶಿ ಎಚ್‌.ಕೆ. ಉದ್ದಂಡಯ್ಯ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.