ಕೆಲವರ ಕುತಂತ್ರ ಸಹಿಸಲು ಸಾಧ್ಯವಿಲ್ಲ


Team Udayavani, Apr 14, 2017, 3:42 PM IST

gul3.jpg

ಚಿಂಚೋಳಿ: ನನ್ನ ವಿರುದ್ಧ ಕೆಲವು ಕಾರ್ಯಕರ್ತರು ನಡೆಸುತ್ತಿರುವ ಕುತಂತ್ರ ಇನ್ನು ಮುಂದೆ ಸಹಿಸಲು ಆಗುವುದಿಲ್ಲ ಸಂಸದೀಯ ಕಾರ್ಯದರ್ಶಿ ಡಾ| ಉಮೇಶ ಜಾಧವ ಹೇಳಿದರು. ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. 

2018ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ನಾನೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿರುತ್ತೇನೆ ಮತ್ತು ಗೆಲುವು ನನ್ನದೆ ಆಗಿರುತ್ತದೆ. ಪಕ್ಷದಲ್ಲಿ ಹೊಸ ಮತ್ತು ಹಳೆ ಕಾಂಗ್ರೆಸ್‌ ಕಾರ್ಯಕರ್ತರು ಎಂಬ ಭೇದಭಾವ ಮರೆತು ನಾವೆಲ್ಲರೂ ಒಂದೇ ಪಕ್ಷದ ಕಾರ್ಯಕರ್ತರು ಎಂಬುದನ್ನು ಮರೆಯಬಾರದು ಎಂದು ಹೇಳಿದರು. ಚಿಂಚೋಳಿ ಮತಕ್ಷೇತ್ರ ಅತಿ ಹಿಂದುಳಿದ ಪ್ರದೇಶ ಆಗಿದೆ.

ಹಾಗಾಗಿ ನಮ್ಮ ಕಾಂಗ್ರೆಸ್‌ ಪಕ್ಷದ ಆಡಳಿತ ಸರಕಾರದಿಂದ ಕಳೆದ 4 ವರ್ಷಗಳಲ್ಲಿ ವಿವಿಧ ಯೋಜನೆ ಅಡಿ ಸಾವಿರ ಕೋಟಿ ರೂ. ಮಂಜೂರಿಗೊಳಿಸಿ ಸಾಕಷ್ಟು ಅಭಿವೃದ್ಧಿಗೊಳಿಸಿದ್ದೇನೆ. ನಮ್ಮ ಕ್ಷೇತ್ರವನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡದೇ ಇರುವುದರಿಂದ ಕೇಂದ್ರ ಸರಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ.

ಆದರೆ ಚಿತ್ತಾಪುರ, ಸೇಡಂ ಕ್ಷೇತ್ರಗಳು ಬರ ಪೀಡಿತ ಪ್ರದೇಶ ಎಂದು 3 ದಶಕಗಳ ಹಿಂದೆ ಕೇಂದ್ರ ಸರಕಾರ ಘೋಷಣೆ ಮಾಡಿದೆ. ಹೀಗಾಗಿ ಆ ಎರಡೂ ತಾಲೂಕುಗಳಿಗೆ ಹೆಚ್ಚಿನ ಅನುದಾನ ಬರುತ್ತಿದೆ. ಹಾಗಾಗಿ ಬ್ಯಾರೇಜ್‌ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು. 

ಸುಂಠಾಣ ಗ್ರಾಮಕ್ಕೆ 8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರಿಕರಣ ಮಾಡಲಾಗಿದೆ. ಆದರೂ ಆ ಗ್ರಾಮದಲ್ಲಿ ಜನರು ಕತ್ತೆಗಳ ಮೇಲೆ ಸಂಚರಿಸುತ್ತಾರೆ ಎಂದು ಮಾಧ್ಯಮದಲ್ಲಿ ವರದಿ ಪ್ರಸಾರ ಮಾಡುತ್ತಾರೆ. ಚಿಂಚೋಳಿ ತಾಲೂಕಿಗೆ ಸಚಿವರಾದ ಡಿ.ಕೆ. ಶಿವಕುಮಾರ, ತನ್ವೀರ್‌ ಸೇಠ ಆಗಮಿಸಿದ ಸಂದರ್ಭದಲ್ಲಿ ಕೇವಲ 6 ಜನ ಬಿಜೆಪಿ ಕಾರ್ಯಕರ್ತರು ಘೇರಾವ್‌ ಹಾಕಿರುವ ಸಂಗತಿ ರಾಷ್ಟ್ರೀಯ ಸುದ್ದಿಯಾಗಿತ್ತು.

ಆದರೆ ನಮ್ಮ ಸರಕಾರದ ಸಾಧನೆಗಳ ಬಗ್ಗೆ ಮಾಧ್ಯಮಗಳು ಸರಿಯಾಗಿ ಬರೆಯುವುದಿಲ್ಲ ಮತ್ತು ಪ್ರಸಾರ ಮಾಡುವುದಿಲ್ಲ ಎಂದು ಮಾಧ್ಯಮ ವಿರುದ್ಧ ಹರಿಹಾಯ್ದರು. ಮಧುಸೂಧನರೆಡ್ಡಿ ಕಲ್ಲೂರ, ಗೋಪಾಲರಾವ ಕಟ್ಟಿಮನಿ, ಕೆ.ಎಂ. ಬಾರಿ, ಆರ್‌. ಗಣಪತರಾವ, ಅಮಜದ್‌ ಅಲಿ, ಅಬ್ದುಲ್‌ ಬಾಸೀತ್‌, ಲಕ್ಷಣ ಆವಂಟಿ ಮಾತನಾಡಿದರು. ರಾಮಶೆಟ್ಟಿ ಪವಾರ ಸ್ವಾಗತಿಸಿದರು. ನಾಗೇಶ ಗುಣಾಜಿ ನಿರೂಪಿಸಿದರು. ಉಮಾ ಪಾಟೀಲ ವಂದಿಸಿದರು.  

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.