ಶೇ.15ಕ್ಕಿಂತ ಅಧಿಕ ಬಿತ್ತನೆ

ಮನೆ ಮಂದಿಯೆಲ್ಲ ಕೃಷಿಯತ್ತ ಒಲವು

Team Udayavani, Sep 16, 2020, 6:02 PM IST

ಶೇ.15ಕ್ಕಿಂತ ಅಧಿಕ ಬಿತ್ತನೆ

ಸಾಂದರ್ಭಿಕ ಚಿತ್ರ

ಜೇವರ್ಗಿ: ಕೋವಿಡ್ ತಂದೊಡ್ಡಿದ ಸಂಕಷ್ಟ ಪರಿಸ್ಥಿತಿಗೆ ಎಲ್ಲ ಕ್ಷೇತ್ರಗಳು ತಲ್ಲಣಿಸಿದ್ದರೆ, ಕೃಷಿ ಕ್ಷೇತ್ರಕ್ಕೆ ಮಾತ್ರ ಅದರ ಎಫೆಕ್ಟ್ ತಟ್ಟಿಲ್ಲ. ಉತ್ತಮ ವರ್ಷಧಾರೆ ನಡುವೆ ಈ ವರ್ಷ ದಾಖಲೆಯ ಬಿತ್ತನೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೇ ಶೇ.15% ಕ್ಕಿಂತ ಹೆಚ್ಚುವರಿ ಬಿತ್ತನೆಯಾಗಿದೆ.

ಪ್ರಸಕ್ತ ವರ್ಷ ಸಕಾಲದಲ್ಲಿ ಉತ್ತಮ ಮಳೆಯಾಗಿ ತಾಲೂಕಿನ ಜನರ ಜೀವನಾಡಿ ಭೀಮಾ ನದಿ ತುಂಬಿಹರಿಯುತ್ತಿದ್ದು, ಕೃಷ್ಣ ಭಾಗ್ಯ ಜಲ ನಿಗಮದ ಕಾಲುವೆಗಳಲ್ಲಿ ನೀರುಹರಿಯುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣ ಸೃಷ್ಟಿಯಾಯಿತು. ಇದರ ಬೆನ್ನ ಹಿಂದೆಯೇ ಕೃಷಿ ಚಟುವಟಿಕೆಗಳು ಗರಿಗೆದರಿದವು. ತೊಗರಿ, ಹತ್ತಿ, ಸೂರ್ಯ ಕಾಂತಿ, ಮೆಕ್ಕೆ ಜೋಳ, ಕಬ್ಬು ಬಿತ್ತನೆ ಕಾರ್ಯ ಬಿರುಸುಗೊಂಡಿತು. ಇದರ ಪರಿಣಾಮ ಸೆಪ್ಟೆಂಬರ್‌ ತಿಂಗಳ ಮಧ್ಯದ ವೇಳೆಗೆ ಶೇ.90% ಬಿತ್ತನೆ ನಡೆದಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ತಾಲೂಕಿನಲ್ಲಿ ಬಿತ್ತನೆ 75%-80% ರಷ್ಟು ಬಿತ್ತನೆ ನಡೆದಿತ್ತು. ಕೊರೊನಾ ಸಂಕಷ್ಟಕ್ಕೆ ಹೆದರಿ ಮಹಾನಗರಗಳು ಹಾಗೂ ಹೊರ ಜಿಲ್ಲೆಗಳಿಂದ ವಾಪಸಾದವರು ಬಹುತೇಕ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಇದರಿಂದ ದಶಕಗಳಿಂದ ಬೀಳು ಬಿದ್ದಿದ್ದ ಭೂಮಿಗಳಲ್ಲೂ ಕೃಷಿ ಚಟುವಟಿಕೆ ಆರಂಭಗೊಂಡಿದೆ. ಉದ್ಯೋಗ ಕಳೆದುಕೊಂಡವರು ಕೃಷಿಯನ್ನು ಜೀವನಾಧಾರ ಮಾಡಿಕೊಂಡಿರುವುದರಿಂದ ಶೇಕಡಾವಾರು ಬಿತ್ತನೆ ಪ್ರಮಾಣ ಹೆಚ್ಚಳವಾಗಿದೆ. ಕೋವಿಡ್ ತಂದಿಟ್ಟ ತುರ್ತು ಪರಿಸ್ಥಿತಿ ಸದ್ಯಕ್ಕೆ ನಿವಾರಣೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ.

ಮುಂದಿನ ಒಂದು ವರ್ಷ ಉದ್ಯೋಗವಕಾಶಗಳು ಸೃಷ್ಟಿಯಾಗುವ ಬಗ್ಗೆ ನಂಬಿಕೆಯೂ ಇಲ್ಲ. ಹಾಗಾಗಿ ಹೊರಗಿನಿಂದ ಬಂದ ಬಹಳಷ್ಟು ಜನರು ಕೃಷಿಯಲ್ಲೇ ಬದುಕು ಕಟ್ಟಿಕೊಳ್ಳುವಪ್ರಯತ್ನ ನಡೆಸುತ್ತಿದ್ದಾರೆ. ಹೊರಗಿನಿಂದ ಬಂದವರಲ್ಲಿ ಯುವಕರು ಕೃಷಿಯತ್ತ ಮುಖ ಮಾಡಿದ್ದಾರೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಹಳ್ಳಿಗಳಲ್ಲಿರುವ ಹಿರಿಯರು ಮತ್ತೆ ನಗರ ಪ್ರದೇಶಗಳಿಗೆ ತೆರಳದಂತೆ ಮನವೊಲಿಸಿದ್ದಾರೆ. ಹೊಸದಾಗಿ ಜಮೀನು ಖರೀದಿಸಿ ವ್ಯವಸಾಯದಲ್ಲಿ ತೊಡಗುವಂತೆ ಮಾಡುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಸಕಾಲಕ್ಕೆ ಮಳೆಯಾಗದೇ ಅನ್ನದಾತ ಕಣ್ಣೀರಲ್ಲಿ ಕೈ ತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಜಮೀನುಗಳನ್ನು ಬೇರೆಯವರಿಗೆ ಗುತ್ತಿಗೆ ನೀಡುವಂತಾಗಿತ್ತು. ಆದರೆ ಪ್ರಸಕ್ತ ವರ್ಷ ಮನೆಗಳಲ್ಲಿ ಹೆಚ್ಚು ಸಂಖ್ಯೆಯ ಜನರು ಇರುವುದರಿಂದ ಎಲ್ಲರೂ ಒಟ್ಟಾಗಿಬೇಸಾಯದಲ್ಲಿ ತೊಡಗಿಸಿಕೊಂಡಿದ್ದಾರೆ.ಇದೂ ಸಹ ತಾಲೂಕಿನಲ್ಲಿ ಕೃಷಿ ಕ್ಷೇತ್ರ ಬೆಳವಣಿಗೆಯತ್ತ ಸಾಗಲುಕಾರಣವಾಗಿದೆ.

ಕಳೆದ ಐದಾರು ವರ್ಷಗಳಲ್ಲಿ ಬೀಳದ ಮಳೆ ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಮುಂಗಾರು ಬೆಳೆಗಳ ಇಳುವರಿ ಗಣನೀಯವಾಗಿ ಹೆಚ್ಚಳವಾಗಲಿದೆ. ರೈತರು ಕೃಷಿ ಇಲಾಖೆ ಅಧಿ ಕಾರಿಗಳ ಸಲಹೆ ಪಡೆದು ಬೆಳೆಗಳಿಗೆ ರಸಗೊಬ್ಬರ, ಕ್ರಿಮಿನಾಶಕ ಅಗತ್ಯ ಪ್ರಮಾಣದಲ್ಲಿ ಬಳಸಬೇಕು.ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ, 64,450 ಹೆಕ್ಟೇರ್‌, ಹತ್ತಿ 42,725 ಹೆಕ್ಟೇರ್‌, ಸಜ್ಜೆ, ಸೂರ್ಯಕಾಂತಿ, ಮೆಕ್ಕೆ ಜೋಳ 1000 ಹೆಕ್ಟೇರ್‌, ಹೆಸರು,1,250 ಹೆಕ್ಟೇರ್‌, ಎಳ್ಳು 500 ಹೆಕ್ಟೇರ್‌ ಸೇರಿದಂತೆ ಒಟ್ಟು 1,18,271 ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಮಾಡಲಾಗಿದೆ. – ಸುನೀಲಕುಮಾರ ಜವಳಗಿ, ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ

 

-ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.