ಗಣೇಶ ಚತುರ್ಥಿ ವಿಶೇಷ: ಯಲಹಂಕ – ಕಲಬುರ್ಗಿ ನಡುವೆ ವಿಶೇಷ ರೈಲು
Team Udayavani, Aug 29, 2019, 8:57 PM IST
ಬೆಳಗಾವಿ: ಕೇಂದ್ರ ರೈಲ್ವೇ ರಾಜ್ಯ ಸಚಿವರಾಗಿರುವ ಸುರೇಶ್ ಅಂಗಡಿಯವರ ಆದೇಶದಂತೆ ಚೌತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಯಲಹಂಕ ಮತ್ತು ಕುಲಬುರ್ಗಿ ನಡುವೆ ಓಡಾಡಲಿದೆ.
ಈ ವಿಶೇಷ ರೈಲು ಆಗಸ್ಟ್ 30ರಂದು ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಿಂದ ಸಾಯಂಕಾಲ 5 ಗಂಟೆಗೆ ಹೊರಡಲಿದೆ ಮತ್ತು ಆಗಸ್ಟ್ 31ರ ಶನಿವಾರದಂದು ಬೆಳಗ್ಗೆ 4.20ಕ್ಕೆ ಕಲಬುರ್ಗಿ ತಲುಪಲಿದೆ.
ಬಳಿಕ ಸೆಪ್ಟಂಬರ್ 2ರಂದು ರಾತ್ರಿ 8.30ಕ್ಕೆ ಕಲಬುರ್ಗಿಯಿಂದ ಹೊರಟು ಮರುದಿನ ಮುಂಜಾನೆ 7.25ಕ್ಕೆ ಯಲಹಂಕ ರೈಲು ನಿಲ್ದಾಣವನ್ನು ತಲುಪಲಿದೆ ಎಂದು ಕೇಂದ್ರ ರೈಲ್ವೇ ರಾಜ್ಯ ಸಚಿವರ ಕಾರ್ಯಾಲಯದ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಈ ವಿಶೇಷ ರೈಲಿನಲ್ಲಿ ಎರಡು ಎಸಿ, 12 ಸ್ಲೀಪರ್ ಮತ್ತು 2 ಸಾಮಾನ್ಯ/ಲಗೇಜ್ ಸಹಿತ ಒಟ್ಟು 16 ಬೋಗಿಗಳು ಇರಲಿದೆ. ಗೌರಿಬಿದನೂರು, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಮಂತ್ರಾಲಯಂ ರಸ್ತೆ, ರಾಯಚೂರು, ಯಾದಗಿರಿ ಮತ್ತು ವಾಡಿ ನಿಲ್ದಾಣಗಳಲ್ಲಿ ಈ ರೈಲಿಗೆ ನಿಲುಗಡೆಯನ್ನು ಕಲ್ಪಿಸಲಾಗಿದೆ.
ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಯಲಹಂಕ -ಕಲಬುರ್ಗಿ ನಡುವೆ ವಿಶೇಷ ರೈಲು ವ್ಯವಸ್ಥೆ!
ಹಬ್ಬದ ದಿನದಂದು ಪ್ರಯಾಣಿಕರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳುವುದು ಇಲಾಖೆಯ ಮುಖ್ಯ ಜವಾಬ್ದಾರಿಯಾಗಿದ್ದು, ವಿಶೇಷ ರೈಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸುತ್ತೇನೆ. pic.twitter.com/NJx0B7gbH4
— Suresh Angadi (@SureshAngadi_) August 29, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ