ಬೆಳಕಿನೆಡೆಗೆ ಕೊಂಡೊಯ್ಯುವುದೇ ಆಧ್ಯಾತ್ಮ: ಚನ್ನಬಸವ ಶ್ರೀ
Team Udayavani, Aug 4, 2018, 11:16 AM IST
ಜೇವರ್ಗಿ: ಮನುಷ್ಯನಿಗೆ ಆವರಿಸಿರುವ ಅಜ್ಞಾನ ತೊಡೆದು ಹಾಕಿ ಜ್ಞಾನ ಬೆಳಕಿನಡೆಗೆ ಕೊಂಡೊಯ್ಯುವುದೇ ಆಧ್ಯಾತ್ಮ
ವಿದ್ಯೆ ಎಂದು ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಸೊನ್ನ ಗ್ರಾಮದ ಶಿವಾನಂದ ಶಿವಯೋಗಿ ಗ್ರಾಮೀಣ ಜನ ಕಲ್ಯಾಣ ಸಂಸ್ಥೆಯ ಗುರುಲಿಂಗಪ್ಪ ಶರಣರು ಸ್ವತಂತ್ರ ಪದವಿ ಪೂರ್ವ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಸ್ವಾಮೀಜಿ ಮಾತನಾಡಿದರು.
ವಿದ್ಯೆಗಳಲ್ಲಿಯೇ ಆಧ್ಯಾತ್ಮ ವಿದ್ಯೆ ಮೇಲು, ಧರ್ಮವಿಲ್ಲದ ವಿಜ್ಞಾನ ಕುರುಡು-ವಿಜ್ಞಾನವಿಲ್ಲದ ಧರ್ಮ ಕುಂಟು. ಎಲ್ಲರನ್ನೂ ಸಮಾನವಾಗಿ ಕಾಣುವುದೇ ನಿಜವಾದ ಸನ್ಯಾಸ, ಪರರ ಹಿತವೇ ನಿಜವಾದ ಧರ್ಮವಾಗಿದೆ ಎಂದು ಹೇಳಿದರು.
ಬೆಂಗಳೂರಿನ ಪಿಯು ಕಾಲೇಜು ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ಪುರ್ಲೆ ಮಾತನಾಡಿ, ರಾಜ್ಯದಲ್ಲಿ
ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ದಕ್ಷಿಣ ಕರ್ನಾಟಕ ಭಾಗದ ಮಠ-ಮಂದಿರಗಳಿಗೆ ಅನುದಾನ ನೀಡುತ್ತಾರೆ. ಆದರೆ ಸರ್ಕಾರದ ಯಾವುದೇ ಸೌಲಭ್ಯ, ಅನುದಾನ ಪಡೆಯದೇ ಹೈದ್ರಾಬಾದ-ಕರ್ನಾಟಕ ಭಾಗದಲ್ಲಿ ಸೊನ್ನ ಮಠದ ಶಿಕ್ಷಣ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಸೊನ್ನ ವಿರಕ್ತ ಮಠದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ಮತ್ತು ಕಾಲೇಜಿನ ಪ್ರಾಚಾರ್ಯ ಸದಾನಂದ ಪಾಟೀಲ
ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಡಿ.ಬಿ. ರಾಠೊಡ, ಬಾವಾ ಪಟೇಲ, ಗಿರೀಶ ರಾಠೊಡ, ಜಿ.ಎಸ್.ಪಾಟೀಲ,
ನಿಜಲಿಂಗ ದೊಡ್ಮನಿ, ಸಿ.ವಿ. ದೇಶಪಾಂಡೆ, ಗುರು ಹಿರೇಮಠ, ಅನಿಕೇತ ಗಾನೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು