1ರಿಂದ ಎಸ್ಸೆಸ್ಸೆಲ್ಸಿ ಪಿಯು ತರಗತಿ ಶುರು


Team Udayavani, Dec 29, 2020, 4:43 PM IST

1ರಿಂದ ಎಸ್ಸೆಸ್ಸೆಲ್ಸಿ ಪಿಯು ತರಗತಿ ಶುರು

ಕಲಬುರಗಿ: ಕೋವಿಡ್ ಮುನ್ನೆಚ್ಚರಿಕೆ ಕ್ರಮದೊಂದಿಗೆ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತಪ್ರೌಢ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಪೂರ್ವಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ತರಗತಿಗಳನ್ನುಜನವರಿ 1ರಿಂದ ಪ್ರಾರಂಭಿಸಲಾಗುವುದು ಎಂದುಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ರಾಜಾ ಪಿ. ತಿಳಿಸಿದರು.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ ತಾಂತ್ರಿಕ ಸಲಹಾ ಸಮಿತಿಯವರು ನೀಡಿರುವ ಮಾರ್ಗಸೂಚಿಗಳ ಅನುಸಾರವೇಶಾಲೆಗಳನ್ನು ಪುನರ್‌ ಪ್ರಾರಂಭಿಸಲಾಗುತ್ತಿದೆ. ಜನವರಿ 10ರಂದು ಎಸ್ಸೆಸ್ಸೆಲ್ಸಿ ಮತ್ತು 12ನೇ ತರಗತಿ ಪ್ರಾರಂಭಿಸಿ ನಂತರ ಜನವರಿ 15ರಿಂದ 11ನೇ ತರಗತಿಪ್ರಾರಂಭೋತ್ಸವದ ಕುರಿತು ನಿರ್ಧರಿಸಲಾಗುವುದು ಎಂದರು. ಎಸ್ಸೆಸ್ಸೆಲ್ಸಿ ತರಗತಿಗಳನ್ನು ಬೆಳಗ್ಗೆ 10ರಿಂದಮಧ್ಯಾಹ್ನ 12:30ರ ವರೆಗೆ 45 ನಿಮಿಷ ಅವ ಧಿಯಮೂರು ಅವ ಧಿಯಲ್ಲಿ ವಾರದ ಆರು ದಿನಗಳಲ್ಲಿತರಗತಿ ನಡೆಸಲಾಗುವುದು. ಪ್ರತಿ ತರಗತಿಯಲ್ಲಿಗರಿಷ್ಠ 20 ವಿದ್ಯಾರ್ಥಿಗಳು ಕುಳಿತುಕೊಳ್ಳಬಹುದು. ಶಿಕ್ಷಕರು ಜ.1ಕ್ಕೂ ಮುನ್ನ ಆರ್‌ಟಿ-ಪಿಸಿಆರ್‌ ಪರೀಕ್ಷೆಮಾಡಿಸಿಕೊಳ್ಳಬೇಕು. ಈ ಪರೀಕ್ಷೆಗೆ ಒಳಗಾಗಿ ನೆಗೆಟಿವ್‌ ವರದಿ ಬಂದರೆ ಮಾತ್ರ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಬೇಕೆಂದು ತಿಳಿಸಿದರು.

ವಿದ್ಯಾಗಮ ಪುನರಾರಂಭ: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6ರಿಂದ 9 ತರಗತಿ ವರೆಗಿನವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮವನ್ನುಜನವರಿ 1ರಿಂದ ಪುನರಾರಂಭಿಸಲಾಗುತ್ತಿದೆ.ಈ ತರಗತಿಗಳ ಅನುಭವದ ಆಧಾರದ ಮೇಲೆಜ.14ರಿಂದ 1ರಿಂದ 5ನೇ ತರಗತಿ ಪ್ರಾರಂಭೋತ್ಸವದಕುರಿತು ನಿರ್ಧರಿಸಲಾಗುವುದು ಎಂದು ಹೇಳಿದರು. 8 ಮತ್ತು 9ನೇ ತರಗತಿ ಪ್ರೌಢ ಶಾಲೆಗಳಲ್ಲಿ ಸೋಮವಾರದಿಂದ ಶುಕ್ರವಾರದ ವರೆಗೆ ಮಧ್ಯಾಹ್ನ 2ರಿಂದ ಸಂಜೆ 4:30ರ ವರೆಗೆ ವಿದ್ಯಾಗಮಕಾರ್ಯಕ್ರಮ ನಡೆಯಲಿದೆ. 6ರಿಂದ 9ನೇ ತರಗತಿ ಮಕ್ಕಳು ಇರುವ ಸ್ಥಳದಲ್ಲೇ ವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗಬಹುದಾಗಿದೆ ಎಂದರು.

1ರಿಂದ 5ನೇ ತರಗತಿ ಪ್ರಾಥಮಿಕ ಶಾಲೆಗಳಲ್ಲಿ1ರಿಂದ 3ನೇ ತರಗತಿಯವರೆಗಿನ ಮಕ್ಕಳುಸೋಮವಾರ ಮತ್ತು 4, 5ನೇ ತರಗತಿ ಮಕ್ಕಳು ಮಂಗಳವಾರ ಬಳಿಕ ದಿನ ಬಿಟ್ಟು ದಿನ ಈ ತರಗತಿಗಳವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತದೆ. 1ರಿಂದ 7 ಮತ್ತು 1ರಿಂದ 8ನೇ ತರಗತಿ ಹಿರಿಯಪ್ರಾಥಮಿಕ ಶಾಲೆಗಳಲ್ಲಿ 1ರಿಂದ 5ನೇ ತರಗತಿವರೆಗಿನಮಕ್ಕಳಿಗೆ ಸೋಮವಾರ ಮತ್ತು 6 ರಿಂದ 8ನೇ ತರಗತಿಮಕ್ಕಳಿಗೆ ಮಂಗಳವಾರ ತದನಂತರ ದಿನ ಬಿಟ್ಟುದಿನ ಈ ತರಗತಿಗಳ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತದೆ ಎಂದರು.

ಶಾಲೆ ಪುನರಾರಂಭ ಹಿನ್ನೆಲೆಯಲ್ಲಿ ಲಭ್ಯವಿರುವಭೌತಿಕ ಸೌಲಭ್ಯಗಳೊಂದಿಗೆ ಶೌಚಾಲಯ, ಶಾಲಾಮೈದಾನ ಸ್ವಚ್ಛಗೊಳಿಸಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ತರಗತಿಗಳನ್ನು ಆರಂಭಿಸಲಾಗುವುದು. ಮಕ್ಕಳು ಶಾಲೆಗೆ ಮತ್ತುವಿದ್ಯಾಗಮ ಕಾರ್ಯಕ್ರಮಕ್ಕೆ ಹಾಜರಾಗುವಮುನ್ನ ಪೋಷಕರ ಅನುಮತಿ ಪತ್ರ ತರುವುದುಕಡ್ಡಾಯವಾಗಿದೆ. ಶಾಲೆಗೆ ಹಾಜರಾಗಲು ಬಯಸದವಿದ್ಯಾರ್ಥಿಗಳು ಆನ್‌ಲೈನ್‌ ಅಥವಾ ಪರ್ಯಾಯ ವಿಧಾನ ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಲಾಗಿದೆ ಎಂದು ವಿವರಿಸಿದರು.

ಜಿಲ್ಲಾದ್ಯಂತ ಮೂರು ಸಾವಿರ ಶಾಲೆಗಳಿದ್ದು, 40 ಸಾವಿರಕ್ಕೂ ಅಧಿಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿದ್ದಾರೆ. ಪ್ರತಿ ದಿನ ಶಿಕ್ಷಕರು ಶಾಲೆಗೆ ಬರುವ ವಿದ್ಯಾರ್ಥಿಗಳನ್ನು

ಅವಲೋಕಿಸಿ ಕೊರೊನಾ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಲು ಸಮನ್ವಯತೆ ಸಾಧಿಸಬೇಕೆಂದು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಮನೆಯಿಂದಲೇ ಕುಡಿಯುವ ನೀರನ್ನು ತರಬೇಕು. ಶಾಲೆಯಲ್ಲಿ ಬಿಸಿ ನೀರು ಕೊಡುವ ವ್ಯವಸ್ಥೆ ಮಾಡಲುಶಾಲೆಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದರು. ಶಾಲೆಯ ಪ್ರಾರಂಭೋತ್ಸವದ ಕುರಿತು ಮುಖ್ಯ ಶಿಕ್ಷಕರು ಹಳ್ಳಿಗಳಲ್ಲಿ ಡಂಗೂರ ಬಾರಿಸಿ ಪ್ರಚಾರಕಾರ್ಯ ಕೈಗೊಳ್ಳಬೇಕು. ಶಿಕ್ಷಕರು ಡಿ.31ರ ವರೆಗೆ ಮಕ್ಕಳ ಮನೆ-ಮನೆಗೆ ಭೇಟಿ ನೀಡಿ, ಪೋಷಕರ ಒಪ್ಪಿಗೆ ಪತ್ರ ಸಮೇತ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆತಿಳಿಸಬೇಕು. ಶಾಲೆಯಲ್ಲಿ ಮಧ್ಯಾಹ್ನದ ಉಪಹಾರಬದಲು ಆಹಾರಧಾನ್ಯ ವಿತರಿಸುತ್ತಿರುವುದನ್ನು ಮುಂದುವರಿಸಲಾಗುವುದು. ವಸತಿ ಶಾಲೆಗೆ ಬರುವ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿ ವರ್ಗ ಕಳೆದ 72 ಗಂಟೆಯಲ್ಲಿ ಪಡೆಯಲಾದ ಕೋವಿಡ್ ನೆಗೆಟಿವ್‌ ಪತ್ರ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದರು.

ಡಿಡಿಪಿಐ ಎಸ್‌. ಪಿ. ಬಾಡಂಗಡಿ ಮತ್ತು ಡಿಎಚ್‌ಒ ಡಾ| ರಾಜಶೇಖರ ಮಾಲಿ ಇದ್ದರು.

ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಮತ್ತು ಸೋಂಕಿನಿಂದ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಪ್ರತಿದಿನ 15ರಿಂದ 20 ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಜಿಮ್ಸ್‌ ಹಾಗೂ ಇಎಸ್‌ಐ ಆಸ್ಪತ್ರೆಗಳನ್ನು ನಾನ್‌ ಕೋವಿಡ್‌ ಆಸ್ಪತ್ರೆಗಳೆಂದು ಘೋಷಿಸಲಾಗಿದ್ದು, ನಾಗರಿಕರು ಎಲ್ಲ ರೀತಿಯ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಬಹುದು. -ಡಾ| ರಾಜಾ ಪಿ., ಸಿಇಒ, ಜಿ.ಪಂ

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.