ಪರೀಕ್ಷಾ ಕೇಂದ್ರಗಳ ಬಳಿ ಗುಂಪಿನ ಜಮಾವಣೆ: ಪೊಲೀಸರು-ಪೋಷಕರ ನಡುವೆ ಮಾತಿನ ಚಕಮಕಿ
Team Udayavani, Jun 25, 2020, 12:38 PM IST
ಕಲಬುರಗಿ: ಜಿಲ್ಲಾದ್ಯಂತ ಗುರುವಾರ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಪೋಷಕರು ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂತು. ಹೀಗಾಗಿ ಪೊಲೀಸರು ಮತ್ತು ಪೋಷಕರ ನಡುವೆ ನಗರದ ನೂತನ ವಿದ್ಯಾಲಯದ ಪರೀಕ್ಷಾ ಕೇಂದ್ರದ ಬಳಿ ಮಾತಿನ ಚಕಮಕಿ ನಡೆಯಿತು.
136 ಕೇಂದ್ರಗಳಲ್ಲಿ 43,714 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ, ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಕರೆತಂದ ಪೋಷಕರು ಗುಂಪು-ಗುಂಪಾಗಿ ಜಮಾವಣೆಗೊಂಡಿದ್ದರು.
ಪರೀಕ್ಷಾ ಕೇಂದ್ರದಿಂದ ದೂರಹೋಗಿ ಎಂದು ಪರೀಕ್ಷಾ ಸಿಬ್ಬಂದಿ ಮತ್ತು ಪೊಲೀಸರು ಹೇಳಿದರೂ, ಪಾಲಕರು ಕೇಳುತ್ತಿಲ್ಲ. ಇದರಿಂದ ಪೋಷಕರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ ಪಡುವಂತೆ ಆಗಿದೆ. ಈ ವೇಳೆ ನೂತನ ವಿದ್ಯಾಲಯದ ಪರೀಕ್ಷಾ ಕೇಂದ್ರದ ಬಳಿ ಕೆಲ ಪೋಷಕರು ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದ ಘಟನೆ ಸಹ ನಡೆಯಿತು.
ಪರೀಕ್ಷಾ ಕೇಂದ್ರದಿಂದ ತೆರಳುವಂತೆ ಸೂಚಿಸಿದರೂ ತೆರಳದ ಹಿನ್ನೆಲೆ ಪೋಷಕರನ್ನು ಪೊಲೀಸರು ದೂರ ತಳ್ಳಿ ಚದರಿಸಲು ಮುಂದಾದರೂ, ಆಗ ಪೊಲೀಸರು ಮತ್ತು ಪೋಷಕರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಕೇಂದ್ರದಿಂದ ದೂರ ಹೋಗಿ ಇಲ್ಲವಾದಲ್ಲಿ ನಿಮ್ಮ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆಯನ್ನೂ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ