ಸ್ವದೇಶಿ ಚಳವಳಿ ಆರಂಭವಾಗಲಿ: ಮಾನುಸಗರ್‌


Team Udayavani, Feb 17, 2019, 8:33 AM IST

gul-5.jpg

ಕಲಬುರಗಿ: ಮಕ್ಕಳಿಗೆ ಪರಕೀಯ ಶಿಕ್ಷಣ ಮಾದರಿ ವ್ಯವಸ್ಥೆ ಜಾರಿಗೆ ಬಂದಿರುವುದರಿಂದ ನಾಡು-ದೇಶ ಪ್ರೇಮ, ಪ್ರಾಮಾಣಿಕತೆ ಕೊರತೆ ಎದ್ದುಕಾಣುತ್ತಿದೆ. ನಮ್ಮ ನೆಲದ ಮೂಲ ಸಂಸ್ಕೃತಿ ಸಂಪೂರ್ಣ ಮಾಯವಾಗಿ ನಿರುತ್ಸಾಹವಾಗಿದೆ. ಆದ್ದರಿಂದ ಸ್ವದೇಶಿ ಚಳವಳಿ ಆರಂಭಿಸುವುದರ ತುರ್ತು ಅವಶ್ಯಕತೆ ಇದೆ ಎಂದು ಸಾಹಿತಿ, ಪರಿಸರ ಪ್ರೇಮಿ ಪ. ಮಾನುಸಗರ್‌ ಹೇಳಿದರು.

ಇಲ್ಲಿನ ಜಯನಗರದ ಅನುಭವ ಮಂಟಪದಲ್ಲಿ ಶನಿವಾರ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಬ್ಬ-ಹರಿ ದಿನಗಳಲ್ಲಿ ನಡೆಯುತ್ತಿದ್ದ ಜನಕಲೆಗಳು ನಿಂತು ಹೋಗಿವೆ. ಇದರಿಂದ ಅನಾದಿಕಾಲದಿಂದ ಬಳುವಳಿಯಾಗಿ ಬಂದ ದೇಶಿಯ ಶ್ರೀಮಂತಿಕೆ ಸೊರಗುತ್ತಾ ಸಾಗಿದೆ ಎಂದು ಹೇಳಿದರು.

ಮೊಬೈಲ್‌, ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಬಿಗ್‌ ಬಜಾರ್‌, ಪಿಜ್ಜಾ ಸಂಸ್ಕೃತಿಗೆ ಆಕರ್ಷಿತರಾಗಿ ಅವುಗಳ ಹಿಂದೆ ಸಾಗಲಾಗುತ್ತಿದೆ. ಇದರಿಂದ ಮನುಷ್ಯ ಸಮೂಹ ಸಂಬಂಧ ಕಳಚಿಕೊಳ್ಳುತ್ತಾ ಒಬ್ಬಂಟಿ ಆಗುತ್ತಿದ್ದಾನೆ ಎಂದು ಕಳವಳ ವ್ಯಕ್ತಪಡಿಸಿದರು.

ನಮ್ಮನ್ನಾಳುವ ಸರ್ಕಾರಗಳು ಖಾಸಗೀಕರಣವನ್ನು ಮುಕ್ತವಾಗಿ ಸ್ವಾಗತಿಸಿ ಪ್ರೋತ್ಸಾಹಿಸುತ್ತಿವೆ. ಖಾಸಗೀಕರಣ ಪ್ರಬಲಗೊಂಡು ಸರ್ಕಾರಗಳು ತನ್ನ ಹಿಡಿತ ಸಾಧಿಸುವಲ್ಲಿ ವಿಫಲಗೊಂಡಿವೆ. ಪರಿಣಾಮ ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಅತ್ಯಂತ ವಿಷಾದದ ಸಂಗತಿ ಎಂದರು.

ತಾಲೂಕಿನಲ್ಲಿರುವ ಕೋಟೆ, ಕೊತ್ತಲುಗಳು ನಶಿಸುತ್ತಿವೆ. ಅವುಗಳನ್ನು ಪುನರುಜ್ಜೀವನಗೊಳಿಸಿ, ಪ್ರೇಕ್ಷಣೀಯ ಸ್ಥಳಗಳನ್ನಾಗಿ ಅಭಿವೃದ್ಧಿ ಪಡಿಸುವ, ಪ್ರವಾಸಿಗರನ್ನು ಸೆಳೆಯುವ ಕಾರ್ಯವಾಗಬೇಕು. ನಮ್ಮದು ಭಾವೈಕ್ಯತೆಯ ನಾಡು, ಬೀಡು ಎನ್ನಿಸಿಕೊಂಡಿದೆ. ಈ ಹಿರಿಮೆ, ಗರಿಮೆಯೊಂದಿಗೆ ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ಕರೆ ನೀಡಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಜಾನಪದ ವಿದ್ವಾಂಸ ಡಾ| ವೀರಣ್ಣ ದಂಡೆ, ನಮ್ಮ ಪ್ರದೇಶವು ಕನ್ನಡದ ಕಲೆ, ಭಾಷೆಗೆ ಹದವಾದ ನೆಲೆಯಾಗಿದೆ. ಕನ್ನಡಕ್ಕಾಗಿ ಅನೇಕ ಮಹನೀಯರು ದುಡಿದಿದ್ದಾರೆ. ನೈಜ ಕನ್ನಡವನ್ನು ಉಳಿಸಿಕೊಂಡು ಹೋಗುವುದು ಹಿಂದೆಂದಿಗಿಂತಲೂ ಅತ್ಯವಶ್ಯಕವಾಗಿದೆ ಎಂದರು. 

ಸಾನ್ನಿಧ್ಯ ವಹಿಸಿದ್ದ ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು ಮಾತನಾಡಿ, ಕನ್ನಡ ಸಾಹಿತ್‌ ಪರಿಷತ್‌ ಇತ್ತೀಚಿಗೆ ಗ್ರಾಮೀಣ ಭಾಗದಲ್ಲೂ ಸಾಹಿತ್ಯ ಚಟುವಟಿಕೆಗಳನ್ನು ಆರಂಭಿಸಿದೆ. ಇದರಿಂದ ಗ್ರಾಮೀಣ ಭಾಗದ ಸಾಹಿತ್ಯಾಸ್ತಕರು, ಯುವ ಲೇಖಕರಿಗೆ ವೇದಿಕೆ ಸಿಕ್ಕಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಶರಣಬಸವ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಮುಖ್ಯಸ್ಥ ಡಾ| ಎಂ.ಎಸ್‌.ಪಾಟೀಲ “ನೆನಪು’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಜಿಲ್ಲಾ ಬಸವ ಸಮಿತಿ ಅಧ್ಯಕ್ಷೆ ಡಾ| ವಿಲಾಸವತಿ ಖೂಬಾ ಆರು ಕಾದಂಬರಿಗಳನ್ನು ಬಿಡುಗಡೆಗೊಳಿಸಿದರು. ಎಂ.ವೈ. ಸುರಪುರ ಹಾಗೂ ತಂಡದವರು ನಾಡಗೀತೆ ಹಾಡಿದರು.

ತಾಲೂಕು ಕಸಾಪ ಅಧ್ಯಕ್ಷ ಸಿ.ಎಸ್‌. ಮಾಲಿಪಾಟೀಲ ಸ್ವಾಗತಿಸಿದರು. ಟಿ.ಸಿ.ಮಾಲಿಪಾಟೀಲ ನಿರೂಪಿಸಿದರು. ಡಾ| ಸಂಗಮೇಶ ಹಿರೇಮಠ ವಂದಿಸಿದರು. 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.