ಸ್ವಚ್ಛಮೇವ ಜಯತೆ ಕಲಾಜಾಥಾಕ್ಕೆ ಚಾಲನೆ
Team Udayavani, Sep 17, 2019, 11:07 AM IST
ಕಲಬುರಗಿ: ಮಿನಿ ವಿಧಾನಸೌಧದ ಆವರಣದಲ್ಲಿ ಜಿಪಂ ಸಿಇಒ ಡಾ| ಪಿ. ರಾಜಾ ಸ್ವಚ್ಛ ಮೇವ ಜಯತೇ ಕಲಾ ಜಾಥಾಕ್ಕೆ ಚಾಲನೆ ನೀಡಿದರು.
ಕಲಬುರಗಿ: ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ ಗ್ರಾಪಂಗಳಲ್ಲಿ ಎರಡು ಸಂಚಾರಿ ವಾಹನಗಳ ಮೂಲಕ ಹಮ್ಮಿಕೊಂಡಿರುವ ‘ಸ್ವಚ್ಛ ಮೇವ ಜಯತೇ’ ಕಲಾಜಾಥಾಕ್ಕೆ ಮಿನಿ ವಿಧಾನಸೌಧದ ಆವರಣದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ ಚಾಲನೆ ನೀಡಿದರು.
ಸಹಾಯಕ ಆಯುಕ್ತ ರಾಹುಲ್ ಪಾಂಡ್ವೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಸಿದ್ಧೇಶ್ವರಪ್ಪ ಜಿ.ಬಿ., ಸ್ವಚ್ಛ ಭಾರತ ಮಿಷನ್ (ಗ್ರಾ)ನ ನೋಡಲ್ ಅಧಿಕಾರಿಯಾದ ಜಿ.ಪಂ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ಐಇಸಿ ಕೋ-ಆರ್ಡಿನೇಟರ್ ಪಾಪರಡ್ಡಿ ಬಿ. ಶೇರಿಕರ ಹಾಜರಿದ್ದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಕಲಾಜಾಥಾ ಆಯೋಜಿಸಿದ್ದು, ಜಿಲ್ಲೆಯ 70 ಗ್ರಾಪಂಗಳಲ್ಲಿ ಐವರು ಕಲಾವಿದರು ಸ್ವಚ್ಛ ಭಾರತ ಬಗ್ಗೆ ಅರಿವು ಮೂಡಿಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 2000 ಗ್ರಾಪಂಗಳಲ್ಲಿ ಕಲಾಜಾಥಾ ಹಮ್ಮಿಕೊಳ್ಳಲಾಗಿದೆ.
ಕಲಾವಿದರು ಕುಡಿಯುವ ನೀರು, ನೈರ್ಮಲ್ಯ, ಸ್ವಚ್ಛತೆ, ಶೌಚಾಲಯ ಬಳಕೆ, ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!