ರಾಜ್ಯಮಟ್ಟದ ಖೋಖೋ ಪಂದ್ಯ ಇಂದು
Team Udayavani, Oct 30, 2017, 11:37 AM IST
ಚಿತ್ತಾಪುರ: ಪಟ್ಟಣದ ರಾಯಲ್ ಗ್ರೌಂಡ್ನಲ್ಲಿ (ಅಮರಾವತಿ ಮೈದಾನ) ರಾಜ್ಯಮಟ್ಟದ ಹೊನಲು ಬೆಳಕಿನ ಪುರುಷರ ಖೋ-ಖೋ ಪಂದ್ಯಾವಳಿ ಅ.30 ರಂದು ಸಂಜೆ 5:30 ಕ್ಕೆ ನಡೆಯಲಿದೆ ಎಂದು ಶ್ರೀ ಸಂಜೀವಿನಿ ಆಂಜನೇಯ ಖೋಖೋ ಕ್ಲಬ್ ಅಧ್ಯಕ್ಷ ನಾಗೇಶ ಹಲಗಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸುಮಾರು 20 ಜಿಲ್ಲೆಗಳ ತಂಡಗಳ ಜತೆಗೆ ಮಹಾರಾಷ್ಟ್ರದ ಸೊಲ್ಲಾಪುರ ತಂಡಗಳು ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಕಲಬುರಗಿ, ಧಾರವಾಡ, ಬಾಗಲಕೋಟೆ,
ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ತಂಡಗಳು ಭಾಗವಹಿಸಲಿವೆ ಎಂದು ಹೇಳಿದರು.
ಪಂದ್ಯಾವಳಿಯಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ 21,501 ರೂ. ಬಹುಮಾನ, ಕಪ್ನ್ನು ಜಿಪಂ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್ ನೀಡಲಿದ್ದಾರೆ. ಎರಡನೇ ಸ್ಥಾನ ಪಡೆದ ತಂಡಕ್ಕೆ 11,501 ರೂ. ಬಹುಮಾನ, ಕಪ್
ಹಾಗೂ ತೃತೀಯ ಸ್ಥಾನ ಪಡೆದ ತಂಡಕ್ಕೆ 6001 ರೂ. ಬಹುಮಾನ, ಕಪ್ ನೀಡಲಾಗುವುದು. ಉತ್ತಮ ಆಟಗಾರರಿಗೆ ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.
ಪಂದ್ಯಾವಳಿ ಆಡಲು ಮೈದಾನ ಸಿದ್ಧಗೊಳಿಸಲಾಗಿದೆ. ಹೈಟೆಕ್ ಮೈದಾನದಂತೆ ಖೋಖೋ ಆಟವಾಡಲು ಮ್ಯಾಟ್ ಬಳಸಲಾಗಿದೆ. ಜತೆಗೆ ಸುತ್ತಲೂ ಕಂಬಗಳನ್ನು ನೆಡಲಾಗಿದ್ದು. ಪ್ರೇಕ್ಷಕರಿಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಹೊನಲು-ರಾತ್ರಿ ಪಂದ್ಯಾವಳಿ ಆಗಿರುವುದರಿಂದ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ ಎಂದರು.
ಜಿಪಂ ಮಾಜಿ ಸದಸ್ಯ ಬಸವರಾಜ ಬೆಣ್ಣೂರಕರ್, ಅಶ್ವಥ ರಾಠೊಡ, ಕೋಚ್ ಹಾಗೂ ತೀರ್ಪುಗಾರರಾಗಿ ಮಹಾಂತೇಶ
ಕೊಡದೂರ, ವಿಶ್ವನಾಥ ಕುಂಬಾರ, ದೇವಿಂದ್ರ ದೋರೆ, ವೀರಭದ್ರ ಹುಮನಾಬಾದ, ಜಗದೀಶ ಮೂಡಬೂಳಕರ್, ಅಂಬಣ್ಣ ಕಾಶಿ, ವೆಂಕಟೇಶ ರೆಡ್ಡಿ ಅಲ್ಲೂರ, ವಿಷ್ಣು ಗುರುಮಿಠಕಲ್, ವಿರೇಶ ಮಾಕಾಪ, ಮಹಾವೀರ ಭೀಮಳ್ಳಿ, ಮರೆಪ್ಪ ಬೋಮ್ಮನಳ್ಳಿಕರ್, ಕ್ಲಬ್ನ ವ್ಯವಸ್ಥಾಪಕರಾದ ಅಂಬರೀಶ, ಪ್ರವೀಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ