150 ಸೀಟು ಗೆಲ್ಲಲು ಸ್ಟ್ರಾಟಜಿ ಮಾಡಿದ್ದೇವೆ: ಸಿಎಂ


Team Udayavani, Aug 14, 2017, 8:30 AM IST

14-STATE-3.jpg

ಕಲಬುರಗಿ: ಮುಂದಿನ ಚುನಾವಣೆಯಲ್ಲಿ 150 ಸೀಟು ಗೆಲ್ಲಲು ಸ್ಟ್ರಾಟಜಿ ಮಾಡಿದ್ದೇವೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ಪ್ರಧಾನಿ ಮೋದಿ ಏನೇ ತಂತ್ರಗಳನ್ನು ಮಾಡಿದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ. ಅಲ್ಲದೆ, 50 ಸೀಟು ಗೆಲ್ಲುವುದು ಕಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆಳಂದದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಶಾಸಕ ಬಿ.ಆರ್‌.ಪಾಟೀಲ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈ ರಾಜ್ಯದ ಬಡವರು, ದಲಿತರು, ಶೋಷಿತರು ಮತ್ತು ರೈತರು ರಾತ್ರಿ ಉಪವಾಸ ಮಲಗಬಾರದು ಅಂತ ಅಕ್ಕಿ ಭಾಗ್ಯ ನೀಡಿಲ್ಲವೇ? ಬಿಜೆಪಿಯವರೇನು ಕೊಟ್ಟಿದ್ದಾರೆ? ಜಾತಿ -ಧರ್ಮದ ಹೆಸರಿನಲ್ಲಿ ಒಡೆದು ಹಾಕುತ್ತಿದ್ದಾರಲ್ಲ… ಅವರಿಗೆ ಜನರೇಕೆ ಮತ ಹಾಕ್ತಾರೆ ಎಂದು ಪ್ರಶ್ನಿಸಿದರು. 

ಬೆಂಗಳೂರಲ್ಲೇ ಠಿಕಾಣಿ ಹೂಡಲಿ: 
ಅಮಿತಾ ಶಾ ಆದ್ರು.. ಬೆಂಗಳೂರಿಗೆ ಬರಲಿ.. ಪ್ರಧಾನಿ ಮೋದಿನೇ ಬಂದು ಠಿಕಾಣಿ ಹೂಡಲಿ. ನಮಗೇನೂ ತೊಂದರೆ ಇಲ್ಲ. ಇವರಿಗೆ ಅಂಜುವ ಅಗತ್ಯವೂ ಇಲ್ಲ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅವಧಿಗೂ ಮುನ್ನ ಚುನಾವಣೆ ನಡೆಯುವ ಸಾಧ್ಯತೆಗಳಿಲ್ಲ ಎಂದರು. 

ಡಿಕೆಶಿ ವಿರುದ್ಧ ಸೇಡಿನ ಕ್ರಮ: “ಸಚಿವ ಡಿ.ಕೆ. ಶಿವಕುಮಾರ ಮನೆ ಮೇಲೆ ಐಟಿ ದಾಳಿ ಮಾಡಿರುವುದು ಸೇಡಿನ ಕ್ರಮ. ಬಿಜೆಪಿಯಲ್ಲಿ ಎಷ್ಟು ಜನರಿಲ್ಲ ಹೇಳಿ? ಅವರ ಮನೆಯ ಮೇಲೇಕೆ ದಾಳಿ ನಡೆದಿಲ್ಲ? ಡಿಕೆಶಿ ಅವರನ್ನು ಗುರಿಯಾಗಿಸಿಕೊಂಡು ರಾಜಕೀಯ ಪ್ರೇರಿತ ದಾಳಿ ಮಾಡುವುದು ಸರಿಯಲ್ಲ. ಎಸಿಬಿ ಮತ್ತು ಲೋಕಾಯುಕ್ತಕ್ಕೆ ನಾನು ಯಾವುದೇ ಸೂಚನೆ ನೀಡಿಲ್ಲ. ಅದು ನನ್ನ ಜಾಯಮಾನವಲ್ಲ. ಎರಡೂ ಇಲಾಖೆಗಳು ತಮ್ಮ ಕೆಲಸ ತಾವು ಮಾಡುತ್ತವೆ’ ಎಂದರು.

ರಮೇಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳಕರ್‌, ಗೋವಿಂದರಾಜು, ಶಾಮನೂರು ಶಿವಶಂಕರಪ್ಪ, ನಾಗರಾಜ್‌ ಮುಂತಾದವರನ್ನು ಗುರಿಯಾಗಿಸಿಕೊಂಡು ಐಟಿ ದಾಳಿಗೆ ಸಂಚು ಮಾಡಲಾಗುತ್ತಿದೆ. ಆದರೆ, ಬಿಜೆಪಿಯಲ್ಲಿದ್ದವರೆಲ್ಲ ಸತ್ಯ ಹರಿಶ್ಚಂದ್ರರೇ? ಅವರಲ್ಲೂ ಭ್ರಷ್ಟರಿಲ್ಲವೇ? ಜೈಲಿಗೆ ಹೋಗಿ ಬಂದಿಲ್ಲವೇ? ನಿಜಕ್ಕೂ ಅಮಿತ್‌ ಶಾಗೆ ನೈತಿಕತೆ ಮತ್ತು ಎದೆಗಾರಿಕೆ ಇದ್ದರೆ ಭ್ರಷ್ಟರನ್ನು ಬಿಟ್ಟು ರಾಜ್ಯದಲ್ಲಿ ಓಡಾಡಲಿ ಎಂದರು.

ಕಾಂಗ್ರೆಸ್‌ ಭವಿಷ್ಯ ಮೋದಿ ಕೈಯಲ್ಲಿಲ್ಲ: ಖರ್ಗೆ
ಕಲಬುರಗಿ: ಕರ್ನಾಟಕ ಮತ್ತು ಕಾಂಗ್ರೆಸ್‌ ಭವಿಷ್ಯ ಜನರ ಕೈಯಲ್ಲಿದೆ. ಪ್ರಧಾನಿ ಮೋದಿ ಮತ್ತು ತಂತ್ರಗಾರ ಅಮಿತ್‌ ಶಾ ಕೈಯಲ್ಲಿಲ್ಲ. ನಾವು ಜನರ ಆರಾಧಕರು. ಮೋದಿ, ಶಾ ಅವರು ಆರೆಸ್ಸೆಸ್‌ ಪ್ರಚಾರಕರು ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಆಳಂದ ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ಶಾಸಕ ಬಿ.ಆರ್‌.ಪಾಟೀಲ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಂಸತ್‌ನಲ್ಲಿ ಮೋದಿ ಹೇಳ್ತಾರೆ, ಗುಜರಾತಿಗಳಾದ ನಮ್ಮ ಇಡೀ ಶರೀರ ವ್ಯಾಪಾರದ ಮನೋಭಾವದಲ್ಲಿದೆ ಎಂದು. ಇಂತಹ ವ್ಯಾಪಾರಿಯಿಂದ ದೇಶ ಏನನ್ನು ನಿರೀಕ್ಷಿಸಲು ಸಾಧ್ಯ? ಅದಕ್ಕಾಗಿ ಅವರಿಗೆ ರೈತರ ಸಾಲಕ್ಕಿಂತ ವ್ಯಾಪಾರಿಗಳ ಸಾಲ ಮನ್ನಾ ಮಾಡುವುದರಲ್ಲೇ ಖುಷಿ’ ಎಂದು ತರಾಟೆಗೆ ತೆಗೆದುಕೊಂಡರು. ಲೋಕಸಭೆಯಲ್ಲಿ ಸಚಿವ ಅರುಣ್‌ ಜೇಟ್ಲಿ ಅವರು ರೈತರ ಸಾಲವಲ್ಲ, ಯಾವುದೇ ಸಾಲ ಮನ್ನಾ ಮಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದರು. ಆದರೆ, ಮೋದಿ ಅವರು ಕಾರ್ಪೋರೇಟ್‌ ವಲಯದ ದೊಡ್ಡ ಬಂಡವಾಳದಾರರ 6 ಲಕ್ಷ ಕೋಟಿ ರೂ.ಸಾಲ ಮನ್ನಾ ಮಾಡಿದ್ದಾರೆ. ಹಾಗಿದ್ದರೆ ಇವರಿಗೆ ಯಾರ ಮೇಲೆ ಜಾಸ್ತಿ ಪ್ರೀತಿ ಇದೆ ಎನ್ನುವುದನ್ನು ಜನರೇ ಅರ್ಥ ಮಾಡಿಕೊಳ್ಳಬೇಕು ಎಂದರು. ಬಿಜೆಪಿ ರಾಜ್ಯದಲ್ಲಿ 5 ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕೊಟ್ಟಿತು. ಆ ಮೂವರು ಜನರಿಗೆ ಮೂರು ನಾಮ ಹಾಕಿ ಹೋಗಿದ್ದಾರೆ. ಬಿಜೆಪಿಯದು ಊಪರ್‌ ಶೇರವಾನಿ, ಅಂದರ್‌ ಪರೇಶಾನಿ ಎನ್ನುವ ಧೋರಣೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.