ಒಕ್ಕಲುತನವೇ ಶ್ರೇಷ್ಠ ಉದ್ಯೋಗ: ರಂಜಾನ್‌ ದರ್ಗಾ


Team Udayavani, Jan 8, 2019, 12:12 PM IST

gul-2.jpg

ಕಲಬುರಗಿ: ಬಸವಾದಿ ಶರಣರ ಪರಂಪರೆಯಲ್ಲಿ ರೈತ ಪ್ರತಿನಿಧಿಯಾಗಿ ಒಕ್ಕಲುತನದ ಪ್ರಕ್ರಿಯೆಯ ಪವಿತ್ರ ಕಾಯಕದಲ್ಲಿ ತೊಡಗಿದ್ದ ಒಕ್ಕಲಿಗ ಮುದ್ದಣ್ಣನವರು ಅಂಗ ಬೇಸಾಯದ ಜತೆಗೆ ಲಿಂಗ ಬೇಸಾಯ ಮಾಡುವ ಕುರಿತು ಕೂಡ ಹೇಳಿದ್ದಾರೆ ಎಂದು ಶರಣ ಚಿಂತಕ ರಂಜಾನ್‌ ದರ್ಗಾ ಹೇಳಿದರು.

ಎಳ್ಳ ಅಮಾವಾಸ್ಯೆ ನಿಮಿತ್ತ ಬಸವ ಕೇಂದ್ರದ ಆಶ್ರಯದಲ್ಲಿ ನಗರದ ಹೊರವಲಯದಲ್ಲಿರುವ ಸೋಮಣ್ಣ ನಡಕಟ್ಟಿ ಅವರ ಮೃತ್ಯಂಜಯ ಫಾರ್ಮ್ ಹೌಸ್‌ನಲ್ಲಿ ಹಮ್ಮಿಕೊಂಡಿದ್ದ ಒಕ್ಕಲಿಗ ಮುದ್ದಣ್ಣ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಅನುಭಾವ ನೀಡಿದರು. 

ಮುದ್ದಣ್ಣ ರಚಿಸಿದ 12 ವಚನಗಳು ಮಾತ್ರ ಲಭ್ಯವಿದ್ದು, ಆ ವಚನಗಳಲ್ಲಿ ವಿಚಾರದ ಬೆಳಕಿದೆ. ರೈತರಿಗೆ ಸಲಹೆಯಿದೆ. ಸಮಾಜಕ್ಕೆ ಉಪಯೋಗಿಯಾಗಬಲ್ಲ ವಿವೇಚನೆ, ವಿಶ್ಲೇಷಣೆಯಿದೆ ಎಂದು ಹೇಳಿದರು. ವೇದ ಶಾಸ್ತ್ರವನೋದುವುದಕ್ಕೆ ಹಾರುವನಲ್ಲ. ಇರಿದು ಮರೆಯುವುದಕ್ಕೆ ಕ್ಷತ್ರಿಯನಲ್ಲ. 

ವ್ಯವಹರಿಸುವುದಕ್ಕೆ ವೈಶ್ಯನಲ್ಲ. ಒಕ್ಕಲ ಮಗನ ತಪ್ಪ ನೋಡದೆ ಒಪ್ಪಗೊಳ್ಳಯ್ಯ, ಕಾಮಭೀಮ ಜೀವಧನದೊಡೆಯ ಎಂಬ ವಚನದ ಮೂಲಕ ಹಾರುವ, ಕ್ಷತ್ರಿಯ, ವೈಶ್ಯರಿಗಿಂತ ರೈತನ ಕಾಯಕವೇ ಶ್ರೇಷ್ಠವಾದ ಕಾಯಕ. ಹೀಗಾಗಿ ಅವನಲ್ಲಿ ತಪ್ಪು ಎಣಿಸದೆ ರೈತಾಪಿ ವರ್ಗವನ್ನು ಜೀವಕಾರಣ್ಯದಿಂದ ನಡೆಸಿಕೊಳ್ಳಬೇಕು ಎಂದು ಹೇಳಿದರು.

ಭೂಮಿಯಿಂದ ಪಡೆದ ಪ್ರಸಾದವನ್ನು ಭೂಮಿಗೊಂದಿಷ್ಟು (ಚರಗ ಚೆಲ್ಲಿ) ಸಾಂಕೇತಿಕವಾಗಿ ದಾಸೋಹ ಮಾಡಿ, ಉಣ್ಣುವ ನಿಜಜೀವಿಗಳಿಗೆ ಪ್ರೀತಿಯಿಂದ ದಾಸೋಹ ಮಾಡುವುದು ಈ ಅಮಾವಾಸ್ಯೆ ಮುಖ್ಯ ಉದ್ದೇಶ. ಅದನ್ನು ನಡಕಟ್ಟಿ ಅವರು ಪ್ರತಿ ವರ್ಷ ಮುಂದುವರಿಸಿಕೊಂಡು ಬಂದಿರುವುದು ಸ್ತುತ್ಯರ್ಹ ಕಾರ್ಯ ಎಂದು ಹೇಳಿದರು. ಬಸವ ಕೇಂದ್ರದ ಶಿವಶರಣಪ್ಪ ಕಲ್ಬುರ್ಗಿ ಅಧ್ಯಕ್ಷತೆ ವಹಿಸಿದ್ದರು. 

ವಿಶ್ವ ಜಾಗತಿಕ ಲಿಂಗಾಯತ ಮಹಾಸಭಾದ ರವೀಂದ್ರ ಶಾಬಾದಿ, ಮಹಾಗಾಂವಕರ್‌, ಜಿ.ಎಸ್‌. ಪಾಟೀಲ, ಬಸವರಾಜ ಮೊರಬದ, ಸಿದ್ಧರಾಮ ಯಳವಂತಗಿ, ಜಗದೀಶ ಪಾಟೀಲ, ಮಹಾಂತೇಶ ಪಾಟೀಲ ರಾಜಾಪುರ, ಎಸ್‌. ಎಂ. ಡೋಮನಾಳ, ಅಮೃತ ಮಾನಕರ್‌, ಎಚ್‌.ಬಿ. ತೀರ್ಥೆ, ಚಂದ್ರಶೇಖರ ಮಲ್ಲಾಬಾದಿ, ಅನಸೂಯಾ ನಡಕಟ್ಟಿ ಭಾಗವಹಿಸಿದ್ದರು. ಬಸವ ಕೇಂದ್ರದ ಕೋಶಾಧ್ಯಕ್ಷ ಸೋಮಣ್ಣ ನಡಕಟ್ಟಿ ಸ್ವಾಗತಿಸಿದರು. ಮಲ್ಲಣ್ಣ ನಾಗರಾಳ ನಿರೂಪಿಸಿದರು. ಮಹಾಂತೇಶ್ವರಿ ನಡಕಟ್ಟಿ ವಂದಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.