ವಿಧವಾ-ವೃದ್ಧಾಪ್ಯ ಪಿಂಚಣಿಗೆ ಪರದಾಡುತ್ತಿರುವ ವೃದ್ಧೆ


Team Udayavani, May 19, 2018, 11:14 AM IST

gul-3.jpg

ವಾಡಿ: ಗಂಡನ ಮರಣ ಪ್ರಮಾಣಪತ್ರ ಹಿಡಿದು ಕಳೆದ ಒಂದು ವರ್ಷದಿಂದ ವಿಧವಾ ಮತ್ತು ವೃದ್ಧಾಪ್ಯ ಪಿಂಚಣಿಗಾಗಿ ತಹಶೀಲ್ದಾರ ಕಚೇರಿಗೆ ಅಲೆದರೂ ಈ ವೃದ್ಧೆಯ ಮಾಸಾಶನ ಅರ್ಜಿ ಸ್ವೀಕಾರಗೊಳ್ಳುತ್ತಿಲ್ಲ. ಸಂಬಂಧಿಕರ ಆಸರೆಯಿಲ್ಲದ ಈ ಹಿರಿಯ ಜೀವ, ಕಾಗದಗಳನ್ನು ಹಿಡಿದು ಸರಕಾರಿ ಕಚೇರಿಗಳಿಗೆ ಅಲೆದು ಹೈರಾಣಾಗುತ್ತಿದೆ.

ನಾಲವಾರ ನಾಡಕಚೇರಿ ವ್ಯಾಪ್ತಿಯ ರಾಜೋಳಾ ಗ್ರಾಮದ ಪಾರಮ್ಮಾ ದ್ಯಾವಣ್ಣ ಎನ್ನುವ ವಿಧವೆ ಪಿಂಚಿಣಿಗಾಗಿ ನಾಲವಾರ ಉಪ ತಹಶೀಲ್ದಾರ ಕಚೇರಿಗೆ ಹೋಗಿ ಐದಾರು ಸಲ ಅಗತ್ಯ ದಾಖಲಾತಿ ಸಲ್ಲಿಸಿದರೂ ಈಕೆಯ ಅರ್ಜಿತಿರಸ್ಕಾರಗೊಳ್ಳುತ್ತಿದೆ. ಇದು ವೃದ್ಧೆಯ ಗೋಳಾಟಕ್ಕೆ ಕಾರಣವಾಗಿದೆ. 

ಪತಿಯ ಮರಣ ಪ್ರಮಾಣಪತ್ರ, ಪಡಿತರ ಚೀಟಿ, ವಾಸಸ್ಥಳ ಪತ್ರ, ಆಧಾರ್‌ ಕಾರ್ಡ್‌, ನೋಟರಿ ಮಾಡಿಸಿದ ಸ್ಟ್ಯಾಂಪ್‌ ಪತ್ರ ಹೀಗೆ ಅಗತ್ಯವಿರುವ ಎಲ್ಲ ದಾಖಲಾತಿಗಳನ್ನು ಹೊತ್ತು ತಿಂಗಳಿಗೊಮ್ಮೆ ನಾಡಕಚೇರಿಗೆ ಬರುತ್ತಿರುವ ಈ ವೃದ್ಧ ವಿಧವೆ ಮಹಿಳೆ ಅರ್ಜಿ ಸಲ್ಲಿಸಲಾಗದೆ ಪರದಾಡುತ್ತಿದ್ದಾಳೆ.
 
ಮಕ್ಕಳಿಲ್ಲದ ನನಗೆ ನನ್ನ ಪತಿ ದ್ಯಾವಣ್ಣನೇ ಗತಿಯಾಗಿದ್ದರು. 18 ತಿಂಗಳ ಹಿಂದೆ ಪತಿ ತೀರಿಕೊಂಡರು. ಸಂಬಂಧಿಕರು
ಇದ್ದೂ ಇಲ್ಲದಂತಿದ್ದಾರೆ. ನಾನೀಗ ಒಬ್ಬಂಟಿಯಾಗಿದ್ದೇನೆ. ರಾಜೋಳಾ ಗ್ರಾಮದ ಚಪ್ಪರದ ಮನೆಯಲ್ಲಿ ವಾಸವಿದ್ದೇನೆ. ಕೃಷಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದೇನೆ.
 
ಅನ್ನಭಾಗ್ಯ ಯೋಜನೆಯಿಂದ ಉಚಿತವಾಗಿ ಬರುವ 5 ಕೆ.ಜಿ ಅಕ್ಕಿ, 2 ಕೆ.ಜಿ ಗೋಧಿ ತಿಂಗಳ ಗಂಜಿಯಾಗಿದೆ. ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳು ಪಿಂಚಣಿ ಬರುತ್ತದೆ ಎಂದು ಗೆಳತಿ ಶರಣಮ್ಮ ಪೂಜಾರಿ ಹೇಳಿದ್ದರಿಂದ ಆಕೆಯೊಂದಿಗೆ ವರ್ಷದಿಂದ ತಹಶೀಲ್ದಾರ ಕಚೇರಿಗೆ ಅಲೆಯುತ್ತಿದ್ದೇನೆ. 

ಎರಡು ಸಲ ಅರ್ಜಿ ಸಲ್ಲಿಸಿದ್ದೇನೆ. ಅವು ತಿರಸ್ಕಾರಗೊಂಡಿವೆ. ಈಗ ಮತ್ತೆ ಅರ್ಜಿ ಸಲ್ಲಿಸಲು ಹೇಳುತ್ತಿದ್ದಾರೆ. ಅರ್ಜಿ ಕೊಡಲು ಬಂದಿದ್ದೇನೆ. ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದೆ. ಜೂ.1ಕ್ಕೆ ಬನ್ನಿ ಎಂದು ಇಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರೆ. ರಾಜೋಳಾದಿಂದ ನಾಲವಾರ ನಾಡಕಚೇರಿ ಮತ್ತು ರಾಜೋಳಾದಿಂದ ಚಿತ್ತಾಪುರಕ್ಕೆ ತಿರುಗಾಡಿ ಬೇಸತ್ತಿದ್ದೇನೆ. ನನ್ನ ಸಮಸ್ಯೆ ಯಾರೂ ಕೇಳುತ್ತಿಲ್ಲ ಎಂದು ವಿಧವೆ ಪಾರಮ್ಮಾ ತನ್ನ ಗೋಳು ಹೇಳಿಕೊಂಡರು. 

ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ಬಂದಿದ್ದೇ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಒದಗಿಸಲೆಂದು. ಬಡ
ವೃದ್ಧ ಮಹಿಳೆಯರು ಅರ್ಜಿ ಸಲ್ಲಿಸಲು ವರ್ಷಾನುಗಟ್ಟಲೇ ಕಚೇರಿಗೆ ಅಲೆದರೂ ಒಂದು ಅರ್ಜಿ ಸ್ವೀಕೃತಿ ಆಗದಿರುವುದು
ತಾಲೂಕಿನ ಬೇಜವಾಬ್ದಾರಿ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ.

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.