ಬಸ್ ಸಂಚಾರ ಆರಂಭಿಸಲು ಒತ್ತಾಯ
ಲಾಕ್ಡೌನ್ದಲ್ಲಿ ಸ್ಥಗಿತವಾದ ಬಸ್ ಪುನಃ ಆರಂಭಿಸಿಲ್ಲ! ಎರಡು ಬಸ್-300 ವಿದ್ಯಾರ್ಥಿಗಳು
Team Udayavani, Feb 10, 2021, 4:51 PM IST
ಚಿತ್ತಾಪುರ: ತಾಲೂಕಿನ ಎಲ್ಲ ಗ್ರಾಮಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಎದರು ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ತಾಲೂಕು ಸಂಚಾಲಕ ತುಳಜಾರಾಮ ಎನ್. ಕೆ ಮಾತನಾಡಿ, ಶಾಲೆ-ಕಾಲೇಜುಗಳು ಆರಂಭವಾಗಿವೆ. ತಾಲೂಕಿನ ಹಲವು ಗ್ರಾಮಗಳ ವಿದ್ಯಾರ್ಥಿಗಳು ಚಿತ್ತಾಪುರಕ್ಕೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಲಾಕ್ಡೌನ್ ಸಮಯದಲ್ಲಿ ನಿಲ್ಲಿಸಿದ ಬಸ್ ಸಂಚಾರ ಇನ್ನೂ ಆರಂಭಿಸಿಲ್ಲ. ರಾವೂರ, ಸಂಕನೂರ್, ದಂಡಗುಂಡ, ಕರದಳ್ಳಿ, ಚಾಮನೂರ, ಇಂಗಳಗಿ, ದಿಗ್ಗಾಂವ, ಅಳ್ಳೊಳ್ಳಿ, ರಾಮತೀರ್ಥ, ಯಾಗಾಪುರ, ಡೋಣಗಾಂವ ಸೇರಿದಂತೆ ಇನ್ನಿತರ ಗ್ರಾಮಗಳಿಂದ ಆಗಮಿಸಿಸುವ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಎಲ್ಲ ಗ್ರಾಮಗಳಿಗೆ ಬಸ್ ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ಮತ್ತೆ ಆರಂಭಗೊಂಡ ಬಾದಾಮಿ ಶುಗರ್ಸ್
ಬಸ್ ಘಟಕ ವ್ಯವಸ್ಥಾಪಕ ಫಾರೂಕ್ ಹುಸೇನ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಲಾಕ್ಡೌನ್ನಿಂದಾಗಿ ಬಸ್ ಸಂಚಾರ ಕಡಿತಗೊಳಿಸಲಾಗಿತ್ತು. ಇದೀಗ ಯಥಾ ಸ್ಥಿತಿ ಬಸ್ ಸಂಚಾರ ಆರಂಭಿಸಲಾಗಿದೆ. ಇನ್ನು ಕೆಲವು ಗ್ರಾಮಗಳಿಗೆ ಬಸ್ ಸಂಚಾರ ಇಲ್ಲ. ಹೀಗಾಗಿ ಮೊದಲಿನಂತೆ ಎಲ್ಲ ಗ್ರಾಮಗಳಿಗೆ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಸಹ ಸಂಚಾಲಕ ವೆಂಕಟೇಶ ದೇವದುರ್ಗ, ವಿದ್ಯಾರ್ಥಿಗಳಾದ ರಾಹುಲ್ ಚವ್ಹಾಣ, ನಾಗೇಶ ಗೋಳಿ, ವಿಶಾಲ್, ರಮೇಶ, ವಸಂತಕುಮಾರ, ಚಂದ್ರಶೇಖರ ಚಾಮನೂರ್, ಸಾಬಣ್ಣ, ದೇವು, ಸುರೇಶ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ