ವಾಡಿ: ಕಳಪೆ ಊಟ ವಸತಿ ಪ್ರಶ್ನಿಸಿ ಬೀದಿಗಿಳಿದ ವಿದ್ಯಾರ್ಥಿಗಳು


Team Udayavani, Aug 15, 2022, 8:04 PM IST

ವಾಡಿ: ಕಳಪೆ ಊಟ ವಸತಿ ಪ್ರಶ್ನಿಸಿ ಬೀದಿಗಿಳಿದ ವಿದ್ಯಾರ್ಥಿಗಳು

ವಾಡಿ: ಹುಳು ಹುಪ್ಪಡಿ ಕಲ್ಲು ಕಸ ತುಂಬಿದ ಅಕ್ಕಿಯಿಂದ ತಯಾರಿಸಿದ ಕಳಪೆ ಊಟ ಹಾಗೂ ಇತರ ಸಮಸ್ಯೆಗಳ ಸರಮಾಲೆಯನ್ನಿಡಿದುಕೊಂಡು ವಿದ್ಯಾರ್ಥಿಗಳು ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ಪ್ರತಿಭಟಿಸಿದ ಘಟನೆ ನಡೆಯಿತು.

ಪಾಠದ ಕೋಣೆ ಮತ್ತು ವಸತಿ ಕೋಣೆಗಳಿಗೆ ಬಾಗಿಲುಗಳಿಲ್ಲ. ಶೌಚಾಲಯ ಶುಚಿಗೊಳಿಸುವವರಿಲ್ಲ. ಗೋಡೆಗಳಿಂದ ನೀರಿಳಿದು ಮಲಗಲು ಸಾಧ್ಯವಾಗುತ್ತಿಲ್ಲ. ವಿದ್ಯುತ್ ಸಮಸ್ಯೆ ,ಫ್ಯಾನ್ ವ್ಯವಸ್ಥೆ ಇಲ್ಲ. ಸಮಸ್ಯೆಗಳು ಗಮನಕ್ಕೆ ತಂದರೆ ವಾರ್ಡನ್ ಹೆದರಿಸುತ್ತಾರೆ. ಅಂಕಗಳು ಕಡಿಮೆ ಕೊಟ್ಟು ನಿಮಗೆ ಪಾಠ ಕಲಿಸುತ್ತೇನೆ ಎಂದು ಹೆದರಿಸುತ್ತಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಳಿರಾಮ ಚೌಕ್ ಹತ್ತಿರ ಇರುವ ಇಂದಿರಾಗಾಂಧಿ ವಸತಿ ಶಾಲೆಯ ಸುಮಾರು 160 ಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದ ಬಾಲಕ ಮತ್ತು ಬಾಲಕಿಯರು ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ಸ್ವಾತಂತ್ರೋತ್ಸವದ ದಿನವೇ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದನ್ನು ಕಂಡು ಸ್ಥಳೀಯರು ವಿದ್ಯಾರ್ಥಿಗಳ ಬೆನ್ನಿಗೆ ನಿಂತಿದ್ದರು.

ನಾವು ಮಲಗುವ ಖಾಸಗಿ ಕಟ್ಟಡದ ವಿಶ್ರಾಂತಿ ಕೋಣೆಗಳಿಗೆ ಬಾಗಿಲಿಲ್ಲ. ಶೌಚಾಲಯಕ್ಕೂ ಬಾಗಿಲು ಅಳವಡಿಸಿಲ್ಲ. ರಾತ್ರಿ ಬೆಳಕಿನ ವ್ಯವಸ್ಥೆಯಿಲ್ಲ. ಭಯದಲ್ಲೇ ಮಲಗುತ್ತಿದ್ದೇವೆ ಎಂದು ವಿದ್ಯಾರ್ಥಿನಿಯರು ಕಷ್ಟ ಹೇಳಿಕೊಂಡರೆ, ಊಟ ಸೇರದೆ ನಮ್ಮ ಆರೋಗ್ಯ ಹದಗೆಡುತ್ತಿದೆ. ಮಲಗುವ ಕೋಣೆಗಳು ಸರಿಯಾಗಿಲ್ಲ. ಸ್ನಾನ ಮತ್ತು ಶೌಚಾಲಯಗಳ ನೀರು ಹರಿದು ಪಾಠದ ಕೋಣೆಗಳತ್ತ ಹರಿದು ದುರ್ವಾಸನೆ ಹಬ್ಬುತ್ತದೆ. ಇಂತಹ ಕೆಟ್ಟ ಪರಸ್ಥಿತಿಯಲ್ಲಿ ಅಭ್ಯಾಸ ಅಸಹ್ಯ ಎನ್ನಿಸುತ್ತಿದೆ. ಹುಡಗರು ಮಲಗುವ ಹಾಲ್‌ನಲ್ಲಿ ವಿಪರೀತ ಕಾಂಕ್ರೀಟ್ ಧೂಳಿದೆ. ಉಸಿಕಿನ ಹರಳುಗಳ ಮೇಲೆ ಮಲಗಬೇಕು. ಉತ್ತಮ ಸೌಲಭ್ಯವಿದೆ ಎಂಬ ಕಾರಣಕ್ಕೆ ನಾವಿಲ್ಲಿಗೆ ಬಂದಿದ್ದೇವೆ. ಆದರೆ ಇಲ್ಲಿ ನಮಗೆ ಪ್ರತಿದಿನವೂ ನರಕದ ದರ್ಶನವಾಗುತ್ತಿದೆ. ನಮ್ಮ ಕಷ್ಟ ಯಾರಿಗೆ ಹೇಳಬೇಕು ಅರ್ಥವಾಗುತ್ತಿಲ್ಲ. ಕರದಾಳದಲ್ಲಿ ಸರಕಾರದ ಹೊಸ ಕಟ್ಟಡ ಸಿದ್ಧವಾಗಿದೆ ಅಲ್ಲಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಕಳೆದ ಐದಾರು ವರ್ಷಗಳಿಂದ ಹೇಳುತ್ತಿದ್ದಾರೆ. ಆದರೆ ನಮಗೆ ಸಂಕಷ್ಟದಿಂದ ಪಾರು ಮಾಡುವವರು ಯಾರೂ ಇಲ್ಲ. ಬೇಸತ್ತು ಬೀದಿಗೆ ಬಂದಿದ್ದೇವೆ ಎಂದು ವಿದ್ಯಾರ್ಥಿಗಳು ಸಾರ್ವಜನಿಕವಾಗಿ ತಮ್ಮ ಗೋಳು ಹೇಳಿಕೊಂಡರು.

ಪಿಎಸ್‌ಐ ಸಂಧಾನ: ಮಕ್ಕಳ ಈ ದಿಢೀರ್ ಪ್ರತಿಭಟನೆಯ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪಿಎಸ್‌ಐ ಮಹಾಂತೇಶ ಜಿ.ಪಾಟೀಲ, ಸಮಸ್ಯೆಗಳನ್ನು ಆಲಿಸಿದರು. ಹೋರಾಟಕ್ಕೆ ಮುಂದಾದ ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು. ಈ ಕುರಿತು ಮೇಲಾಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು. ಸಮಸ್ಯೆ ಮುಂದುವರೆದರೆ ನಮ್ಮ ಹೋರಾಟವೂ ಮುಂದುವರೆಯುತ್ತದೆ ಎಂದು ಮಕ್ಕಳು ಇದೇ ವೇಳೆ ಪೊಲೀಸ್ ಅಧಿಕಾರಿಗೆ ಪ್ರತಿಕ್ರಿಯಿಸಿದ ಪ್ರಸಂಗ ನಡೆಯಿತು.

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.