ಆರಂಭವಾಗದ ಶಾಲೆ : ಕಳೆ ಕೀಳುವ- ಹತ್ತಿ ಬಿಡಿಸುವ ಕೆಲಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳು

ಪೆನ್ಸಿಲ್‌ ಹಿಡಿಯುವ ಕೈಯಲ್ಲಿ ಕುರ್ಪಿ

Team Udayavani, Nov 14, 2020, 4:55 PM IST

ಕಳೆ ಕೀಳುವುದು-ಹತ್ತಿ ಬಿಡಿಸುತ್ತಿರುವ ಮಕ್ಕಳು

ಜೇವರ್ಗಿ: ಹೊರವಲಯದಲ್ಲಿ ಟಂಟಂ ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳು.

ಜೇವರ್ಗಿ: ಕೋವಿಡ್ ಮಹಾಮಾರಿಯಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರವಾದ ಪರಿಣಾಮ ಬೀರಿದ್ದು, ತರಗತಿ ಕೋಣೆಯ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಅಕ್ಷರಾಭ್ಯಾಸ ಮಾಡಬೇಕಿದ್ದ ಮಕ್ಕಳು ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ.

ಕೈಯಲ್ಲಿ ಪೆನ್ಸಿಲ್‌ ಹಿಡಿದು ಅ, ಆ, ಇ, ಈ ಬರೆಯಬೇಕಿದ್ದ ಮಕ್ಕಳು ಕೈಯಲ್ಲಿ ಕುರ್ಪಿ ಹಿಡಿದು ಕಳೆ ಕೀಳುತ್ತಿರುವ ದೃಶ್ಯ ಪಟ್ಟಣ ಸೇರಿದಂತೆ ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಕಂಡುಬರುತ್ತಿದೆ. ಕೂಲಿ ಹಣದ ಆಸೆಗೆ ಖುದ್ದು ಪಾಲಕರೇ ಮಕ್ಕಳನ್ನು ತಮ್ಮ ಜೊತೆ ಕರೆದುಕೊಂಡು ಹೋಗುತ್ತಿದ್ದಾರೆ.

ಕೋವಿಡ್ ಆತಂಕ ಇದ್ದರೂ ಟಂಟಂ, ಜೀಪ್‌, ಟ್ರ್ಯಾಕ್ಟರ್‌ಗಳಲ್ಲಿ ಕುರಿ ಹಿಂಡಿನಂತೆ ಮಾಸ್ಕ್ ಇಲ್ಲದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ನಿತ್ಯ ದಿನಬೆಳಗಾದರೆ ಸಾಕು ನೂರಾರು ವಿದ್ಯಾರ್ಥಿಗಳು ಕಳೆ ಕೀಳಲು, ಹತ್ತಿ ಬಿಡಿಸಲು ಹೋಗಿ ನೂರಾರು ರೂ. ತರುವ ಮೂಲಕ ಕುಟುಂಬಕ್ಕೆ ಆಸರೆಯಾಗುತ್ತಿದ್ದಾರೆ. ಆದರೆ, ಮಕ್ಕಳ ಭವಿಷ್ಯ ಕಮರಿ ಹೋಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಪೋಷಕರು ಬಡವರು. ಅವರು ಕೂಲಿನಾಲಿ ಮಾಡಿ ಜೀವನ ಸಾಗಿಸುತ್ತಾರೆ. ಶಾಲೆ ನಡೆಯುತ್ತಿದ್ದಾಗ ಮಕ್ಕಳ ಊಟ ಶಾಲೆಗಳಲ್ಲಿ ನಡೆಯುತ್ತಿತ್ತು. ಮಕ್ಕಳು ಬೆಳಗ್ಗೆ ಶಾಲೆಗೆ ಹೋದರೆಮರಳುವಾಗ ಸಂಜೆಯಾಗುತ್ತಿತ್ತು. ಹೀಗಾಗಿ ಪಾಲಕರು ಮಕ್ಕಳನ್ನು ಶಾಲೆಗೆ ಕಳಿಸಿ, ನಿಶ್ಚಿಂತೆಯಿಂದ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಈಗ ಮಕ್ಕಳು ಮನೆಯಲ್ಲಿಯೇ ಇರುವುದುಪೋಷಕರಿಗೆ ದೊಡ್ಡ ಸಮಸ್ಯೆಯಾಗಿದೆ. ಶಾಲೆಗಳು ಆರಂಭವಾಗದೇ ಇರುವುದರಿಂದ ಬಹುತೇಕ ಮಕ್ಕಳು ಓದುವುದನ್ನೇ ಮರೆತಿದ್ದಾರೆ.

ತಾಲೂಕಿನಲ್ಲಿ ನೂರಾರು ಜನ ತೆಲಂಗಾಣ, ಆಂಧ್ರ ಮೂಲದ ರೈತರು ಈ ಭಾಗದ ರೈತರ ಜಮೀನುಗಳನ್ನು ಲೀಜ್‌ ಪಡೆದು ಕೃಷಿ ಕೆಲಸ ಮಾಡುತ್ತಿದ್ದಾರೆ. ತಾಲೂಕಿನ ರೇವನೂರ, ಜನಿವಾರ, ಕೆಲ್ಲೂರ, ಹರವಾಳ, ಮುದಬಾಳ, ಅವರಾದ, ಹರನೂರ,ಮುದಬಾಳ.ಕೆ, ಮುದಬಾಳ ಬಿ, ಇಜೇರಿ, ಸಿಗರಥಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಜಮೀನು ಲೀಜ್‌ ಪಡೆದು ಹತ್ತಿ ಹಾಗೂ ಮೆಣಸಿನಕಾಯಿ ಕೃಷಿ ಮಾಡಿದ್ದಾರೆ. ಹತ್ತಿ, ಮೆಣಸಿನಕಾಯಿ ಬಿಡಿಸಲು ಕೃಷಿ ಕೂಲಿಕಾರ್ಮಿಕರ ಸಮಸ್ಯೆ ಗಂಭಿರವಾಗಿ ಕಾಡುತ್ತಿದೆ.

ಕಾರ್ಮಿಕರ ಸಮಸ್ಯೆಯಿಂದ ದುಪ್ಪಟ್ಟು ಕೂಲಿ ಹಣದ ಆಮೀಷ ಒಡ್ಡಲಾಗುತ್ತಿದೆ. ಅವರು ಕೊಡುವ ಕೂಲಿ ಆಸೆಗೆ ಕೆಲ ಜನ ಪಾಲಕರು ತಮ್ಮ ಜೊತೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಕೂಲಿ ಹಣದ ಜೊತೆಗೆ ಹೊಲಕ್ಕೆ ಹೋಗಿ ಕರೆದುಕೊಂಡು ಬರಲು ವಾಹನದ ವ್ಯವಸ್ಥೆ ಮಾಡಿದ್ದಾರೆ. ಶಾಲೆಗೆ ಹೋಗಿ ಮಕ್ಕಳು ಪುಸ್ತಕ ಹಿಡಿದು ಓದಬೇಕಾದ ಸಮಯದಲ್ಲಿ ಪಾಲಕರ ದುರಾಸೆಯಿಂದ ಮುಳ್ಳು, ಕೆಸರಿನಲ್ಲಿ ಕಳೆ ಕೀಳುವುದು, ಹತ್ತಿ, ಮೆಣಸಿನಕಾಯಿ ಬಿಡಿಸುವ ಕಾಯಕದಲ್ಲಿ ನಿರತರಾಗುವಂತಾಗಿದೆ.

 

ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.