ಪ್ರತಿಜ್ಞಾವಿಧಿಯಂತೆ ಸೇವೆ ಸಲ್ಲಿಸಿ: ಗೃಹ ಸಚಿವ


Team Udayavani, Oct 24, 2017, 10:44 AM IST

gul-4.jpg

ಕಲಬುರಗಿ: ಕಠಿಣ ತರಬೇತಿ ಪಡೆದು ನಾಗರಿಕ ಪೊಲೀಸ್‌ ಅಧಿಕಾರಿಗಳಾಗಿ ಹೊರಹೊಮ್ಮಿದ ನಿರ್ಗಮಿತ ಪ್ರಶಿಕ್ಷಣಾರ್ಥಿಗಳೆಲ್ಲ ಸತ್ಯ, ಪ್ರಮಾಣಿಕತೆಯಿಂದ, ಸ್ವಜಪಕ್ಷಪಾತ ರಹಿತ ಸೇವೆ ಕುರಿತು ಪಡೆಯಲಾದ ಪ್ರತಿಜ್ಞಾವಿಧಿಯಂತೆ ಸೇವೆ ಸಲ್ಲಿಸಬೇಕೆಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.

ಸೋಮವಾರ ನಾಗನಹಳ್ಳಿ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ 7ನೇ ತಂಡದ 48 ಪಿಎಸ್‌ಐ (ನಾಗರೀಕ ಸಿವಿಲ್‌) ಪ್ರಶಿಕ್ಷಣಾರ್ಥಿಗಳ ಮತ್ತು 3ನೇ ತಂಡದ 36 ವೈಯರ್‌ಲೆಸ್‌ ಪಿಎಸ್‌ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈಗಿನ ಸೇವಾ ಉತ್ಸಾಹ ನಿವೃತ್ತಿವರೆಗೂ ಇರಲಿ. ಯಾವುದೇ ಸಂದರ್ಭದಲ್ಲೂ ಕರ್ತವ್ಯಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಿ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌ರ ಪಾತ್ರವೇ ಬಹುಮುಖ್ಯವಾಗಿದೆ. ಉತ್ತಮ ಸೇವೆ ಸಲ್ಲಿಸಿದಲ್ಲಿ ಮಾತ್ರ ಸರ್ಕಾರದಿಂದ ಹಾಗೂ ಸಮಾಜದಿಂದ ಮನ್ನಣೆ, ಪ್ರಶಸ್ತಿ ದೊರಕುತ್ತವೆ. ಆದ್ದರಿಂದ ದಿನಾಲು ಪ್ರತಿಜ್ಞಾವಿಧಿ ನೆನಪಿನಲ್ಲಿಟ್ಟುಕೊಂಡು ಸೇವೆ ಮಾಡಿ ಎಂದು ಸಲಹೆ ನೀಡಿದರು. 

371ನೇ ಕಲಂ ವಿಧಿ ಜಾರಿಯಾಗಿದ್ದರಿಂದ ಇಷ್ಟೊಂದು ಸಂಖ್ಯೆಯಲ್ಲಿ ಹೈದ್ರಾಬಾದ ಕರ್ನಾಟಕ ಭಾಗದ ಅಭ್ಯರ್ಥಿಗಳು ಪೊಲೀಸ್‌ ಅಧಿಕಾರಿಗಳಾಗಲು ಸಾಧ್ಯವಾಗಿದೆ. 371ನೇ (ಜೆ) ವಿಧಿ ಜಾರಿಯಾಗುವಲ್ಲಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ದಿ| ಧರ್ಮಸಿಂಗ್‌ ಸೇರಿದಂತೆ ಇತರರ ಪ್ರಯತ್ನ ಅಡಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಹೇಳಿದರು.

ನಾಗನಹಳ್ಳಿ ಪೊಲೀಸ್‌ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸವಿತಾ ಹೂಗಾರ ಮಾತನಾಡಿ, 2003ರಲ್ಲಿ ನಾಗನಹಳ್ಳಿ ಪೊಲೀಸ್‌ ತರಬೇತಿ ಮಹಾವಿದ್ಯಾಲಯ ಪ್ರಾರಂಭವಾಗಿ ಇಲ್ಲಿಯವರೆಗೆ 1064 ಪಿಎಸ್‌ಐ, 4401 ಪೊಲೀಸ್‌ ಪೇದೆಗಳಿಗೆ ತರಬೇತಿ ನೀಡಲಾಗಿದೆ. ಎಲ್ಲ ಹಂತದ ಸಮರೋಭ್ಯಾಸ ನಡೆಸಲಾಗಿದೆ. ಅಲ್ಲದೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಉಪನ್ಯಾಸ ಕೊಡಿಸಲಾಗಿದೆ ಎಂದು ವಿವರಿಸಿದರು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಆರ್‌.ಕೆ ದತ್ತಾ, ಹಿರಿಯ ಪೊಲೀಸ್‌ ಅಧಿಕಾರಿಗಳಾದ ರವಿಶಂಕರ ಮೀನಾ, ಈಶಾನ್ಯ ವಲಯ ಐಜಿಪಿ ಅಲೋಕಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಶಿಕುಮಾರ ಹಾಜರಿದ್ದರು. ಸೇಡಂ ಸಿಪಿಐ ಪಿ.ಎಂ. ಸಾಲಿಮಠ, ಲಕ್ಷ್ಮೀ ನಿರೂಪಿಸಿದರು. ಪೊಲೀಸ್‌ ತರಬೇತಿ ಮಹಾವಿದ್ಯಾಲಯದ ಡಿವೈಎಸ್ಪಿ ಎಂ.ಎಂ.ಯಾದವಾಡ ವಂದಿಸಿದರು. 

ಬಂಧು-ಬಳಗದವರು ಭಾಗಿ: ನಾಗನಹಳ್ಳಿ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ 84 ಪಿಎಸ್‌ಐ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳ ಬಂಧು-ಬಳಗದವರು ಅದರಲ್ಲಿ ಅವರ ತಂದೆ-ತಾಯಿ, ಸಹೋದರರು ಬಂಧು ಬಾಂಧವರು ಪಾಲ್ಗೊಂಡಿದ್ದರು. ವರ್ಷವಿಡಿ ಮನೆಯಿಂದ ದೂರವಿದ್ದಿದ್ದರಿಂದ ಹಾಗೂ ಸಮಾರಂಭದಲ್ಲಿ ಗೃಹ ಸಚಿವರ ಸಮ್ಮುಖದಲ್ಲಿ ಪ್ರತಿಜ್ಞಾವಿಧಿಯೊಂದಿಗೆ ಪೊಲೀಸ್‌ ಅಧಿಕಾರಿಯಾಗಿ ಹೊರಹೊಮ್ಮಿದ್ದನ್ನು ಕಣ್ತುಂಬಿಕೊಂಡರು. ಮಹಾಂತೇಶ ಪಾಟೀಲ ಚಿಣಮಗೇರಿ ಎನ್ನುವ ಪಿಎಸ್‌ಐ ಪ್ರಶಿಕ್ಷಣಾರ್ಥಿ, ಕಷ್ಟದಿಂದ ಓದಿ, ಸಾಮಾಜಿಕ ಸೇವೆಯೊಂದಿಗೆ ಇಲಾಖೆಗೆ ಬಂದಿದ್ದೇನೆ ಎಂದು ತಿಳಿಸಿದರು. 

48 ಅಭ್ಯರ್ಥಿಗಳಲ್ಲಿ 46 ಮಂದಿ ಹೈ.ಕ.ದವರು : ವರ್ಷ ಕಾಲ ತರಬೇತಿ ಪಡೆದು ಪ್ರಶಿಕ್ಷಣಾರ್ಥಿಗಳಾಗಿ ಹೊರಹೊಮ್ಮಿದ 48 ಸಿವಿಲ್‌ ಪಿಎಸ್‌ಐಗಳಲ್ಲಿ 46 ಅಭ್ಯರ್ಥಿಗಳು ಹೈದ್ರಾಬಾದ ಕರ್ನಾಟಕದರು. ಇಬ್ಬರಲ್ಲಿ ಒಬ್ಬರು ಮಂಗಳೂರು, ಇನ್ನೊಬ್ಬರು ಮೈಸೂರು ವಿಭಾಗಕ್ಕೆ ಸೇರಿದವರು. 371ನೇ (ಜೆ) ವಿಧಿ ಅಡಿ ಇವರು ನೇಮಕವಾಗಿದ್ದಾರೆ. 46 ಪಿಎಸ್‌ಐಗಳು ಹೈ.ಕ ಭಾಗದಲ್ಲಿಯೇ ಸೇವೆ ಸಲ್ಲಿಸಲಿದ್ದಾರೆ. ಅದರಂತೆ 36 ವೈರಲೆಸ್‌ ಪಿಎಸ್‌ಐಗಳಲ್ಲಿ 14 ಅಭ್ಯರ್ಥಿಗಳು ಹೈದ್ರಾಬಾದ ಕರ್ನಾಟಕದವರಾಗಿದ್ದಾರೆ. ಉಳಿದವರು ರಾಜ್ಯದ ಇತರ ಭಾಗದವರಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.