ಕೋವಿಡ್ ಲಸಿಕೆ ಪೂರೈಕೆ ಬಳಿಕ 18 ವರ್ಷ ಮೇಲ್ಪಟ್ಟವರಿಗೆ ನೀಡಿಕೆ
Team Udayavani, May 2, 2021, 7:17 PM IST
ಕಲಬುರಗಿ: ಈಗಾಗಲೇ ಆದೇಶಿಸಿರುವಂತೆಎರಡು ಕೋಟಿ ಕೋವಿಡ್ ಲಸಿಕೆ ರಾಜ್ಯಕ್ಕೆಪೂರೈಕೆಯಾದ ಕೂಡಲೇ 18 ವರ್ಷ ಮೇಲ್ಪಟ್ಟವರಿಗೆವಿತರಿಸಲಾಗುತ್ತದೆ. ಆದರೆ ಲಸಿಕೆ ಯಾವಾಗಸಿಗಲಿದೆ ಎಂದು ಹೇಳಲಾಗಲ್ಲ. ಕಂಪನಿಗಳಉತ್ಪಾದನೆ-ಸರಬರಾಜು ನೋಡಿಕೊಂಡು ತಿಳಿಸಲಾಗುವುದು ಎಂದು ಆರೋಗ್ಯ ಮತ್ತುಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವಡಾ|ಕೆ.ಸುಧಾಕರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಸದ್ಯಕ್ಕೆ ಮೂರು ಲಕ್ಷ ಡೋಸ್ ಲಸಿಕೆದಾಸ್ತಾನು ಇದೆ. ರಾಜ್ಯಾದ್ಯಂತ ಆರು ಸಾವಿರ ಲಸಿಕಾಕೇಂದ್ರಗಳಿವೆ. ಎಲ್ಲ ಕೇಂದ್ರಗಳಿಗೆ ಕೊಡಬೇಕಾದರೂಆರು ಲಕ್ಷ ಡೋಸ್ ಅಗತ್ಯವಾಗುತ್ತದೆ ಎಂದರು.18ರಿಂದ 44 ವರ್ಷದೊಳಗಿನವರಿಗೆ ರಾಜ್ಯಸರ್ಕಾರದಿಂದ ನೀಡುವ ಲಸಿಕೆಗೆ ಶನಿವಾರ ಸಿಎಂಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆನೀಡಿದ್ದಾರೆ.
ಹೀಗಾಗಿ 45 ವರ್ಷ ಮೇಲ್ಪಟ್ಟವರಿಗೆಕೇಂದ್ರ ಸರ್ಕಾರ ನೀಡಿರುವ ಉಚಿತ ಲಸಿಕೆದುರುಪಯೋಗ ಆಗೋದಿಲ್ಲ ಎಂದು ಹೇಳಿದರು.
ಮಾನ್ಯತೆ ರದ್ದು ಎಚ್ಚರಿಕೆ: ಕೊರೊನಾ ಸೋಂಕಿತರಚಿಕಿತ್ಸೆಗಾಗಿ ನೀಡಲಾಗುವ ರೆಮ್ಡೆಸಿವಿಯರ್ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸಿ ಜೈಲಿಗೆ ಹಾಕಲಾಗುತ್ತದೆ.
ಖಾಸಗಿ ಆಸ್ಪತ್ರೆಗಳುಅಗತ್ಯವಿದ್ದಲ್ಲಿ ಮಾತ್ರ ರೆಮ್ಡೆಸಿವಿಯರ್ ಇಂಜೆಕ್ಷನ್ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಅದರಂತೆಬಳಕೆ ಮಾಡಿ ಪ್ರಮಾಣ ಪತ್ರ ಸಲ್ಲಿಸಬೇಕು. ಒಂದುವೇಳೆ ಹೆಚ್ಚಿನ ಸಂಖ್ಯೆಯಲ್ಲಿ ತೆಗೆದುಕೊಂಡರೆ ಅಥವಾಆಸ್ಪತ್ರೆಯ ಯಾವುದೇ ಸಿಬ್ಬಂದಿ ರೆಮ್ಡೆಸಿವಿಯರ್ದುರ್ಬಳಕೆ ಮಾಡಿಕೊಂಡರೆ ಆಸ್ಪತ್ರೆ ಮಾನ್ಯತೆರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಕಳೆದ ವರ್ಷ ರಾಜ್ಯದಲ್ಲಿ 11ಲಕ್ಷ ಜನರುಕೊರೊನಾದಿಂದ ಗುಣಮುಖರಾಗಿದ್ದಾರೆ. ಆದರೆಯಾರೊಬ್ಬರಿಗೂ ರೆಮ್ಡೆಸಿವಿಯರ್ ಇಂಜೆಕ್ಷನ್ನೀಡಿಲ್ಲ. ಆದರೆ ಈ ಬಾರಿ ರೆಮ್ಡಿಸಿವಿಯರ್ ಬಗ್ಗೆಅನಗತ್ಯವಾಗಿ ಬೇಡಿಕೆ ಸೃಷ್ಟಿಸಲಾಗುತ್ತಿದೆ. ಇದನ್ನುಆಸ್ಪತ್ರೆಗಳು-ರೋಗಿಗಳು ಅರಿಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್