ಗಾಂಧೀಜಿ-ಶಾಸ್ತ್ರೀ ತತ್ವ ಅಭಿವೃದ್ಧಿಗೆ ಪೂರಕ
Team Udayavani, Oct 3, 2017, 10:12 AM IST
ಕಲಬುರಗಿ: ರಾಷ್ಟ್ರಪೀತ ಮಹಾತ್ಮಾಗಾಂಧೀಜಿ ಶಾಂತಿ, ಅಹಿಂಸಾ ಮಾರ್ಗ ಹಾಗೂ ಲಾಲ ಬಹಾದ್ದೂರ ಶಾಸ್ತ್ರೀ ಅವರ ಪ್ರಮಾಣೀಕತೆ, ಸರಳತೆ ಗುಣಗಳನ್ನು ನಾವು ಜೀವನುದ್ದಕ್ಕೂ ಅಳವಡಿಸಿಕೊಂಡರೆ ಯಶಸ್ಸು ಹೊಂದುವುದು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ನರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಹಾಗೂ ಭಾರತ ಸೇವಾ ದಳದ ಸಂಯುಕ್ತ ಆಶ್ರಯದಲ್ಲಿ ಗಾಂಧೀಜಿ ಜಯಂತಿ ಅಂಗವಾಗಿ ನಗರದ ಸರ್ವಧರ್ಮ ಪ್ರಾರ್ಥನೆ,
ಸದ್ಭಾವನಾ ಗೀತ ಗಾಯನ ಹಾಗೂ ಕರ್ನಾಟಕದಲ್ಲಿ ಗಾಂಧೀಜಿ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಸತ್ಯ, ಅಹಿಂಸೆ, ಜನಾಂದೋಲನ ಚಳವಳಿ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟು, ಇಡೀ ಮಾನವಕುಲಕ್ಕೆ ಶಾಂತಿ ಸಂದೇಶ ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧಿಧೀಜಿ ಮಹಾನ ಪುರುಷರಾಗಿದ್ದಾರೆ. ಇಡೀ ದೇಶ ಶ್ರದ್ಧಾ ಭಕ್ತಿಯಿಂದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ ಶಾಸ್ತ್ರೀ ಅವರ ಜಯಂತಿ ಆಚರಿಸುತ್ತಿದೆ. ಇಡೀ
ವಿಶ್ವದಲ್ಲಿ ಅಹಿಂಸೆ ಮೂಲಕ ಸ್ವಾತಂತ್ರ್ಯ ಪಡೆದ ದೇಶ ಭಾರತವಾಗಿದ್ದು, ಗಾಂಧೀಜಿ ಅವರ ಅಹಿಂಸಾ ತತ್ವವೇ ಇದಕ್ಕೆ ಮೂಲ ಕಾರಣವಾಗಿದೆ. ಸ್ವಾತಂತ್ರ್ಯ ಸಮಯದಲ್ಲಿ ಅವರ ಮಾತಿಗೆ ಇಡೀ ದೇಶ ಜನರು ಬೆಂಬಲ ನೀಡಿ ಅವರ ಮಾರ್ಗದರ್ಶನದಲ್ಲಿ ನಡೆದಿದ್ದನ್ನು ಸಚಿವರು ಸ್ಮರಿಸಿದರಲ್ಲದೇ ಲಾಲ ಬಹಾದ್ದೂರ ಶಾಸ್ತ್ರೀ, ಮಹಾತ್ಮ ಗಾಂಧೀಜಿ ಸೇರಿದಂತೆ ಮಹಾನ್ ಪುರುಷರ ಜೀವನವನ್ನು ಇಂದಿನ ಯುವ ಪೀಳಿಗೆ ಅಧ್ಯಯನ ಮಾಡುವುದರೊಂದಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಶ್ರೀಶೈಲಂ ಸಾರಂಗಮಠದ ಡಾ|ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು, ಮಹ್ಮದ್ ಜಾವೀದ್ ಆಲಂ ಖಾಸ್ಮಿ, ಪೂಜ್ಯ ಸಂಗಾನಂದ ಭಂತೇಜಿ ಹಾಗೂ ಸೆಂಟ್ ಮೇರಿಚರ್ಚ್ ಫಾದರ್ ಸ್ಟ್ಯಾನಿ ಅವರು ಧಾರ್ಮಿಕ ಪಠಣ ಮಾಡಿದರು.
ಇದೇ ಸಂದರ್ಭದಲ್ಲಿ ಗಾಂಧಿಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತಂದ ಜನಪದ, ಮಾರ್ಚ್ ಆಫ್ ಕರ್ನಾಟಕ ವಿಶೇಷ ಸಂಚಿಕೆ ಸಹ ಬಿಡುಗಡೆಗೊಳಿಸಿದರು.
ಕಲಾವಿದ ಸಿದ್ರಾಮಪ್ಪ ಪೊಲೀಸ್ಪಾಟೀಲ, ನಿವೃತ್ತ ವಾರ್ತಾಧಿಕಾರಿ ಜಿ. ಚಂದ್ರಕಾಂತ ಹಾಗೂ ಭಾರತ ಸೇವಾದಳದಿಂದ ಸರ್ವಧರ್ಮ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮ ಕೊನೆಯಲ್ಲಿ ರಘುಪತಿ ರಾಘವಗಾಂಧಿ ಭಜನೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕೊನೆಗೊಂಡಿತು. ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕದಲ್ಲಿ ಗಾಂಧೀಜಿ ಕುರಿತ ಅಪೂರ್ವ ಛಾಯಚಿತ್ರ ಪ್ರದರ್ಶನ ಉದ್ಘಾಟಿಸಿದರು.
ಮಹಾಪೌರ ಶರಣ ಕುಮಾರ ಮೋದಿ, ಆಯುಕ್ತ ಪಿ. ಸುನೀಲ ಕುಮಾರ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಶಶೀಲ ಜಿ.ನಮೋಶಿ, ಸಹಾಯಕ ಆಯುಕ್ತ ರಾಚಪ್ಪ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಭಾರತ ಸೇವಾದಳದ ಕಾರ್ಯದರ್ಶಿ ಶಿವಲಿಂಗಪ್ಪ ಗೌಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅನೇಕ ಗಣ್ಯರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಹಶೀಲ್ದಾರ ದಯಾನಂದ ಪಾಟೀಲ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ